ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಚುನಾವಣಾ ರಾಜಕೀಯಕ್ಕಷ್ಟೆ ವಿದಾಯ: ಬಿ.ಎಸ್‌.ಯಡಿಯೂರಪ್ಪ

Twitter
Facebook
LinkedIn
WhatsApp
WhatsApp Image 2023 02 25 at 8.16.17 AM

ವಿಧಾನಸಭೆ (ಫೆ.25): ನಾನು ಚುನಾವಣಾ ರಾಜಕೀಯಕ್ಕಷ್ಟೇ ವಿದಾಯ ಹೇಳುತ್ತಿದ್ದೇನೆ. ಮುಂದಿನ ದಿನಗಳಲ್ಲಿ ರಾಜ್ಯದ ಉದ್ದಗಲಕ್ಕೂ ಸಂಚರಿಸಿ 140 ಸ್ಥಾನಗಳೊಂದಿಗೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರಲು ಶಪಥ ಮಾಡಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ. 15ನೇ ವಿಧಾನಸಭೆ ಅಧಿವೇಶನದ ಕೊನೆಯ ದಿನವಾದ ಶುಕ್ರವಾರ ವಿಧಾನಸಭೆಯಲ್ಲಿ ವಿದಾಯ ಭಾಷಣ ಮಾಡಿದ ಅವರು, ಆರೆಸ್ಸೆಸ್‌, ಬಿಜೆಪಿ ಮತ್ತು ಶಿಕಾರಿಪುರ ಕ್ಷೇತ್ರದ ಜನರ ಗುಣಗಾನ ಮಾಡಿದರು.

ನಾನು ರಾಜಕಾರಣದಲ್ಲಿ ಇಷ್ಟು ಎತ್ತರಕ್ಕೆ ಬೆಳೆಯಲು ಆರೆಸ್ಸೆಸ್‌ ನೀಡಿದ ತರಬೇತಿ, ನಮ್ಮ ಪಕ್ಷ ನೀಡಿದ ಅವಕಾಶಗಳು ಹಾಗೂ ಶಿಕಾರಿಪುರ ಕ್ಷೇತ್ರದ ಜನರ ಬೆಂಬಲ ಕಾರಣ. ಪಕ್ಷ ನನಗೆ ಅನೇಕ ಅವಕಾಶಗಳನ್ನು ನೀಡಿದೆ. ಶಿಕಾರಿಪುರದ ಪುರಸಭಾ ಸದಸ್ಯನಾಗಿ ಮುಖ್ಯಮಂತ್ರಿ ಹುದ್ದೆವರೆಗೂ ಬಂದಿದ್ದೇನೆ ಎಂದು ತಮ್ಮ ಹೋರಾಟದ ದಿನಗಳನ್ನು ನೆನಪು ಮಾಡಿಕೊಂಡ ಯಡಿಯೂರಪ್ಪ ಅವರು, ಶಿಕಾರಿಪುರದ ಜನರಿಗೆ ನಾನು ಚಿರಋುಣಿ. ಅವರ ಆಶೀರ್ವಾದದಿಂದಲೇ ನನಗೆ ಎಲ್ಲವೂ ಸಿಕ್ಕಿದೆ. ಜನರ ಋುಣ ತೀರಿಸುವ ಕೆಲಸ ಮುಂದುವರೆಸುತ್ತೇನೆ.

ನಾನು ಮುಂದೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಆದರೆ, ಬದುಕಿನ ಕೊನೆಯ ಉಸಿರಿರುವವರೆಗೂ ಬಿಜೆಪಿಗಾಗಿ ದುಡಿಯುತ್ತೇನೆ. ಮುಂದಿನ ಚುನಾವಣೆಯಲ್ಲೂ ರಾಜ್ಯದ ಉದ್ದಗಲಕ್ಕೂ ಸಂಚರಿಸಿ 140 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುತ್ತೇನೆ ಎಂದರು. ರಾಜ್ಯದಲ್ಲಿ ಸರಿಯಾದ ರಸ್ತೆಗಳು ಇಲ್ಲದಿದ್ದ ಕಾಲದಲ್ಲಿ ಅಟಲ್‌ ಬಿಹಾರಿ ವಾಜಪೇಯಿ, ಎಲ್.ಕೆ. ಅಡ್ವಾಣಿ, ಮುರಳಿ ಮನೋಹರ ಜೋಶಿ ಅವರಂತಹ ಹಿರಿಯರ ಜೊತೆ ಸೇರಿ ಪಕ್ಷ ಕಟ್ಟಿದ್ದೇನೆ. ಆಗ ಪಕ್ಷದಲ್ಲಿ ಯಾರೂ ಇರಲಿಲ್ಲ.

ವಿಧಾನಸಭೆಗೆ ಬಿಜೆಪಿಯಿಂದ ಇಬ್ಬರು ಸದಸ್ಯರು ಆಯ್ಕೆಯಾಗಿ ರೈತರ ಪರವಾಗಿ ಹೋರಾಟ ಮಾಡಿದ ಕ್ಷಣಗಳು, ಬಗರ್‌ ಹುಕುಂ ಸಾಗುವಳಿದಾರರಿಗೆ ನ್ಯಾಯ ಕೊಡಿಸಲು ಮಾಡಿದ ಹೋರಾಟ ಹಾಗೂ ಕಷ್ಟದಲ್ಲಿ ಪಕ್ಷ ಕಟ್ಟಿದ್ದನ್ನು ಯಡಿಯೂರಪ್ಪ ನೆನಪಿಸಿಕೊಂಡರು. ವಿಧಾನಸಭೆಯಲ್ಲಿ ವಿದಾಯ ಭಾಷಣ ಮಾಡಿದ ನಂತರ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ಹಲವು ಶಾಸಕರ ಜತೆ ಸೇರಿ ವಿಧಾನಸೌಧದ ಆವರಣದಲ್ಲಿರುವ ಸಂವಿಧಾನ ಶಿಲ್ಪಿ ಡಾ. ಬಿ.ಆರ್‌. ಅಂಬೇಡ್ಕರ್‌, ಮಹಾತ್ಮಗಾಂಧಿ ಪುತ್ಥಳಿಗಳಿಗೆ ಪುಷ್ಪನಮನ ಸಲ್ಲಿಸಿ, ಚುನಾವಣಾ ರಾಜಕಾರಣಕ್ಕೆ ವಿದಾಯ ಹೇಳಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ