ಸೋಮವಾರ, ಮೇ 13, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಚಿಕ್ಕಮಗಳೂರು, ಉಡುಪಿಯಲ್ಲಿ ಡೇಂಜರ್ ಸೇತುವೆ – ನಿರ್ವಹಣೆ ಇಲ್ಲದೇ ಬೀಳುವ ಸ್ಥಿತಿ

Twitter
Facebook
LinkedIn
WhatsApp
ಚಿಕ್ಕಮಗಳೂರು, ಉಡುಪಿಯಲ್ಲಿ ಡೇಂಜರ್ ಸೇತುವೆ – ನಿರ್ವಹಣೆ ಇಲ್ಲದೇ ಬೀಳುವ ಸ್ಥಿತಿ

ಚಿಕ್ಕಮಗಳೂರು: ಗುಜರಾತ್‌ನಲ್ಲಿ (Gujarat) ನಡೆದ ಮೊರ್ಬಿ (Morbi) ದುರಂತ 141 ಜನರನ್ನು ಬಲಿಪಡೆದಿದೆ. ಕರ್ನಾಟಕದಲ್ಲಿ ಕೂಡ ಇಂತದ್ದೇ ಅಪಾಯಕಾರಿ ಸೇತುವೆಗಳು ಇವೆ. ಗುಜರಾತಿನ ಮೊರ್ಬಿ ಸೇತುವೆಯಷ್ಟೇ ನಮ್ಮಲ್ಲೂ ಡೇಂಜರ್ ಸೇತುವೆಗಳು ಇವೆ. ಪಬ್ಲಿಕ್ ರಿಯಾಲಿಟಿ ಚೆಕ್‌ನಲ್ಲಿ ಡೇಂಜರ್ ತೂಗು ಸೇತುವೆಗಳ ಬಣ್ಣ ಬಯಲಾಗಿದೆ.

ಕಿತ್ತು ಬಂದಿರುವ ತಂತಿಗಳು. ಗ್ರಿಪ್ಪೇ ಇಲ್ಲದೆ ಸಾಮರ್ಥ್ಯ ಕಳೆದುಕೊಂಡಿರೋ ಸೇತುವೆಯ ತಡೆಗೋಡೆಗಳು. ಒಬ್ಬರ ಓಡಾಡಕ್ಕೆ ಜೋತಾಡೋ ಸೇತುವೆ. ಇದು ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ನೆಮ್ಮಾರು ಗ್ರಾಮದಲ್ಲಿರುವ ಮೇಲ್ಸೇತುವೆ. ಅಪಾಯಕ್ಕೆ ಕಾದಿರುವ ತೂಗು ಸೇತುವೆಯ ಬಣ್ಣ ಪಬ್ಲಿಕ್ ಟಿವಿ ರಿಯಾಲಿಟಿ ಚೆಕ್‌ನಲ್ಲಿ ಬಯಲಾಗಿದೆ. 

ಹೌದು, ಚಿಕ್ಕಮಗಳೂರು (Chikkamagaluru) ಜಿಲ್ಲೆ ಶೃಂಗೇರಿಯ ನೆಮ್ಮಾರು ಗ್ರಾಮದಲ್ಲಿ 20 ವರ್ಷಗಳ ಹಿಂದೆ ತುಂಗಾ ನದಿ ಮೇಲೆ ನಿರ್ಮಿಸಿದ ಸೇತುವೆ ಈಗ ಬೀಳುವ ಸ್ಥಿತಿಯಲ್ಲಿದೆ. ಇಲ್ಲಿನ ಸುಂಕದಮಕ್ಕಿ ಹಾಗೂ ಹೆಡದಾಳು ಗ್ರಾಮದ 150ಕ್ಕೂ ಹೆಚ್ಚು ಕುಟುಂಬಗಳಿಗೆ ಈ ಸೇತುವೆಯೇ ಆಧಾರ. ಇವರಿಗೆ ಬೇರೆ ಮಾರ್ಗ ಇದ್ರು 12 ಕಿ.ಮೀ. ಸುತ್ತಿ ಬರಬೇಕು. ಹಾಗಾಗಿ 20 ವರ್ಷಗಳ ಹಿಂದೆ ಸರ್ಕಾರವೇ ತೂಗುಸೇತುವೆ ನಿರ್ಮಿಸಿ ಕೊಟ್ಟಿತ್ತು. ಆದ್ರೆ ನಿರ್ವಹಣೆ ಇಲ್ಲದೆ ಸೇತುವೆ ತನ್ನ ಸಾಮರ್ಥ್ಯವನ್ನ ಕಳೆದುಕೊಂಡಿದೆ. ಸೇತುವೆಗೆ ಹಾಕಿರುವ ಗ್ರಿಲ್‌ಗಳು ಕಿತ್ತು ಬಂದಿವೆ. ಸೇತುವೆಯ ಫುಟ್‌ಪಾತ್ ಹಾಗೂ ತಡೆಗೋಡೆಗೆ ಹಾಕಿರೋ ಗ್ರಿಲ್‌ಗಳ ಜಾಯಿಂಟ್ ಕೂಡ ಬಿಟ್ಟಿದ್ದು ಸ್ವಲ್ಪ ಯಾಮಾರಿದ್ರೂ ಅಪಾಯ ಕಟ್ಟಿಟ್ಟಬುತ್ತಿ.

ಸೇತುವೆ ಸ್ಥಿತಿ ಬಗ್ಗೆ ಸ್ಥಳೀಯರು ಹಲವು ಬಾರಿ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಆದರೆ ಸ್ಥಳಕ್ಕೆ ಬಂದು ಹೋಗುವ ಅಧಿಕಾರಿಗಳ ಕಥೆ ಬಂದ ಪುಟ್ಟ ಹೋದ ಪುಟ್ಟ ಎಂಬಂತಾಗಿದೆ. ಒಂದು ವೇಳೆ ಈ ಸೇತುವೆ ಹಾಳಾದ್ರೆ, ಈ ಭಾಗದ ಜನ ಸಣ್ಣ ಕೆಲಸಕ್ಕೂ ಹೆದ್ದಾರಿಗೆ ಬರಬೇಕೆಂದ್ರೆ ಕನಿಷ್ಠ 12 ಕಿ.ಮೀ. ಸುತ್ತಿ ಬಳಸಿ ಬರಬೇಕು. ಈ ಸೇತುವೆ ನಿರ್ಮಾಣವಾದಗಿನಿಂದ ಒಂದೇ ಒಂದು ಬಾರಿ ಮಾತ್ರ ಬಣ್ಣ-ಗ್ರೀಸ್ ಕಂಡಿದೆ. ಮೊದಲೆಲ್ಲಾ 4-5 ಜನ ಓಡಾಡಿದ್ರು ಏನೂ ಆಗ್ತಿರಲ್ಲಿಲ್ಲ. ಈಗ ಒಬ್ಬಿಬ್ಬರು ಓಡಾಡುದ್ರೆ ತೂಗಾಡುತ್ತೆ, ಓಡಾಡೋಕೆ ಭಯವಾಗುತ್ತೆ ಅಂತಾರೆ ಸ್ಥಳೀಯರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ

ಅಂಕಣ