ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಚಿತ್ರದುರ್ಗ: ATR ನಿಂದ ಹೊಸ UAV ಯಶಸ್ವೀ ಪರೀಕ್ಷೆ ನಡೆಸಿದ DRDO

Twitter
Facebook
LinkedIn
WhatsApp
ಚಿತ್ರದುರ್ಗ: ATR ನಿಂದ ಹೊಸ UAV ಯಶಸ್ವೀ ಪರೀಕ್ಷೆ ನಡೆಸಿದ DRDO

ಚಿತ್ರದುರ್ಗ: ರಕ್ಷಣಾ ವಿಭಾಗದಲ್ಲಿ ಸ್ವಾವಲಂಬನೆಯತ್ತ ಮಹತ್ವದ ಹೆಜ್ಜೆಯನ್ನಿಟ್ಟಿರುವ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಚಿತ್ರದುರ್ಗದ ಎಟಿಆರ್ (ಏರೋನಾಟಿಕಲ್ ಟೆಸ್ಟ್ ರೇಂಜ್‌) ನಿಂದ ಮೊದಲ ಚಾಲಕ ರಹಿತ ವಿಮಾನದ ಯಶಸ್ವಿ ಹಾರಾಟ ನಡೆಸಿದೆ.

ಜುಲೈ 1 ಶುಕ್ರವಾರದಂದು ಅಟಾನಮಸ್ ಫ್ಲೈಯಿಂಗ್ ವಿಂಗ್‌ನ ಮೊದಲ ಹಾರಾಟವನ್ನು ನಡೆಸಲಾಗಿದ್ದು, ಚಿತ್ರದುರ್ಗದ ಚಳ್ಳಕೆರೆಯಲ್ಲಿರುವ ಏರೋನಾಟಿಕಲ್ ಟೆಸ್ಟ್ ರೇಂಜ್‌ನಿಂದ ಯಶಸ್ವಿಯಾಗಿ ಚಾಲಕ ರಹಿತ ವಿಮಾನವನ್ನು ಹಾರಾಟ ನಡೆಸಲಾಗಿದೆ. ಈ ಚಾಲಕ ರಹಿತ ವಿಮಾನವು ಸಂಪೂರ್ಣ ಸ್ವಾಯತ್ತ ಮೋಡ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, ವಿಮಾನವು ಟೇಕ್-ಆಫ್, ವೇ ಪಾಯಿಂಟ್, ನ್ಯಾವಿಗೇಷನ್ ಮತ್ತು ಟಚ್‌ಡೌನ್ ಸೇರಿದಂತೆ ಎಲ್ಲ ವಿಭಾಗಗಳಲ್ಲಿ ಪರಿಪೂರ್ಣ ಹಾರಾಟವನ್ನು ಯಶಸ್ವಿಯಾಗಿದೆ ಪ್ರದರ್ಶಿಸಿದೆ ಎಂದು DRDO ಹೇಳಿದೆ.

ಈ ವಿಮಾನವು ಸ್ವಾವಲಂಬನೆಯ ಕಡೆಗೆ ತಂತ್ರಜ್ಞಾನಗಳನ್ನು ಸಾಬೀತುಪಡಿಸುವ ವಿಷಯದಲ್ಲಿ ಪ್ರಮುಖ ಮೈಲಿಗಲ್ಲಾಗಿದ್ದು, ಭವಿಷ್ಯದ ಮಾನವರಹಿತ ವಿಮಾನಗಳ ಅಭಿವೃದ್ಧಿಗೆ ನಿರ್ಣಾಯಕ ತಂತ್ರಜ್ಞಾನಗಳನ್ನು ಸಾಬೀತುಪಡಿಸುವ ವಿಷಯದಲ್ಲಿ ಈ ಹಾರಾಟವು ಪ್ರಮುಖ ಮೈಲಿಗಲ್ಲಾಗಿದ್ದು, ಅಂತಹ ಕಾರ್ಯತಂತ್ರದ ರಕ್ಷಣಾ ತಂತ್ರಜ್ಞಾನಗಳಲ್ಲಿ ಸ್ವಾವಲಂಬನೆಯತ್ತ ಮಹತ್ವದ ಹೆಜ್ಜೆಯಾಗಿದೆ. ನಿರ್ಣಾಯಕ ಕಾರ್ಯತಂತ್ರದ ರಕ್ಷಣಾ ತಂತ್ರಜ್ಞಾನದಲ್ಲಿ ಮಾನವರಹಿತ ವೈಮಾನಿಕ ವಾಹನವನ್ನು (UAV) ವಿನ್ಯಾಸಗೊಳಿಸಲಾಗಿದೆ ಎಂದು ಡಿಆರ್ ಡಿಒ ಹೇಳಿದೆ.

ಇದು ಸಣ್ಣ ಟರ್ಬೋಫ್ಯಾನ್ ಎಂಜಿನ್‌ನಿಂದ ಚಾಲಿತ ವಿಮಾನವಾಗಿದ್ದು, ಈ ವಿಮಾನಕ್ಕೆ ಬಳಸಲಾದ ಏರ್‌ಫ್ರೇಮ್, ಅಂಡರ್‌ಕ್ಯಾರೇಜ್ ಮತ್ತು ಸಂಪೂರ್ಣ ಹಾರಾಟದ ನಿಯಂತ್ರಣ ಮತ್ತು ಏವಿಯಾನಿಕ್ಸ್ ವ್ಯವಸ್ಥೆಗಳನ್ನು ಸ್ಥಳೀಯವಾಗಿ ಅಭಿವೃದ್ಧಿಪಡಿಸಲಾಗಿದೆ. ಈ ವಿಮಾನವನ್ನು ಡಿಒರ್ ಡಿಒದ ಬೆಂಗಳೂರಿನ ಏರೋನಾಟಿಕಲ್ ಡೆವಲಪ್‌ಮೆಂಟ್ ಎಸ್ಟಾಬ್ಲಿಷ್‌ಮೆಂಟ್ (ಎಡಿಇ) ಅಭಿವೃದ್ಧಿಪಡಿಸಿದ್ದು, ಬೆಂಗಳೂರು ಡಿಆರ್‌ಡಿಒದ ಪ್ರಮುಖ ಸಂಶೋಧನಾ ಪ್ರಯೋಗಾಲಯ ಕೂಡ ಆಗಿದೆ.

ಡಿಆರ್ ಡಿಒ ಕಾರ್ಯವನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಅಭಿನಂದಿಸಿದ್ದು, ಇದು ಸ್ವಾಯತ್ತ ವಿಮಾನದ ಕಡೆಗೆ ಪ್ರಮುಖ ಸಾಧನೆ ಮತ್ತು ದಾರಿಯನ್ನು ಸುಗಮಗೊಳಿಸುತ್ತದೆ. ನಿರ್ಣಾಯಕ ಸೇನಾ ವ್ಯವಸ್ಥೆಗಳ ವಿಷಯದಲ್ಲಿ ‘ಆತ್ಮನಿರ್ಭರ್ ಭಾರತ’”ದ ಯಶಸ್ವಿ ಮೊದಲ ಹಾರಾಟಕ್ಕಾಗಿ ಡಿಆರ್ ಜಿಒಗೆ ಅಭಿನಂದನೆಗಳು ಎಂದು ಟ್ವೀಟ್ ಮಾಡಿದ್ದಾರೆ.

ಅಲ್ಲದೆ ಚಿತ್ರದುರ್ಗ ATR ನಿಂದ ಸ್ವಾಯತ್ತ ಫ್ಲೈಯಿಂಗ್ ವಿಂಗ್ ಟೆಕ್ನಾಲಜಿ ಡೆಮಾನ್ಸ್ಟ್ರೇಟರ್ ಯಶಸ್ವಿ ಹಾರಾಟವು ಸ್ವಾಯತ್ತ ವಿಮಾನಗಳ ಕಡೆಗೆ ಒಂದು ಪ್ರಮುಖ ಸಾಧನೆಯಾಗಿದೆ. ನಿರ್ಣಾಯಕ ಮಿಲಿಟರಿಯ ವಿಷಯದಲ್ಲಿ ಆತ್ಮನಿರ್ಭರ ಭಾರತಕ್ಕೆ ದಾರಿ ವ್ಯವಸ್ಥೆಯಾಗಿದೆ” ಎಂದು ಸಿಂಗ್ ಟ್ವೀಟ್ ಮಾಡಿದ್ದಾರೆ.

ಡಿಆರ್‌ಡಿಒ ಕಾರ್ಯದರ್ಶಿ, ರಕ್ಷಣಾ ಇಲಾಖೆ ಆರ್ & ಡಿ ಮತ್ತು ಅಧ್ಯಕ್ಷ  ಡಾ ಜಿ ಸತೀಶ್ ರೆಡ್ಡಿ ವಿನ್ಯಾಸಕ್ಕೆ ಸಂಬಂಧಿಸಿದ ವ್ಯವಸ್ಥೆಯ ಅಭಿವೃದ್ಧಿ ಮತ್ತು ಪರೀಕ್ಷೆ ತಂಡಗಳ ಪ್ರಯತ್ನವನ್ನು ಶ್ಲಾಘಿಸಿದರು.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ