ಸೋಮವಾರ, ಏಪ್ರಿಲ್ 29, 2024
ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗ್ಯಾಂಗ್‌ಸ್ಟರ್ ಮೇಲೆ ದಾಳಿ: ಮಗಳನ್ನು ಕೋಚಿಂಗ್‌ಗೆ ಕರೆದೊಯ್ಯುತ್ತಿದ್ದ ವ್ಯಕ್ತಿ ಸಾವು

Twitter
Facebook
LinkedIn
WhatsApp
ಗ್ಯಾಂಗ್‌ಸ್ಟರ್ ಮೇಲೆ ದಾಳಿ: ಮಗಳನ್ನು ಕೋಚಿಂಗ್‌ಗೆ ಕರೆದೊಯ್ಯುತ್ತಿದ್ದ ವ್ಯಕ್ತಿ ಸಾವು

ಜೈಪುರ: ರಾಜಸ್ಥಾನದಲ್ಲಿ ಶನಿವಾರ ನಡೆದ ಗ್ಯಾಂಗ್‌ವಾರ್‌ನಲ್ಲಿ ಒಬ್ಬ ನಟೋರಿಯಸ್ ಗ್ಯಾಂಗ್‌ಸ್ಟರ್‌ ಸೇರಿದಂತೆ ಗುಂಡೇಟಿಗೆ ಇಬ್ಬರು ಮೃತಪಟ್ಟಿದ್ದಾರೆ. ಇನ್ನೊಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಿಕಾರ್ ನಗರದ ಪಿಪ್ರಾಲಿ ರಸ್ತೆಯಲ್ಲಿನ ಗ್ಯಾಂಗ್‌ಸ್ಟರ್ ರಾಜು ತೇಥ್‌ನ ನಿವಾಸದ ಪ್ರವೇಶ ಭಾಗದಲ್ಲಿ ನಾಲ್ವರ ಗುಂಪು ಆತನ ಮೇಲೆ ಗುಂಡಿನ ದಾಳಿ ನಡೆಸಿದೆ. ಶನಿವಾರ ಬೆಳಿಗ್ಗೆ 9.30ರ ವೇಳೆಗೆ ಈ ಘಟನೆ ನಡೆದಿದೆ. ದಾಳಿ ನಡೆಸಿದ ಹಂತಕರನ್ನು ಗುರುತಿಸಲಾಗಿದ್ದು, ಅವರನ್ನು ಬಂಧಿಸಲು ರಾಜ್ಯವ್ಯಾಪಿ ಹುಡುಕಾಟ ನಡೆಸಲಾಗಿದೆ ಎಂದು ರಾಜಸ್ಥಾನ ಪೊಲೀಸರು ಹೇಳಿದ್ದಾರೆ.

ಆದರೆ ಈ ದಾಳಿಯಲ್ಲಿ ಅಮಾಯಕರೊಬ್ಬರು ಬಲಿಯಾಗಿದ್ದಾರೆ. ಕೋಚಿಂಗ್ ಸೆಂಟರ್ ಒಂದಕ್ಕೆ ತಮ್ಮ ಮಗಳನ್ನು ದಾಖಲಾತಿ ಮಾಡಲು ಈ ಪ್ರದೇಶಕ್ಕೆ ತೆರಳಿದ್ದ ತಾರಾಚಂದ್ ಕಡ್ವಸರಾ ಎಂಬುವವರು ಕೂಡ ಗುಂಡು ತಗುಲಿ ಮೃತಪಟ್ಟಿದ್ದಾರೆ. ಅವರ ಸಂಬಂಧಿ ಸಹ ಗುಂಡೇಟಿಗೆ ಗಾಯಗೊಂಡಿದ್ದಾರೆ.

ಅನೇಕ ಹಾಸ್ಟೆಲ್‌ಗಳು ಮತ್ತು ಕೋಚಿಂಗ್ ಕೇಂದ್ರಗಳು ಇರುವ ಸ್ಥಳದಲ್ಲಿ ಈ ದುಷ್ಕೃತ್ಯ ನಡೆದಿದೆ. ಗ್ಯಾಂಗ್‌ಸ್ಟರ್ ತೇಥ್‌ನ ಸಹೋದರ ಕೂಡ ಇಲ್ಲಿ ಒಂದು ಹಾಸ್ಟೆಲ್ ನಡೆಸುತ್ತಿದ್ದಾನೆ ಎನ್ನಲಾಗಿದೆ.

ತೇಥ್‌ನ ದೇಹಕ್ಕೆ ಮೂರು ಗುಂಡುಗಳು ಹೊಕ್ಕಿದ್ದರಿಂದ ತೀವ್ರ ಗಾಯಗೊಂಡು ಆತ ಕೊನೆಯುಸಿರೆಳೆದಿದ್ದಾನೆ. ಆತನಿಗೆ ರಾಜ್ಯದ ಶೆಖಾವತಿ ಪ್ರದೇಶದಲ್ಲಿನ ಮತ್ತೊಂದು ಗ್ಯಾಂಗ್ ಜತೆ ವೈರತ್ವವಿತ್ತು.

ಸಿಸಿಟವಿ ಕ್ಯಾಮೆರಾದಲ್ಲಿ ಹಲವು ವಿಡಿಯೋಗಳು ದಾಖಲಾಗಿದ್ದು, ಬೀದಿಯಲ್ಲಿ ನಾಲ್ವರು ಆರೋಪಿಗಳು ತೇಥ್ ಮೇಲೆ ಗುಂಡಿನ ದಾಳಿ ನಡೆಸಿ, ಸ್ಥಳದಿಂದ ಪರಾರಿಯಾಗುವುದು ಕಾಣಿಸಿದೆ. ದಾರಿಹೋಕರು ಮತ್ತು ಪ್ರತ್ಯಕ್ಷದರ್ಶಿಗಳನ್ನು ಬೆದರಿಸಲು ಅವರಲ್ಲಿ ಒಬ್ಬಾತ ಗಾಳಿಯಲ್ಲಿ ಗುಂಡು ಹಾರಿಸಿದ್ದಾನೆ.

ಹತ್ಯೆ ನಡೆದ ಕೆಲವೇ ಸಮಯದಲ್ಲಿ ಲಾರೆನ್ಸ್ ಬಿಶ್ನೋಯಿ ಗ್ಯಾಂಗ್‌ನ ಸದಸ್ಯ ಎಂದು ಹೇಳಿಕೊಂಡ ರೋಹಿತ್ ಗೊಡಾರಾ ಎಂಬಾತ ಫೇಸ್‌ಬುಕ್‌ನಲ್ಲಿ ಇದಕ್ಕೆ ತಾನೇ ಹೊಣೆಗಾರ ಎಂದು ಹೇಳಿಕೊಂಡಿದ್ದಾನೆ. ಆನಂದ್‌ಪಾಲ್ ಸಿಂಗ್ ಮತ್ತು ಬಲ್ಬೀರ್ ಬನೂಡಾ ಅವರ ಹತ್ಯೆಗೆ ತೇಥ್ ಕೊಲೆ ಪ್ರತೀಕಾರವಾಗಿದೆ ಎಂದು ಆತ ಹೇಳಿದ್ದಾನೆ.

ಬಲ್ಬೀರ್ ಬನೂಡಾ, ಆನಂದ್‌ಪಾಲ್ ಸಿಂಗ್ ಗ್ಯಾಂಗ್‌ನ ಸದಸ್ಯನಾಗಿದ್ದು, 2014ರ ಜುಲೈನಲ್ಲಿ ಬಿಕಾನೇರ್‌ನಲ್ಲಿ ನಡೆದ ಗ್ಯಾಂಗ್‌ವಾರ್‌ನಲ್ಲಿ ಹತ್ಯೆಯಾಗಿದ್ದ. ತೇಥ್‌ನ ಬೆಂಬಲಿಗರು ಸಿಕಾರ್‌ನಲ್ಲಿ ಬಂದ್‌ಗೆ ಕರೆ ನೀಡಿದ್ದು, ಹಂತಕರನ್ನು ಶೀಘ್ರವೇ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ