ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಘಾಟಿ ರಸ್ತೆಗಳ ದುರಸ್ತಿಗೆ 200 ಕೋಟಿ ರೂ. ಬಿಡುಗಡೆ

Twitter
Facebook
LinkedIn
WhatsApp
ಘಾಟಿ ರಸ್ತೆಗಳ ದುರಸ್ತಿಗೆ 200 ಕೋಟಿ ರೂ. ಬಿಡುಗಡೆ

ಬೆಂಗಳೂರು: ಶಿರಾಡಿ, ಚಾರ್ಮಡಿ ಮತ್ತು ಆಗುಂಬೆ ಘಾಟಿ ರಸ್ತೆಗಳ ದುರಸ್ತಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ಅದಕ್ಕಾಗಿ ಸರ್ಕಾರ 200 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ ಸಚಿವ ಕೆ.ಗೋಪಾಲಯ್ಯ, ಹಾಸನ ಜಿಲ್ಲಾಧಿಕಾರಿ ಗಿರೀಶ್ ಮತ್ತು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಜತೆೆ ಸಭೆ ನಡೆಸಿದ ಸಚಿವರು, ಎಲ್ಲ ಘಾಟಿಗಳಲ್ಲಿನ ರಸ್ತೆಗಳ ಸ್ಥಿತಿ-ಗತಿ ಬಗ್ಗೆ ಹಾಗೂ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಕುರಿತು ಮಹತ್ವದ ಚರ್ಚೆ ನಡೆಸಿದ್ದು, ವಾರದೊಳಗೆ ತುರ್ತು ಕಾಮಗಾರಿ ಪೂರ್ಣಗೊಳ್ಳುವ ವಿಶ್ವಾಸ ವ್ಯಕ್ತಪಡಿಸಿದರು.

ಮಡಿಕೇರಿ, ಶಿರಾಡಿ ಘಾಟಿಯ ಎಲ್ಲ ಭಾಗದಲ್ಲೂ ಅತಿವೃಷ್ಟಿ ಹಾನಿಯ ವೀಕ್ಷಣೆ ಮಾಡಿದ್ದೇವೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಜತೆಗೂ ಸಭೆ ನಡೆಸಿದ್ದೇನೆ. ಶಿರಾಡಿ, ಚಾಮುಡಿ, ಆಗುಂಬೆ, ಮಾಲಾ, ಕೊಲ್ಲೂರು, ಸಂಪಾಜೆ, ಅರಬೈಲು, ಗೇರುಸೊಪ್ಪ ಘಾಟಿಗಳಲ್ಲಿ 63 ಕಡೆ ಭೂ ಕುಸಿತವಾಗಿತ್ತು. ಅದನ್ನು ದುರಸ್ತಿಪಡಿಸಿ ವಾಹನ ಸಂಚಾರಕ್ಕೆ ಮುಕ್ತ ಮಾಡಲಾಗಿದೆ ಎಂದು ಹೇಳಿದರು.

754 ಕೋಟಿ ರೂ. ಬೇಕು: ಅತಿವೃಷ್ಟಿಯಿಂದಾಗಿ 141 ಕಿ.ಮೀ. ರಾಜ್ಯ ಹೆದ್ದಾರಿ, 924 ಕಿ.ಮೀ. ಮುಖ್ಯ ರಸ್ತೆಗಳು, 357 ಅಡ್ಡ ಮೋರಿಗಳು, ಸಣ್ಣ ಸೇತುವೆಗಳು ಹಾಳಾಗಿವೆ. ಇದೆಲ್ಲವನ್ನೂ ದುರಸ್ತಿ ಮಾಡಲು 740 ಕೋಟಿ ರೂ. ಬೇಕಿದ್ದು, ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಸದ್ಯ 200 ಕೋಟಿ ರೂ. ಬಿಡುಗಡೆ ಆಗಿದ್ದು, ಅದರಲ್ಲಿ ಕೆಲಸ ನಡೆಯುತ್ತಿದೆ ಎಂದರು.

617 ಕಾಮಗಾರಿ ಪೂರ್ಣ: 2019ರಿಂದ ಸತತ ವಿಪರೀತ ಮಳೆಯಾಗುತ್ತಿದೆ. ಆಗ 669 ಕೋಟಿ ರೂ. ಬಿಡುಗಡೆ ಮಾಡಲಾಗಿತ್ತು. ಆ ಮೊತ್ತದಲ್ಲಿ ಕೈಗೊಂಡ 1248 ಕಾಮಗಾರಿಗಳಲ್ಲಿ 617 ಕಾಮಗಾರಿ ಪೂರ್ಣಗೊಂಡಿವೆ ಎಂದು ಮಾಹಿತಿ ನೀಡಿದರು.

ಶಿರಾಡಿಯಲ್ಲಿ ತಾತ್ಕಾಲಿಕ ವ್ಯವಸ್ಥೆ: ಶಿರಾಡಿ ಘಾಟಿ ಸಮಸ್ಯೆಯನ್ನು ತಾತ್ಕಾಲಿಕವಾಗಿ ಬಗೆಹರಿಸಿದ್ದೇವೆ. ಸಂಚಾರ ಬಂದ್ ಆಗುವುದಕ್ಕೆ ಅವಕಾಶ ಕೊಟ್ಟಿಲ್ಲ. ಕೆಲಸ ಪೂರ್ಣವಾದರೆ ಶಾಶ್ವತ ಪರಿಹಾರ ಸಿಗಲಿದ್ದು, ಮಾರ್ಚ್ ಒಳಗಾಗಿ ಕೆಲಸ ಮುಗಿಯುತ್ತದೆ. ಗುತ್ತಿಗೆದಾರರ ದಿವಾಳಿ ಆಗಿದ್ದಕ್ಕೆ ಅಲ್ಲಿ ಕೆಲಸ ವಿಳಂಬವಾಗಿತ್ತು ಎಂದು ಸಿ.ಸಿ.ಪಾಟೀಲ ಹೇಳಿದರು. ಮಡಿಕೇರಿ ಡಿಸಿ ಕಚೇರಿ ಬಳಿ ರಸ್ತೆಯ ತಡೆಗೋಡೆ ಸಮಸ್ಯೆ ಬಗ್ಗೆ ಕೇಂದ್ರ ತಂಡದ ಅಧಿಕಾರಿಗಳು ಭೇಟಿ ನೀಡಿ ಪರಿಹಾರ ಕ್ರಮ ಕೈಗೊಳ್ಳುತ್ತಿದ್ದಾರೆ. ನಾಳೆಯೊಳಗಾಗಿ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದರು.

ಸಂಪಾಜೆ ಘಾಟಿ ರಸ್ತೆ ಬಂದ್ ಮಾಡುವ ಅಗತ್ಯವಿಲ್ಲ ಅಂತ ಅಧಿಕಾರಿಗಳು ಹೇಳಿದ್ದಾರೆ. ಇಲಾಖಾ ಪ್ರಧಾನ ಕಾರ್ಯದರ್ಶಿ, ಮಡಿಕೇರಿ ಡಿಸಿ ಜತೆ ಮಾತನಾಡುತ್ತಾರೆ. ಬಂದ್ ಮಾಡುವಷ್ಟು ಅಗತ್ಯ ಇದೆಯೋ ಇಲ್ವೋ ನೋಡಿಕೊಂಡು ತೀರ್ಮಾನ ಮಾಡುತ್ತೇವೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ