ಶನಿವಾರ, ಮೇ 4, 2024
ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!-ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗೆಳೆಯರ ಬಳಗ ಸೇವಾ ಸಂಸ್ಥೆ ನೈನಾಡು ವತಿಯಿಂದ ಗೆಳೆಯರೇ ಸೇರಿ ನಿರ್ಮಿಸಿದ ಪಾರ್ಕ್ ಲೋಕಾರ್ಪಣೆ.

Twitter
Facebook
LinkedIn
WhatsApp
ಗೆಳೆಯರ ಬಳಗ ಸೇವಾ ಸಂಸ್ಥೆ ನೈನಾಡು ವತಿಯಿಂದ ಗೆಳೆಯರೇ ಸೇರಿ ನಿರ್ಮಿಸಿದ ಪಾರ್ಕ್ ಲೋಕಾರ್ಪಣೆ.

ಗೆಳೆಯರ ಬಳಗ ಸೇವಾ ಸಂಸ್ಥೆಯ ವತಿಯಿಂದ ಪಿಲಾತಬೆಟ್ಟು ಗ್ರಾಮದ ಕೊಳಕ್ಕೆ ಬೈಲು ಎಂಬಲ್ಲಿ ನಿರ್ಮಿಸಿದ ಮಕ್ಕಳ ಉದ್ಯಾನವನದ ಉದ್ಘಾಟನೆಯನ್ನು ಸ್ಥಳ ದಾನಿಗಳಾದ ಮ್ಯಾಕ್ಸಿಮ್ ರೋಡ್ರಿಗಸ್ ಮತ್ತು ಲ್ಯಾನ್ಸಿ ರೋಡ್ರಿಗಸ್ ಇವರು ನೆರವೇರಿಸಿದರು. ಇದೇ ಸಂದರ್ಭದಲ್ಲಿ ಸಸಿಯನ್ನು ನೆಡುವುದರ ಮೂಲಕ ಗೆಳೆಯರ ಬಳಗ ಸೇವಾ ಸಂಸ್ಥೆಯ ಅಧಿಕೃತ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಅಧಿಕಾರಿಗಳಾದ ಶ್ರೀಮತಿ ಸೌಮ್ಯ ಜೆ ಡಿಜಿಟಲ್‌ ಯುಗದಲ್ಲಿ ಕಳೆದುಹೋಗುತ್ತಿರುವ ಮಕ್ಕಳ ಬಾಲ್ಯವನ್ನು ಉಳಿಸಲು ಉದ್ಯಾನವನದ ಮಹತ್ವವನ್ನು ತಿಳಿಸಿ ಶುಭಕೋರಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಬಂಟ್ವಾಳ ತಾಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಶ್ರೀ ಜೊಯೆಲ್ ಲೋಬೊರವರು ಸಂಘಕ್ಕೆ ಶುಭಕೋರಿ, ಸಂಘದ ಕಾರ್ಯಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿ ಸ್ಥಳೀಯರ ಪರವಾಗಿ ಸಂಘದ ನಿರ್ದೇಶಕರಿಗೆ ಶಾಲು ಹೊದಿಸಿ ಸನ್ಮಾನಿಸಿದರು. .

ಈ ಸಂದರ್ಭದಲ್ಲಿ ದೀಪ ಬೆಳಗಿಸಿ ಸಾಂಕೇತಿಕವಾಗಿ ದೀಪಾವಳಿ ಹಬ್ಬವನ್ನು ಆಚರಿಸಲಾಯಿತು . ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ಥಳೀಯ ಸಂತ ಫ್ರಾನ್ಸಿಸ್ ಅಸಿಸಿ ಚರ್ಚಿನ ಧರ್ಮಗುರುಗಳಾದ ವಂದನೀಯ ಫಾದರ್ ರೊಕ್ಕಿ ರವಿ ಫರ್ನಾಂಡಿಸ್ ಅವರು ವಹಿಸಿ ಆಶೀರ್ವಚನ ನೀಡಿದರು. ಬೆಳ್ತಂಗಡಿ ತಾಲೂಕು ಸೇವಾದಳದ ಅಧ್ಯಕ್ಷರಾದ ಶ್ರೀ ಫ್ರಾನ್ಸಿಸ್ ವಿ ವಿ ,ಪಿಲಾತಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಹರ್ಷಿಣಿ ಪುಷ್ಪಾನಂದ, ಉಪಾಧ್ಯಕ್ಷರಾದ ಶ್ರೀ ಲಕ್ಷ್ಮೀನಾರಾಯಣ ಹೆಗಡೆ, ಪಿಲಾತಬೆಟ್ಟು ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಲಕ್ಷ್ಮೀನಾರಾಯಣ ಉಡುಪ, ಪಿಂಟೋ ಬೇಕರಿ ನಯನಾಡು ಇದರ ಮಾಲೀಕರಾದ ಶ್ರೀ ಸಿಲ್ವೆಸ್ಟರ್ ಪಿಂಟೊ, ಇರ್ವತ್ತೂರು ಗ್ರಾಮ ಪಂಚಾಯತ್ ಪಿಡಿಒ ಶ್ರೀ ಪ್ರಶಾಂತ್ ಜೋಯೆಲ್, ಶ್ರೀ ಮಂಜಪ್ಪ ಮೂಲ್ಯ , ಪಂಚಾಯತ್ ಸದಸ್ಯರಾದ ಶ್ರೀ ನೆಲ್ವಿಸ್ಟರ್ ಪಿಂಟೊ, ಶ್ರೀಮತಿ ಪುಷ್ಪಲತಾ, ಶ್ರೀಮತಿ ಲೀಲಾವತಿ, ಗೆಳೆಯರ ಬಳಗದ ಸಂಚಾಲಕರಾದ ಶ್ರೀ ಏಲಿಯಾಸ್ ಕ್ರಾಸ್ತ ಮುಂತಾದವರು ಉಪಸ್ಥಿತರಿದ್ದು ಶುಭ ಕೋರಿದರು.ಸಂಘದ ನಿರ್ದೇಶಕರಾದ ಶ್ರೀ ವಿನ್ಸೆಂಟ್ ಫೆರ್ನಾಂಡಿಸ್ ವರದಿ ವಾಚಿಸಿದರು. ಗೆಳೆಯರ ಬಳಗ ಸೇವಾ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಡಾನ್ ಪ್ರವೀನ್ ಕ್ರಾಸ್ತ ಸ್ವಾಗತಿಸಿ ರೀವನ್ ಲೋಬೊರವರು ವಂದಿಸಿದರು. ಎಮರ್ಸನ್ ಕ್ರಾಸ್ತ ಕಾರ್ಯಕ್ರಮ ನಿರ್ವಹಿಸಿದರು

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು