ನವದೆಹಲಿ: ರಾಷ್ಟ್ರ ರಾಜಧಾನಿಯ ಮತ್ತೊಂದು ಆಘಾತಕಾರಿ ಘಟನೆ ನಡೆದಿದ್ದು, ಶನಿವಾರ ತಡರಾತ್ರಿ ದೆಹಲಿಯ ವಸಂತ್ ವಿಹಾರ್ ಪ್ರದೇಶದಲ್ಲಿನ ಅಪಾರ್ಟ್ಮೆಂಟ್ನಲ್ಲಿ ಒಂದೇ ಕುಟುಂಬದ ಮೂವರು ಸದಸ್ಯರು ಶವವಾಗಿ ಪತ್ತೆಯಾಗಿದ್ದಾರೆ.
ಮಂಜು (54) ಮಹಿಳೆ ಮತ್ತು ಅವರ ಇಬ್ಬರು ಪುತ್ರಿಯರಾದ ಅಂಶಿಕಾ (27) ಮತ್ತು ಅಂಕು (25) ಅವರು ತಮ್ಮ ಮನೆಯೊಳಗೆ ಗ್ಯಾಸ್ನ ವಿಷಕಾರಿ ಹೊಗೆಯನ್ನು ಸೇವಿಸಿ ಸಾವನ್ನಪ್ಪಿದ್ದಾರೆ. ಶನಿವಾರ ರಾತ್ರಿ 8.55ಕ್ಕೆ ವಸಂತ ವಿಹಾರ್ನಲ್ಲಿರುವ ವಸಂತ ಅಪಾರ್ಟ್ಮೆಂಟ್ನ ಫ್ಲಾಟ್ ಸಂಖ್ಯೆ 207 ಒಳಗಿನಿಂದ ಬೀಗ ಹಾಕಲ್ಪಟ್ಟಿದೆ. ಮನೆಯಲ್ಲಿರುವ ಯಾರು ಪ್ರತಿಕ್ರಿಯಿಸುತ್ತಿಲ್ಲ ಎಂದು ಸ್ಥಳೀಯರು ಪೊಲೀಸರಿಗೆ ಮಾಹಿತಿ ಕೊಟ್ಟಿದ್ದಾರೆ. ಈ ಹಿನ್ನೆಲೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಪ್ರಕರಣ ಬೆಳಕಿಗೆ ಬಂದಿದೆ.
ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ನೋಡಿದಾಗ ಎಲ್ಲ ಕಡೆಯಿಂದ ಬಾಗಿಲು ಮತ್ತು ಕಿಟಕಿ ಮುಚ್ಚಿರುವುದು ಕಂಡುಬಂದಿದೆ. ಈ ಹಿನ್ನೆಲೆ ಪೊಲೀಸರು ಬಾಗಿಲು ಒಡೆದು ತೆಗೆದಿದ್ದಾರೆ. ಈ ವೇಳೆ ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ನ್ನು ಹೊರತೆಗೆಯಲಾಗಿದೆ. ರೂಮ್ನಲ್ಲಿ ಪರಿಶೀಲಿಸಿದಾಗ, ಮೂರು ಶವಗಳು ಹಾಸಿಗೆಯ ಮೇಲೆ ಕಂಡುಬಂದಿದೆ. ಅಷ್ಟೇ ಅಲ್ಲದೇ ಈ ವೇಳೆ ಆತ್ಮಹತ್ಯೆ ಪತ್ರವೂ ಇತ್ತು. ಈ ಹಿನ್ನೆಲೆ ಇದು ಆಕಸ್ಮಿಕವಲ್ಲ, ಆತ್ಮಹತ್ಯೆ ಎಂದು ಶಂಕಿಸಲಾಗಿದೆ ಎಂದು ಉಪ ಪೊಲೀಸ್ ಆಯುಕ್ತ(ನೈಋತ್ಯ) ಮನೋಜ್.ಸಿ ಹೇಳಿದರು.
ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:
ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?