ಬೆಂಗಳೂರು: ಕರ್ನಾಟಕದ ಗ್ರಾಮೀಣ ಭಾಗಗಳಲ್ಲಿ ಸಾಂಕ್ರಾಮಿಕ ರೋಗಗಳ ಹರಡುವಿಕೆಯನ್ನು ತಡೆಗಟ್ಟುವ ಉದ್ದೇಶದಿಂದ ರೋಟರಿ ಬೆಂಗಳೂರು ಹೈಗ್ರೌಂಡ್ಸ್, ಇನ್ಫೋಸಿಸ್ ಫೌಂಡೇಶನ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಸಿಎಸ್ಆರ್ ಯೋಜನೆ ಒದಗಿಸಿರುವ ಲ್ಯಾಬ್ ಬಿಲ್ಟ್ ಆನ್ ವೀಲ್ಸ್ – ಮೊಬೈಲ್ ಕ್ಲಿನಿಕ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೋಮವಾರ ಉದ್ಘಾಟಿಸಿದರು.
ನಾಲ್ಕು ಮೊಬೈಲ್ ಲ್ಯಾಬ್ಗಳಲ್ಲಿ ಕ್ಲಿನಿಕ್, ಔಷಧ, ಔಷಧ ಸಾಗಿಸಲು ರೆಫ್ರಿಜರೇಟರ್, ತುರ್ತು ಚಿಕಿತ್ಸೆ ವೇಳೆ ಆಮ್ಲಜನಕ, ಸಾಂಕ್ರಾಮಿಕ ರೋಗ ಪತ್ತೆ ಸೌಲಭ್ಯ, ಕನಿಷ್ಟ ಸರ್ಜರಿಗೆ ಪ್ರತ್ಯೇಕ ಹಾಸಿಗೆ ಹಾಗೂ ಯುಪಿಎಸ್’ನ್ನು ಅಳವಡಿಸಲಾಗಿದೆ.
ಮೊಬೈಲ್ ಕ್ಲಿನಿಕ್ ಉದ್ಘಾಟಿಸಿದ ಬಳಿಕ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ರಾಜ್ಯದಾದ್ಯಂತ ಲ್ಯಾಬ್ ಬಿಲ್ಟ್ ಆನ್ ವೀಲ್ಸ್ ಮೊಬೈಲ್ ಕ್ಲಿನಿಕ್ ಆರಂಭಿಸಲು ಸಂಘ ಸಂಸ್ಥೆಗಳು ರಾಜ್ಯ ಸರ್ಕಾರದೊಂದಿಗೆ ಕೈಜೋಡಿಸಬೇಕೆಂದು ಮನವಿ ಮಾಡಿಕೊಂಡರು.
ಈ ಬಾರಿಯ ಆಯವ್ಯಯದಲ್ಲಿ ಗಾಲಿಗಳ ಮೇಲೆ ಆಸ್ಪತ್ರೆಗೆ ಸರ್ಕಾರ ಅನುದಾನ ಮೀಸಲಿರಿಸಿದೆ. ಬಸ್ನಲ್ಲಿ ಪ್ರಯೋಗಾಲಯ ಹಾಗೂ ಆರೋಗ್ಯ ಸೇವಾ ಸೌಲಭ್ಯಗಳನ್ನು ನಾಲ್ಕು ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಅನುಷ್ಠಾನ ಮಾಡಲಾಗುವುದು. ಪ್ರಯೋಗ ಯಶಸ್ವಿಯಾದರೆ, ಇನ್ನುಳಿದ ಜಿಲ್ಲೆಗಳಿಗೂ ವಿಸ್ತರಣೆ ಮಾಡಬೇಕೆಂಬ ಚಿಂತನೆ ಇದೆ. ಆ ಸಂದರ್ಭದಲ್ಲಿ ನಮ್ಮೊಂದಿಗೆ ಕೈ ಜೋಡಿಸಿ ಎಂದು ವಿವಿಧ ಸಂಸ್ಥೆಗಳಿಗೆ ಮನವಿ ಮಾಡಿದರು.
ಇನ್ಫೋಸಿಸ್ ಫೌಂಡೇಶನ್ನ ಗ್ರೂಪ್ ಎಚ್ಆರ್ ಹೆಡ್ ಕ್ರಿಶ್ ಶಂಕರ್ ಮಾತನಾಡಿ, “ನಾವು ಕೆಲಸ ಮಾಡುವ ಪರಿಸರ ಮತ್ತು ಸಮುದಾಯಗಳ ಮೇಲೆ ಸಕಾರಾತ್ಮಕ ಪರಿಣಾಮ ಬೀರುವ ನಮ್ಮ ಜವಾಬ್ದಾರಿಯನ್ನು ನಾವು ಯಾವಾಗಲೂ ಸ್ವೀಕರಿಸಿದ್ದೇವೆ. ಇದು ಆ ಪ್ರಯತ್ನದ ನಿರಂತರ ಭಾಗವಾಗಿದೆ. ಇನ್ಫೋಸಿಸ್ ಫೌಂಡೇಶನ್ ಭಾರತದಲ್ಲಿನ ಹಿಂದುಳಿದ ಜನರಿಗೆ ಕೈಗೆಟುಕುವ, ಸಮಯಕ್ಕೆ ಸರಿಯಾಗಿ ಸ್ವಚ್ಛ, ನೈರ್ಮಲ್ಯ ಮತ್ತು ಸೂಕ್ತವಾದ ವೈದ್ಯಕೀಯ ಚಿಕಿತ್ಸೆ ಮತ್ತು ಆರೋಗ್ಯ ರಕ್ಷಣೆ ನೀಡುವುದನ್ನು ಖಚಿತಪಡಿಸುತ್ತದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?