ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಬೆಂಗಳೂರು: ಚರ್ಚ್ನಲ್ಲಿ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಕಾಮುಕನನ್ನು ಅಶೋಕನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ವಿಲಿಯಮ್ ಪ್ರಕಾಶ್ ಬಂಧಿತ ಆರೋಪಿಯಾಗಿದ್ದು, ಈತ ಕಳೆದ ಸೆಪ್ಟೆಂಬರ್ 10 ರಂದು ಶನಿವಾರ ಶಾಂತಲಾನಗರದಲ್ಲಿ ಬಳಿ ಇರುವ ಸೆಂಟ್ ಚಾಪೆಲ್ ಚರ್ಚ್ ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಲೈಟ್ ಆಫ್ ಮಾಡಲು ಹೋಗಿದ್ದರು. ಈ ವೇಳೆ ಹಿಂಬದಿಯಿಂದ ಬಂದ ಕಾಮುಕ ಚಾಕು ತೋರಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದ. ವಿರೋಧ ವ್ಯಕ್ತಪಡಿಸಿದಾಗ ಹಲ್ಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದ. ಆರೋಪಿ ಬೆದರಿಸಿದ್ದ ಕಾರಣಕ್ಕೆ ಮಹಿಳೆ ಹಾಗೂ ಕುಟುಂಬಸ್ಥರು ದೂರು ನೀಡಲು ಹಿಂದೇಟು ಹಾಕಿದ್ದರು. ಕೊನೆಗೆ ವಿಚಾರ ಆಪ್ ಪಕ್ಷದ ಮುಖಂಡರಿಗೆ ಗೊತ್ತಾಗಿ ಅವರ ಸಹಾಯದಿಂದ ಮಹಿಳೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು.
ಚರ್ಚ್ನಲ್ಲಿ ಸಂತ್ರಸ್ತ ಮಹಿಳೆ ಪತಿ ಕೆಲಸ ಮಾಡುತ್ತಿದ್ದು, ಅಂದು ಪತಿಯ ಸೂಚನೆ ಮೇರೆಗೆ ಚರ್ಚ್ನಲ್ಲಿ ಲೈಟ್ ಆಫ್ ಮಾಡಲು ಮಹಿಳೆ ಒಬ್ಬರೇ ಅಲ್ಲಿಗೆ ಹೋಗಿದ್ದರಂತೆ. ಈ ವೇಳೆ ವಿಲಿಯಂ ಮಹಿಳೆಯ ಮೇಲೆ ಮೃಗದಂತೆ ಎರಗಿದ್ದ. ಮಹಿಳೆ ಸಹಾಯಕ್ಕಾಗಿ ಕೂಗಾಡಿದಾಗ ಜನ ಬರ್ತಾರೆಂದು ಹೆದರಿದ ವಿಲಿಯಂ ಪ್ರಕಾಶ್, ಗಣೇಶ ಮೆರವಣಿಗೆ ಬರುವಾಗ ಮೆರವಣಿಗೆಯಲ್ಲಿ ಸೇರಿಕೊಂಡು ತಲೆಮರೆಸಿಕೊಂಡಿದ್ದ. ಮಹಿಳೆ ಕೂಗುವುದನ್ನು ಕೇಳಿದ ಆಕೆಯ ಪತಿ ಚರ್ಚ್ನತ್ತ ಧಾವಿಸಿ ನೋಡಿದಾಗ ಆರೋಪಿ ಹೊರಗೆ ಓಡಿ ಬರುವುದನ್ನು ಕಂಡರು. ಪತಿ ಅವರನ್ನು ಹಿಡಿಯಲು ಯತ್ನಿಸಿದಾಗ ಆರೋಪಿ ಗಣೇಶ ಮೂರ್ತಿ ಮೆರವಣಿಗೆಗೆ ಓಡಿ ಪರಾರಿಯಾಗಿದ್ದ. ಆರೋಪಿ ಆಗಾಗ ಚರ್ಚೆಗೆ ಬರುತ್ತಿದ್ದುದು ಪತಿಗೆ ಗೊತ್ತಿತ್ತು. ಆರೋಪಿಯನ್ನು ವಿಲಿಯಂ ಪ್ರಕಾಶ್ ಎಂದು ಗುರುತಿಸಲಾಗಿದೆ.
ಘಟನೆ ನಡೆದ ಸುಮಾರು ಆರು ದಿನಗಳ ನಂತರ ಆಕೆ ದೂರು ದಾಖಲಿಸಿದ್ದು, ಪರಿಣಾಮಗಳ ಬಗ್ಗೆ ಭಯಗೊಂಡಿರುವುದಾಗಿ ಮಹಿಳೆ ಹೇಳಿದ್ದಾರೆ. ಆರೋಪಿಗೆ ಇರಲು ನಿಗದಿತ ಸ್ಥಳವಿಲ್ಲದೇ ಒಂದೆಡೆಯಿಂದ ಮತ್ತೊಂದೆಡೆ ಅಲೆದಾಡುತ್ತಿದ್ದ ಆರೋಪಿಯನ್ನು ಹಿಡಿಯಲು ಪೊಲೀಸರಿಗೆ ಹರಸಾಹಸ ಪಡಬೇಕಾಯಿತು. ಆರೋಪಿ ಬಲಿಪಶುವನ್ನು ಸುಮಾರು 45 ನಿಮಿಷಗಳ ಕಾಲ ಚಾಕು ತೋರಿಸಿ ಬೆದರಿಸಿ ಹಿಡಿದಿದ್ದ. ಆಕೆ ತಳ್ಳಿ ಓಡಲು ಯತ್ನಿಸಿದಾಗ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಅದೃಷ್ಟವಶಾತ್ ಆಕೆಗೆ ಯಾವುದೇ ಹಾನಿಯಾಗಿಲ್ಲ. ಆರೋಪಿ ಆಕೆಯನ್ನು ಹಿಂಬಾಲಿಸಿದನಾದರೂ ಆಕೆಯ ಪತಿಯನ್ನು ನೋಡಿ ಪರಾರಿಯಾಗಿದ್ದ.
ಆತ ಚರ್ಚ್ ನಿಂದ ಹೊರ ಬರುವ ಹೊತ್ತಿಗೆ ಗಣೇಶನ ವಿಗ್ರಹ ಮೆರವಣಿಗೆಯು ಚರ್ಚ್ನಿಂದ ಹಾದುಹೋಗುತ್ತಿತ್ತು. ಇದೇ ಸಂದರ್ಭದಲ್ಲಿ ಆರೋಪಿ ಮೆರವಣಿಗೆಯ ಜನಸಂದಣಿಯಲ್ಲಿ ಸೇರಿಕೊಂಡು ಓಡಿಹೋದ ಎಂದು ತನಿಖೆಯ ಭಾಗವಾಗಿರುವ ಅಧಿಕಾರಿಯೊಬ್ಬರು ಹೇಳಿದರು. ಸದ್ಯ ಘಟನೆ ನಡೆದು ಒಂದು ತಿಂಗಳ ಬಳಿಕ ಕಾಮುಕ ವಿಲಿಯಂ ಪ್ರಕಾಶ್ನನ್ನ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಇತರ ಸೆಕ್ಷನ್ಗಳ ಜೊತೆಗೆ ಮಹಿಳೆಯ ಮೇಲೆ ಹಲ್ಲೆ ಅಥವಾ ಕ್ರಿಮಿನಲ್ ಪ್ರಕರಣವನ್ನು ದಾಖಲಿಸಲಾಗಿದೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?