ಶುಕ್ರವಾರ, ಮೇ 3, 2024
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಚಿತ್ರೀಕರಣದಲ್ಲಿ ಅವಘಡ: ನಟಿ ಸಮಂತಾ ಕೈಗೆ ಗಾಯ

Twitter
Facebook
LinkedIn
WhatsApp
file75576fzir5jnyfgxhho1583353431 1

ತೆಲುಗು ಸಿನಿಮಾ ರಂಗದ ಹೆಸರಾಂತ ನಟಿ ಸಮಂತಾ ಕೈಗೆ ಗಾಯಗಳಾಗಿವೆ. ಗಾಯಗೊಂಡ (injury) ಕೈಗಳ ಚಿತ್ರವನ್ನು ಸಮಂತಾ (Samantha) ಪೋಸ್ಟ್ ಮಾಡಿದ್ದು, ಇದು ಚಿತ್ರೀಕರಣದಲ್ಲಿ ನಡೆದ ಘಟನೆಯಿಂದ ಆದದ್ದು ಎಂದು ಬರೆದುಕೊಂಡಿದ್ದಾರೆ. ರಕ್ತಸಿಕ್ತ ಬೆರಳುಗಳನ್ನು ಕಂಡು ಅಭಿಮಾನಿಗಳು ಆತಂಕಗೊಂಡಿದ್ದಾರೆ.

May be an image of 1 person

ಸಮಂತಾ ಸದ್ಯ ಹಿಂದಿಯಲ್ಲಿ ತಯಾರಾಗುತ್ತಿರುವ ‘ಸಿಟಾಡೆಲ್’ (Citadel) ವೆಬ್ ಸಿರೀಸ್ ನಲ್ಲಿ (Web Series) ನಟಿಸುತ್ತಿದ್ದಾರೆ. ಮೂಲ ಇದು ಇಂಗ್ಲಿಷಿನಲ್ಲಿ ಬರುತ್ತಿದ್ದು, ಅದನ್ನು ಹಿಂದಿಗೆ ರೀಮೇಕ್ ಮಾಡಲಾಗುತ್ತಿದೆ. ಈ ವೆಬ್ ಸರಣಿಯಲ್ಲಿ ಸಮಂತಾ ಮುಖ್ಯ ಪಾತ್ರ ಮಾಡುತ್ತಿದ್ದಾರೆ. ಇದೇ ಚಿತ್ರೀಕರಣದಲ್ಲಿ ಸಮಯದಲ್ಲಿ ಸಮಂತಾ ಗಾಯ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. 

ಸಿಟಾಡೆಲ್ ಸಾಹಸ ಪ್ರಧಾನ ವೆಬ್ ಸರಣಿ. ಹೇರಳವಾಗಿ ಆ್ಯಕ್ಷನ್ ಸನ್ನಿವೇಶಗಳು ಅದರಲ್ಲಿ ಇವೆಯಂತೆ. ಇಂತಹ ದೃಶ್ಯಗಳನ್ನು ಸೆರೆ ಹಿಡಿಯುವ ಸಂದರ್ಭದಲ್ಲಿ ಸಮಂತಾರ ಬೆರಳುಗಳಿಗೆ ಗಾಯಗಳಾಗಿವೆ. ಕೂಡಲೇ ಚಿಕಿತ್ಸೆ ಪಡೆದುಕೊಂಡಿರುವ ಅವರು, ನಂತರ ಮತ್ತೆ ಚಿತ್ರೀಕರಣದಲ್ಲಿ ಪಾಲ್ಗೊಂಡರು ಎಂದು ಹೇಳಲಾಗುತ್ತಿದೆ. ಬೆರಳುಗಳು ನೋವಾಗಿದ್ದರೂ ಶೂಟಿಂಗ್ ನಲ್ಲಿ ಪಾಲ್ಗೊಂಡಿದ್ದಕ್ಕೆ ಇಡೀ ಚಿತ್ರತಂಡ ಅವರನ್ನು ಅಭಿನಂದಿಸಿದೆ.

ಹಲವು ದಿನಗಳಿಂದ ಸಮಂತಾ ಚಿತ್ರೀಕರಣದಲ್ಲಿ ಭಾಗಿಯಾಗಿರಲಿಲ್ಲ. ಅನಾರೋಗ್ಯದ ಕಾರಣದಿಂದಾಗಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ನಂತರ ವಿಶ್ರಾಂತಿ ಪಡೆಯುತ್ತಿದ್ದರು. ಇದೀಗ ಆರೋಗ್ಯ ಸಮಸ್ಯೆಯಿಂದ ಅವರು ಪಾರಾಗಿದ್ದು, ಮತ್ತೆ ವರ್ಕೌಟ್ ಕೂಡ ನಡೆಸಿದಿದ್ದಾರೆ. ಹಾಗಾಗಿ ಸಾಹಸ ಸನ್ನಿವೇಶಗಳಲ್ಲಿ ಪಾಲ್ಗೊಳ್ಳಲು ಅವರು ಸಮ್ಮತಿ ಸೂಚಿಸಿದ್ದರು.

No photo description available.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ