ಶನಿವಾರ, ಮೇ 4, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಚಾಮುಂಡಿಬೆಟ್ಟದಲ್ಲಿ ಮತ್ತೆ ಭೂ ಕುಸಿತ.

Twitter
Facebook
LinkedIn
WhatsApp
ಚಾಮುಂಡಿಬೆಟ್ಟದಲ್ಲಿ ಮತ್ತೆ ಭೂ ಕುಸಿತ.

ಮೈಸೂರು : ಅರಮನೆ ನಗರಿಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ (Heavy Rain) ಚಾಮುಂಡಿ ಬೆಟ್ಟದಲ್ಲಿ ಮತ್ತೆ ಭೂ ಕುಸಿತ ಉಂಟಾಗಿದೆ. ನಂದಿ ಮಾರ್ಗದ ರಸ್ತೆಯುದ್ದಕ್ಕೂ ಭೂ ಕುಸಿತ ಉಂಟಾಗುತ್ತಿದ್ದು, ರಸ್ತೆಗಳು ಕೊಚ್ಚಿ ಹೋಗುವ ಭೀತಿ ಎದುರಾಗಿದೆ. ಇನ್ನೊಂದೆಡೆಯಲ್ಲಿ ಕೆಆರ್‌ಎಸ್‌ ಡ್ಯಾಂ ( KRS DAM) ಭರ್ತಿಯಾಗಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆಯನ್ನು ನೀಡಲಾಗಿದೆ.

ಕಳೆದ ಎರಡು ದಿನಗಳಿಂದಲೂ ಮೈಸೂರು, ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ಎಡಬಿಡದೆ ಮಳೆ ಸುರಿಯುತ್ತಿದೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟದ ದಲ್ಲಿ ಇದೀಗ ಒಂದೇ ತಿಂಗಳಲ್ಲಿ ನಾಲ್ಕನೇ ಬಾರಿಗೆ ಭೂ ಕುಸಿತ ಉಂಟಾಗಿದೆ. ಮಳೆ ಇದೇ ರೀತಿಯಾಗಿ ಮುಂದುವರಿದ್ರೆ ಚಾಮುಂಡಿ ಘಾಟ್‌ ಮಾರ್ಗದ ರಸ್ತೆಯೇ ಕೊಚ್ಚಿ ಹೋಗುವ ಭೀತಿ ಎದುರಾಗಿದೆ.

ಮೈಸೂರಿನಲ್ಲಿ ಅಕ್ಟೋಬರ್‌ ಹಾಗೂ ನವೆಂಬರ್‌ ತಿಂಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿದಿದೆ. ಇದರಿಂದಾಗಿ ಈಗಾಗಲೇ ಈ ಹಿಂದೆಯೇ ಮೂರು ಬಾರಿ ಚಾಮುಂಡಿ ಬೆಟ್ಟದಲ್ಲಿ ಭೂ ಕುಸಿತ ಉಂಟಾಗಿತ್ತು. ಇದೀಗ ಮತ್ತೊಂದು ಬಾರಿ ಕುಸಿತವಾಗಿದೆ. ಇನ್ನೂ ಎರಡು ದಿನಗಳ ಕಾಲ ಭಾರಿ ಮಳೆ ಸುರಿಯುವ ಸಾಧ್ಯತೆಯಿದ್ದು, ಚಾಮುಂಡಿ ಬೆಟ್ಟದಲ್ಲೀಗ ಆತಂಕ ಶುರುವಾಗಿದೆ. ಭೂ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲೀಗ ಚಾಮುಂಡಿ ಬೆಟ್ಟಕ್ಕೆ ತೆರಳುವ ಮಾರ್ಗವನ್ನು ಬಂದ್‌ ಮಾಡಲಾಗಿದೆ. ಅಧಿಕಾರಿಗಳು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ.
ಕೆಆರ್‌ಎಸ್‌ ಡ್ಯಾಂ ಸಂಪೂರ್ಣ ಭರ್ತಿ : ಕಾವೇರಿ ನದಿಗೆ ಇಳಿಯದಂತೆ ಎಚ್ಚರಿಕೆ
ಮಂಡ್ಯ, ಮೈಸೂರು, ಕೊಡಗು ಜಿಲ್ಲೆಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕೃಷ್ಣರಾಜ ಸಾಗರ ಅಣೆಕಟ್ಟು ಸಂಪೂರ್ಣವಾಗಿ ಭರ್ತಿಯಾಗಿದೆ. ಕೆಆರ್‌ಎಸ್‌ ಡ್ಯಾಂನ ಹೊರ ಹರಿವು ಹೆಚ್ಚಳವಾಗಿದ್ದು, ನಿಮಿಷಾಂಭಾ ದೇಗುಲದ ಸ್ನಾನಘಟ್ಟದಲ್ಲಿ ಭಕ್ತರು ಸ್ನಾನ ಮಾಡುವುದಕ್ಕೆ ನಿಷೇಧವನ್ನು ಹೇರಲಾಗಿದೆ. ಈಗಾಗಲೇ ಮುನ್ನೆಚ್ಚರಿಕಾ ಕ್ರಮವಾಗಿ ಬ್ಯಾರಿಕೇಡ್‌ ಅಳವಡಿಕೆ ಮಾಡಲಾಗಿದ್ದು, ನದಿ ದಂಡೆಗೆ ತೆರಳದಂತೆ ಮುನ್ಸೂಚನೆಯನ್ನು ನೀಡಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು