ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಗೆಳತಿಯ ಭೇಟಿಗಾಗಿ ಇಡೀ ಗ್ರಾಮಕ್ಕೆ ಪವರ್ ಕಟ್ ಮಾಡ್ತಿದ್ದ ಇಲೆಕ್ಟ್ರಿಷಿಯನ್

Twitter
Facebook
LinkedIn
WhatsApp
ಗೆಳತಿಯ ಭೇಟಿಗಾಗಿ ಇಡೀ ಗ್ರಾಮಕ್ಕೆ ಪವರ್ ಕಟ್ ಮಾಡ್ತಿದ್ದ ಇಲೆಕ್ಟ್ರಿಷಿಯನ್

ಬಿಹಾರ: ಪ್ರೀತಿಯಲ್ಲಿ ಬಿದ್ದವರು ಹುಚ್ಚರಾಗಿರುತ್ತಾರೆ ಎಂಬ ಮಾತುಗಳನ್ನು ನಾವು ನೀವು ಆಗಾಗ ಕೇಳಿರುತ್ತೇವೆ. ಆದರೆ ಈ ಮಾತನ್ನು ಅಕ್ಷರಶಃ ಸಾಬೀತುಪಡಿಸುವ ಘಟನೆಯೊಂದು ಬಿಹಾರದಲ್ಲಿ(Bihar) ನಡೆದಿದೆ. ಪ್ರೇಮಿಯೊಬ್ಬ ತನ್ನ ಪ್ರೇಯಸಿಯನ್ನು ಭೇಟಿಯಾಗುವ ಸಲುವಾಗಿ ಇಡೀ ಗ್ರಾಮವನ್ನೇ ಕತ್ತಲಲ್ಲಿರಿಸಿದ್ದಾನೆ. ಬಿಹಾರದ ಪೂರ್ಣಿಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಬಹುಶಃ ಈ ಇಲೆಕ್ಟ್ರಿಷಿಯನ್ ಒಂದು ಸಲ ಹೀಗೆ ಮಾಡಿದರೆ ಸಿಕ್ಕಿ ಬೀಳುತ್ತಿರಲಿಲ್ಲವೇನೋ ಆದರೆ ಈತ ಇದೇ ಆಟವನ್ನು ಮತ್ತೆ ಮತ್ತೆ ಆಡಿದ್ದಾನೆ. ಇದರಿಂದ ಪೂರ್ಣಿಮಾ (Purnia) ಜಿಲ್ಲೆಯ ಗಣೇಶ್‌ಪುರ (Ganeshpura) ಗ್ರಾಮದ ಜನ ಕತ್ತಲಲ್ಲಿ ಪರದಾಡುವಂತಾಗಿತ್ತು. ಕಳೆದ ನಾಲ್ಕು ತಿಂಗಳಿನಿಂದಲೂ ಗ್ರಾಮದಲ್ಲಿ ಇದೇ ಪರಿಸ್ಥಿತಿ ಇತ್ತು ಎಂದು ಗ್ರಾಮಸ್ಥರು ದೂರಿದ್ದಾರೆ.

ಈ ಮಧ್ಯೆ ಪಕ್ಕದ ಗ್ರಾಮದಲ್ಲಿ ಈ ರೀತಿ ವಿದ್ಯುತ್ ಆಗಾಗ ಕೈ ಕೊಡುವ ಯಾವ ಸಮಸ್ಯೆಯೂ ಇಲ್ಲ ಎಂಬುದು ತಿಳಿದು ಬಂದಿದೆ. ಹೀಗಾಗಿ ನಮ್ಮ ಗ್ರಾಮದಲ್ಲಿ ಮಾತ್ರ ಏಕೆ ಈ ಸಮಸ್ಯೆ ಎಂದು ಚರ್ಚಿಸಲು ಶುರು ಮಾಡಿ ನಿಜವಾದ ಕಾರಣ ತಿಳಿಯಲು ಹೊರಟ ಗ್ರಾಮಸ್ಥರಿಗೆ ಕೊನೆಗೂ ತಮ್ಮ ಗ್ರಾಮವನ್ನು ಕತ್ತಲಲ್ಲಿಟ್ಟಿರುವುದು ಓರ್ವ ಇಲೆಕ್ಟ್ರಿಷಿಯನ್ (electrician) ಎಂಬುದು ಅರಿವಿಗೆ ಬಂದು ಶಾಕ್‌ಗೆ ಒಳಗಾಗಿದ್ದಾರೆ. ನಂತರ ಸತ್ಯದ ಅರಿವಾದ ಗ್ರಾಮಸ್ಥರು ಈತ ಏಕೆ ಇಡೀ ಗ್ರಾಮಕ್ಕೆ ಆಗಾಗ ವಿದ್ಯುತ್‌ ಕಡಿತಗೊಳಿಸುತ್ತಿದ್ದಾನೆ ಎಂಬುದನ್ನು ತಿಳಿಯಲು ಅವನನ್ನು ಹಿಂಬಾಲಿಸಿ ರೆಡ್‌ ಹ್ಯಾಂಡ್ (Red-hand)ಆಗಿ ಹಿಡಿಯಲು ಪ್ಲಾನ್ ಮಾಡಿದ್ದಾರೆ. ಹಾಗೆಯೇ ಗ್ರಾಮದಲ್ಲಿ ವಿದ್ಯುತ್ ಕಡಿತಗೊಂಡಂತೆ (Power Cut) ಗ್ರಾಮಸ್ಥರು ಈತನ ಹಿಂದೆ ಬಿದ್ದಿದ್ದು ಈತ ಎಲ್ಲಿ ಹೋಗುತ್ತಾನೆ ಎಂದು ಹಿಂಬಾಲಿಸಿದ್ದಾರೆ. ಈ ವೇಳೆ ಗ್ರಾಮದ ಶಾಲೆಯೊಂದರಲ್ಲಿ ಈತ ತನ್ನ ಗೆಳತಿಯೊಂದಿಗೆ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದಿದ್ದಾನೆ.

ಕೇವಲ ತನ್ನ ಹುಚ್ಚಿಗೆ ಇಡೀ ಗ್ರಾಮವನ್ನೇ ಕತ್ತಲಲ್ಲಿಟ್ಟು ತೊಂದರೆಗೀಡು ಮಾಡುತ್ತಿದ್ದ ಇಲೆಕ್ಟ್ರಿಷಿಯನ್‌ ವರ್ತನೆಯಿಂದ ಸಿಟ್ಟುಗೊಂಡ ಗ್ರಾಮದ ಜನ ಸಿಕ್ಕಿಬಿದ್ದ ಆತನಿಗೆ ಚೆನ್ನಾಗಿ ಬಾರಿಸಿದ್ದಾರೆ. ಅಲ್ಲದೇ ಗ್ರಾಮದಲ್ಲಿ ಆತನ ಮೆರವಣಿಗೆ ಮಾಡಿದ್ದಾರೆ. ಬರೀ ಇಷ್ಟೇ ಅಲ್ಲ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಮುಂದಾದ ಗ್ರಾಮಸ್ಥರು ಸರಪಂಚ್ ಹಾಗೂ ಇತರ ಗ್ರಾಮಸಭೆ ಸದಸ್ಯರ ಸಮ್ಮುಖದಲ್ಲಿ ಆತನ ಗೆಳತಿಯೊಂದಿಗೆ ಆತನಿಗೆ ವಿವಾಹವನ್ನು ಮಾಡಿದ್ದಾರೆ.

ತನ್ನ ಗೆಳತಿಯ ಭೇಟಿಗಾಗಿ ಇಡೀ ಗ್ರಾಮಕ್ಕೆ ವಿದ್ಯುತ್ ಕಡಿತಗೊಳಿಸುತ್ತಿದ್ದ ಇಲೆಕ್ಟ್ರಿಷಿಯನ್‌ ಗ್ರಾಮದ ಸರಪಂಚ್ ಹಾಗೂ ಗ್ರಾಮ ಪಂಚಾಯತ್‌ನ ಸದಸ್ಯರ ಸಮ್ಮುಖದಲ್ಲಿ ತನ್ನ ಗೆಳತಿಯನ್ನು ಮದುವೆಯಾಗಿದ್ದಾನೆ ಎಂದು ಗ್ರಾಮಸ್ಥ ಮಾರಾರ್ ರಾಮ್ ಮುರ್ಮು ಗುರುವಾರ ಸ್ಥಳೀಯ ಮಾಧ್ಯಮಕ್ಕೆ ತಿಳಿಸಿದ್ದಾರೆ. ಈ ಬಗ್ಗೆ ಗ್ರಾಮಸ್ಥರು ಎಲೆಕ್ಟ್ರಿಷಿಯನ್ ವಿರುದ್ಧ ಯಾವುದೇ ಪೊಲೀಸ್ ಕೇಸ್ ದಾಖಲಿಸಿಲ್ಲ ಮತ್ತು ದೂರು ಬಂದರೆ ಮಾತ್ರ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist