ಗುರುವಾರ, ಮಾರ್ಚ್ 28, 2024
ಶಿವಸೇನೆ ಗೆ ಸೇರ್ಪಡೆಯಾದ ನಟ ಗೋವಿಂದ ; ಮುಂಬೈ ಕ್ಷೇತ್ರದಿಂದ ಸ್ಪರ್ಧೆ.?-ನಟಿ ಊರ್ಮಿಳಾ ಸಾಫ್ಟ್‌ ಪೋರ್ನ್‌ ಸ್ಟಾರ್ ಎಂಬ ಹೇಳಿಕೆ ಸಮರ್ಥಿಸಿಕೊಂಡ ಕಂಗನಾ ರಣಾವತ್..!-ಜಗತ್ತಿನ ಅತಿದೊಡ್ಡ ಹಾಗೂ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಅನಾ ಜುಲಿಯಾ ಹಾವು ಸಾವು.!-ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!-ಸ್ನೇಹಿತರ ಹುಚ್ಚಾಟಕ್ಕೆ ಕರುಳು ಬ್ಲ್ಯಾಸ್ಟ್ ಆಗಿ ಯುವಕ ಸಾವು..!-ಅರವಿಂದ್ ಕೇಜ್ರಿವಾಲ್ ಬಂಧನದ ಬಗ್ಗೆ ಮಹತ್ವದ ತೀರ್ಪು ನೀಡಿದ ದೆಹಲಿ ಹೈಕೋರ್ಟ್.!-ಬಿಜೆಪಿ - ಜೆಡಿಎಸ್ ನ 28 ಕ್ಷೇತ್ರಗಳ ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ.!-ಸುಮಲತಾ ಅವರು ನನಗೆ ಶತ್ರುವಲ್ಲ; ಸಮಯ ಬಂದಾಗ ಮಾತನಾಡುತ್ತೇನೆ: ಹೆಚ್ ಡಿ ಕುಮಾರಸ್ವಾಮಿ-ಕೇರಳ: 10 ಕೋಟಿ ಲಾಟರಿ ಗೆದ್ದ ಆಟೋ ಚಾಲಕ ರಾತ್ರೋ ರಾತ್ರಿ ಕೋಟ್ಯಾಧಿಪತಿ..!-ಮಂಗಳೂರು: ಬೈಕಂಪಾಡಿ ಸೀ ಫುಡ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ; ಸುಟ್ಟು ಭಸ್ಮವಾದ ಕಾರ್ಖಾನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಚನ್ನರಾಯಪಟ್ಟಣದಲ್ಲಿ 13 ಮಕ್ಕಳಿಗೆ ಕೊರೊನಾ.

Twitter
Facebook
LinkedIn
WhatsApp
ಚನ್ನರಾಯಪಟ್ಟಣದಲ್ಲಿ 13 ಮಕ್ಕಳಿಗೆ ಕೊರೊನಾ .

ಹಾಸನ : ರಾಜ್ಯದಲ್ಲಿ ಕೊರೊನಾ ವೈರಸ್‌ ಸೋಂಕಿನ ಪ್ರಮಾಣ ಏರಿಕೆಯನ್ನು ಕಾಣುತ್ತಿದೆ. ಧಾರವಾಡ, ಆನೇಕಲ್‌ನ ಶಾಲೆ, ಕಾಲೇಜಿನಲ್ಲಿ ಕೊರೊನಾ ಸ್ಪೋಟಗೊಂಡ ಬೆನ್ನಲ್ಲೇ ಹಾಸನದಲ್ಲಿ ಹೆಮ್ಮಾರಿ ಕೊರೊನಾ ಆರ್ಭಟಿಸಿದೆ. ಚನ್ನರಾಯಪಟ್ಟಣ ತಾಲೂಕಿನ ವಸತಿ ಶಾಲೆಯೊಂದರ 13 ವಿದ್ಯಾರ್ಥಿಗಳಿಗೆ (13 Students Corona) ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಹಾಸನದಲ್ಲೀಗ ಆತಂಕ ಶುರುವಾಗಿದೆ.

ರಾಜ್ಯದಲ್ಲಿ ಶೈಕ್ಷಣಿಕ ಚಟುವಟಿಕೆ ಆರಂಭಗೊಂಡ ಬೆನ್ನಲ್ಲೇ ಇದೀಗ ನಿಧಾನವಾಗಿ ಕೊರೊನಾ ವೈರಸ್‌ ಸೋಂಕಿನ ಪ್ರಮಾಣದಲ್ಲಿ ಏರಿಕೆ ಕಾಣುತ್ತಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ವಸತಿ ಶಾಲೆಯಲ್ಲಿ ಕಳೆದ ಒಂದು ತಿಂಗಳ ಹಿಂದೆ ಇಬ್ಬರು ವಿದ್ಯಾರ್ಥಿಗಳಿಗೆ ಕೊರೊನಾ ವೈರಸ್‌ ಸೋಂಕು ಕಾಣಿಸಿಕೊಂಡಿತ್ತು. ಹೀಗಾಗಿ ಶಾಲೆಯ ಎಲ್ಲಾ ವಿದ್ಯಾರ್ಥಿಗಳನ್ನು ಕೊರೊನಾ ಟೆಸ್ಟ್‌ಗೆ ಒಳಪಡಿಸಲಾಗಿತ್ತು. ಇದೀಗ ವಸತಿ ಶಾಲೆಯಲ್ಲಿನ ೧೩ ವಿದ್ಯಾರ್ಥಿಗಳಿಗೆ ಕೊರೊನಾ ವೈರಸ್‌ ಸೋಂಕು ದೃಢಪಟ್ಟಿದೆ.

ವಸತಿ ಶಾಲೆಯಲ್ಲಿ ಒಟ್ಟು ೨೦೦ ವಿದ್ಯಾರ್ಥಿಗಳಿದ್ದು, ಸಿಬ್ಬಂಧಿಗಳಿಗೂ ಕೂಡ ಕೊರೊನಾ ಟೆಸ್ಟ್‌ ನಡೆಸಲಾಗಿದೆ. ವಸತಿ ಶಾಲೆಯಲ್ಲಿ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿದ್ದಾರೆ. ಕೊರೊನಾ ಸೋಂಕಿತ ವಿದ್ಯಾರ್ಥಿಗಳನ್ನು ಪ್ರತ್ಯೇಕಿಸಿ ಚಿಕಿತ್ಸೆ ನೀಡುವ ಕಾರ್ಯವನ್ನು ಮಾಡಲಾಗುತ್ತಿದೆ. ಅಲ್ಲದೇ ಉಳಿದ ವಿದ್ಯಾರ್ಥಿಗಳ ಮೇಲೆಯೂ ಆರೋಗ್ಯ ಇಲಾಖೆಯ ಅಧಿಕಾರಿಗಳು ನಿಗಾ ಇರಿಸಿದ್ದಾರೆ.

ಹಾಸನ ಜಿಲ್ಲೆಯಲ್ಲಿ ಕೊರೊನಾ ಎರಡನೇ ಅಲೆ ಸಾಕಷ್ಟು ಅವಾಂತರವನ್ನು ಉಂಟು ಮಾಡಿತ್ತು. ಆದ್ರೆ ತದನಂತರದಲ್ಲಿ ಕೊರೊನಾ ಸೋಂಕು ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿತ್ತು. ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಮಾಣ ಶೇ. 0.19ಕ್ಕೆ ಇಳಿಕೆಯಾಗಿತ್ತು. ಆದ್ರೀಗ ೧೩ ವಿದ್ಯಾರ್ಥಿಗಳಿಗೆ ಕೊರೊನಾ ದೃಢಪಟ್ಟಿರೋದು ಜಿಲ್ಲೆಯ ಜನರ ಆತಂಕಕ್ಕೆ ಕಾರಣವಾಗಿದೆ. ಅಲ್ಲದೇ ಜಿಲ್ಲಾಡಳಿತ ಶಾಲೆ, ಕಾಲೇಜಿಗಳಲ್ಲಿ ಕೊರೊನಾ ಟೆಸ್ಟ್‌ ಮಾಡಿಸಲು ಮುಂದಾಗುವ ಸಾಧ್ಯತೆಯೂ ಇದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.! Twitter Facebook LinkedIn WhatsApp ಮಂಗಳೂರು: ನಾಲ್ಕು ದಶಕಗಳ ನಂತರ ದಕ್ಷಿಣ ಕನ್ನಡ (Dakshin Kannada) ಲೋಕಸಭೆ ಕ್ಷೇತ್ರದಿಂದ ಹೊಸ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು