ಶನಿವಾರ, ಮೇ 4, 2024
ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!-ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಜನರ ಹೊಟ್ಟೆಗೆ ಸಮರ್ಪಕವಾದ ಅನ್ನ ನೀಡದ ಬಿಜೆಪಿಯವರಿಂದ ದೇಶವನ್ನು ವಿಶ್ವಗುರು ಮಾಡಲು ಸಾಧ್ಯವೆ: ಸಿದ್ದರಾಮಯ್ಯ ಪ್ರಶ್ನೆ

Twitter
Facebook
LinkedIn
WhatsApp
ಜನರ ಹೊಟ್ಟೆಗೆ ಸಮರ್ಪಕವಾದ ಅನ್ನ ನೀಡದ ಬಿಜೆಪಿಯವರಿಂದ ದೇಶವನ್ನು ವಿಶ್ವಗುರು ಮಾಡಲು ಸಾಧ್ಯವೆ: ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು: ಜನರ ಹೊಟ್ಟೆಗೆ ಸಮರ್ಪಕವಾದ ಅನ್ನ ನೀಡದ ಬಿಜೆಪಿಯವರಿಂದ ದೇಶವನ್ನು ವಿಶ್ವಗುರು ಮಾಡಲು ಸಾಧ್ಯವೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಜಗತ್ತಿನ ಜನರ ಮುಂದೆ ಹಸಿವು, ಸ್ವಾತಂತ್ರ್ಯ, ಮಹಿಳೆಯರ ದುಡಿಮೆ ಮುಂತಾದ ವಿಷಯಗಳಲ್ಲಿ ಭಾರತದ ಮರ್ಯಾದೆ ಹರಾಜಾಗುತ್ತಿದೆ ಎಂದು ಅವರು ಟೀಕಿಸಿದ್ದಾರೆ.
ಮೋದಿಯವರನ್ನು ಟೀಕಿಸಿದವರ ವಿರುದ್ಧ ಪ್ರತಿಭಟಿಸಿ ಎಂದು ಹೇಳಿಕೆ ನೀಡಿದ್ದ ಯಡಿಯೂರಪ್ಪನವರಿಗೆ ಮತ್ತು ಬಿಜೆಪಿಯವರಿಗೆ ನಾನು 32 ಪ್ರಶ್ನೆಗಳನ್ನು ಕೇಳಿದ್ದೆ. ಇದುವರೆಗೆ ಬಿಜೆಪಿಯವರಿಗೆ ಮತ್ತು ಯಡಿಯೂರಪ್ಪನವರಿಗೆ ಒಂದೇ ಒಂದು ಪ್ರಶ್ನೆಗೂ ಉತ್ತರಿಸಲು ಸಾಧ್ಯವಾಗಲಿಲ್ಲ. ಇದರ ಮಧ್ಯೆ ಜಾಗತಿಕ ಹಸಿವಿನ ಸೂಚ್ಯಂಕದಲ್ಲಿ ಭಾರತದ ಸ್ಥಾನ 121 ದೇಶಗಳ ಪೈಕಿ 107 ನೇ ಸ್ಥಾನಕ್ಕೆ ಕುಸಿದಿದೆಯೆಂಬ ವರದಿ ಬಿಡುಗಡೆಯಾಯಿತು. ಬಿಜೆಪಿಯವರು ಯಥಾಪ್ರಕಾರ ಈ ವರದಿಯೆ ಸರಿ ಇಲ್ಲ ಎಂದು ಜಾರಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳಿದರು.

ಆದರೆ ಕೇಂದ್ರ ಸರ್ಕಾರದ ದಾಖಲೆಗಳನ್ನು ಆಧರಿಸಿಯೆ ವರದಿ ಸಿದ್ಧಪಡಿಸಲಾಗಿದೆ ಎಂಬ ಸಾಕ್ಷ್ಯಗಳನ್ನು ಸಮೀಕ್ಷೆ ಮಾಡಿದವರು ತೋರಿಸಿದ್ದಾರೆ. ಮುಖ್ಯವಾಗಿ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ರಾಷ್ಟ್ರೀಯ ಕುಟುಂಬ ಮತ್ತು ಆರೋಗ್ಯ ಸಮೀಕ್ಷೆ-5 ರಲ್ಲಿನ ಅಂಕಿ ಅಂಶಗಳನ್ನು ಆಧಾರವಾಗಿಟ್ಟುಕೊಂಡು ಹಸಿವಿನ ಸೂಚ್ಯಂಕವನ್ನು ಸಿದ್ಧಪಡಿಸಲಾಗಿದೆಯೆಂದು ತಿಳಿಸಿದ ಮೇಲೆ ಬಿಜೆಪಿಯವರು ಆಕ್ಷೇಪಗಳನ್ನು ನಿಲ್ಲಿಸಿದ್ದಾರೆ. 2017 ರಲ್ಲಿ 100 ನೇ ಸ್ಥಾನದಲ್ಲಿದ್ದ ಭಾರತ 2018 ರಲ್ಲಿ 103 ನೇ ಸ್ಥಾನಕ್ಕೆ ಕುಸಿಯಿತು. ಈಗ 121 ದೇಶಗಳ ಪೈಕಿ 107 ನೇ ಸ್ಥಾನ. ನಮ್ಮ ನಂತರ ಕೇವಲ 15 ದೇಶಗಳಿವೆ. ದುರದೃಷ್ಟವೆಂದರೆ ನಮಗಿಂತ ಮೇಲೆ ಇಥಿಯೋಪಿಯ, ಕೀನ್ಯಾ, ಸುಡಾನ್ ಮುಂತಾದ ದೇಶಗಳಿವೆ. ನಮ್ಮ ಅಕ್ಕಪಕ್ಕದ ದೇಶಗಳಾದ ಪಾಕಿಸ್ತಾನ 99 ನೇ ಸ್ಥಾನ, ಬಾಂಗ್ಲಾ ದೇಶ 84 ನೇ ಸ್ಥಾನ, ನೇಪಾಳ 81 ನೇ ಸ್ಥಾನ, ನಮ್ಮದು 107 ನೇ ಸ್ಥಾನ. ಇದು ದೇಶಕ್ಕೆ ಹೆಮ್ಮೆ ತರುವ ಸಂಗತಿಯೆ? ತನ್ನ ಜನರ ಹೊಟ್ಟೆಗೆ ಸಮರ್ಪಕವಾಗಿ ಅನ್ನ ಸಿಗುವಂತೆ ನೋಡಿಕೊಳ್ಳದ ದೇಶ ವಿಶ್ವಗುರುವಾಗಲು ಸಾಧ್ಯವೆ? ಹಸಿವಿನ ಸೂಚ್ಯಂಕವನ್ನು ಜನರ ಅಪೌಷ್ಟಿಕತೆ, ಶಿಶುಮರಣ, ಮಕ್ಕಳ ವಯಸ್ಸಿಗನುಗುಣವಾಗಿ ಎತ್ತರ ಮತ್ತು ತೂಕಗಳನ್ನು ಮಾನದಂಡವನ್ನಾಗಿ ಇಟ್ಟುಕೊಂಡು ವರದಿಯನ್ನು ಸಿದ್ಧಪಡಿಸಲಾಗುತ್ತದೆ ಎಂದು ಹೇಳಿದರು.

ಪರಿಸ್ಥಿತಿ ಹೀಗಿದ್ದರೂ ಬಿಜೆಪಿಯು ಅತ್ಯಂತ ಕ್ಷುಲ್ಲಕವಾದ ಆಹಾರದ ರಾಜಕಾರಣವನ್ನು ಮಾಡುತ್ತಿದೆ. ಮಾಂಸಾಹಾರದ ಮೇಲೆ ದಾಳಿ ನಡೆಸುತ್ತಿದೆ. ಮನುಷ್ಯರಿಗೆ ಅತ್ಯಂತ ಅಗತ್ಯವಾಗಿ ಬೇಕಾದ ಪ್ರೋಟೀನುಗಳನ್ನು ಒದಗಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ರಾಜ್ಯದಲ್ಲಿ ನಮ್ಮ ಸರ್ಕಾರ ಇದ್ದಾಗ ಪ್ರತಿ ಬಿಪಿಎಲ್ ಕಾರ್ಡುದಾರರಿಗೆ ತೊಗರಿಬೇಳೆ ನೀಡುತ್ತಿದ್ದೆವು. ಬೇಳೆ ನೀಡುವ ಯೋಜನೆಯನ್ನು ಬಿಜೆಪಿ ಸರ್ಕಾರ ರದ್ದು ಮಾಡಿ 3 ವರ್ಷಗಳಾದವು ಎಂದು ಹೇಳಿದರು.

ಮನಮೋಹನಸಿಂಗರ ನೇತೃತ್ವದ ಸರ್ಕಾರ ಆಹಾರ ಖಾತ್ರಿ ಯೋಜನೆಯನ್ನು ಜಾರಿಗೆ ತಂದು ಅದನ್ನು ಕಡ್ಡಾಯವಾದ ಹಕ್ಕನ್ನಾಗಿಸಿತು. ಜನರಿಗೆ ಸಮರ್ಪಕವಾದ ಅನ್ನ ನೀಡಬೇಕಾದುದು ಸರ್ಕಾರದ ಜವಾಬ್ಧಾರಿ. ಆದರೆ ಬಡಜನರನ್ನು ಹಸಿವು ಮುಂತಾದ ಸಂಕಷ್ಟಗಳಿಂದ ಮೇಲೆತ್ತಲು ನೀಡುತ್ತಿರುವ ಸಬ್ಸಿಡಿಗಳನ್ನೆ ರದ್ದು ಮಾಡಬೇಕೆಂದು ಬಿಜೆಪಿ ಪ್ರತಿಪಾದಿಸುತ್ತಿದೆ.

ಜಾಗತಿಕ ಸಂಸ್ಥೆಗಳು ನಿರಂತರವಾಗಿ ಬಿಡುಗಡೆ ಮಾಡುತ್ತಿರುವ ಅಧ್ಯಯನ ವರದಿಗಳು ಮತ್ತು ಅಂಕಿಅಂಶಗಳನ್ನು ತಳ್ಳಿ ಹಾಕಲೆತ್ನಿಸುವ ನರೇಂದ್ರ ಮೋದಿಯವರ ನೇತೃತ್ವದ ಬಿಜೆಪಿಯು ಯೋಜನಾ ಆಯೋಗವನ್ನೆ ಬರ್ಖಾಸ್ತು ಮಾಡಿದೆ. ಕೇಂದ್ರ ಸರ್ಕಾರವು ನಿಗಧಿತವಾಗಿ ನಡೆಸುವ ಅಧ್ಯಯನಗಳನ್ನೆ ನಿಲ್ಲಿಸಿಬಿಟ್ಟಿದೆ. ಮುಖ್ಯವಾಗಿ ಸಿಎಜಿ ಆಡಿಟ್ಟುಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ರಾಷ್ಟ್ರೀಯ ಅಂಕಿ ಅಂಶಗಳ ಇಲಾಖೆಯು ನಡೆಸುವ ಸರ್ವೆಗಳನ್ನು ಸಂಪೂರ್ಣವಾಗಿ ನಿಲ್ಲಿಸಲಾಗಿದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಯುಪಿಎ ಸರ್ಕಾರ ನಡೆಸಿದ ಸರ್ವೆಗಳನ್ನು ಬಿಟ್ಟರೆ ಹೊಸ ಸರ್ವೆಗಳು ನಡೆದಿಲ್ಲ. 2018 ರಲ್ಲಿ ಎನ್ಎಸ್ಎಸ್ಒ ಸರ್ವೆ ನಡೆಸಿತಾದರೂ ಅದರ ಅಂಕಿಅಂಶಗಳು ಕೇಂದ್ರ ಸರ್ಕಾರಕ್ಕೆ ವಿರುದ್ಧವಾಗಿದ್ದ ಕಾರಣ ವರದಿಯನ್ನೆ ಬಿಡುಗಡೆ ಮಾಡಲಿಲ್ಲ. 2021 ರಲ್ಲಿ ದೇಶದ ಜನಗಣತಿ ನಡೆಯಬೇಕಾಗಿತ್ತು. ಕೋವಿಡ್ ಮುಗಿದ ಕೂಡಲೆ ಜಗತ್ತಿನ ಅನೇಕ ದೇಶಗಳು ಜನಗಣತಿ ನಡೆಸಿದವು. ಮೋದಿ ಸರ್ಕಾರ ಇದುವರೆಗೂ ಏನನ್ನೂ ಮಾಡದೆ ಸುಮ್ಮನೆ ಕೂತಿದೆ. ಜನಗಣತಿ ನಡೆದರೆ ಕೋವಿಡ್ನಿಂದ ಮರಣ ಹೊಂದಿದ ಜನರ ವಿವರವೂ ಸೇರಿದಂತೆ ಅನೇಕ ಸಂಗತಿಗಳು ಬಹಿರಂಗವಾಗುತ್ತವೆ ಎಂದು ಮೌನ ವಹಿಸಲಾಗಿದೆ. ಮೋದಿಯವರು ಭಾರತವನ್ನು ಯಾವ ದುರ್ಗತಿಗೆ ಇಳಿಸಿದ್ದಾರೆಂದರೆ 2014 ರಲ್ಲಿ ಭಾರತದ ತಲಾವಾರು ಜಿಡಿಪಿ 1573 ಡಾಲರುಗಳಷ್ಟಿತ್ತು. 2022 ರಲ್ಲಿ 1850 ಡಾಲರುಗಳಷ್ಟಿರಲಿದೆ ಎಂದು ಅಂದಾಜು ಮಾಡಲಾಗಿದೆ ಎಂದರು.

ಬಾಂಗ್ಲಾದೇಶದಲ್ಲಿ 2014 ರಲ್ಲಿ 1118 ಡಾಲರುಗಳಷ್ಟಿದ್ದ ತಲಾವಾರು ಜಿಡಿಪಿಯು 2021 ರಲ್ಲಿ 2503 ಡಾಲರುಗಳಷ್ಟಾಗಿತ್ತೆಂದು ಅಂಕಿ ಅಂಶಗಳು ಹೇಳುತ್ತಿವೆ. ವಿಶ್ವಬ್ಯಾಂಕಿನ ಅಂಕಿ ಅಂಶಗಳು ಭಾರತದಲ್ಲಿ ಇನ್ನೂ ದಯನೀಯವಾದ ಪರಿಸ್ಥಿತಿಯಿದೆಯೆಂದು ಹೇಳುತ್ತಿವೆ. ಮನಮೋಹನಸಿಂಗರು 2004 ರಲ್ಲಿ ಪ್ರಧಾನಿಯಾದಾಗ ಭಾರತದ ತಲಾವಾರು ಜಿಡಿಪಿಯು 546 ಡಾಲರುಗಳಿಷ್ಟಿತ್ತು. ಅವರು ಅಧಿಕಾರದಿಂದ ಇಳಿಯುವ ವೇಳೆಗೆ 1500 ಡಾಲರಿಗೂ ಅಧಿಕ ಪ್ರಮಾಣದಲ್ಲಿತ್ತು. ಯುಪಿಎ ಕಾಲದಲ್ಲಿ 3 ಪಟ್ಟು ಆದಾಯವು ಹೆಚ್ಚಾಗಿತ್ತು. ಆದರೆ ಮೋದಿಯಯವರ 8 ವರ್ಷಗಳ ಅವಧಿಯಲ್ಲಿ ಕೇವಲ 350 ಡಾಲರುಗಳು ಮಾತ್ರ ಹೆಚ್ಚಾಗಿದೆ ಎಂಬ ಅಂಶವು ಆಘಾತಕಾರಿಯಾಗಿದೆ. ಹಣದುಬ್ಬರವನ್ನು ಲೆಕ್ಕ ಹಾಕಿದರೆ ಇದು ನೆಗೆಟಿವ್ ಬೆಳವಣಿಗೆಯಾಗುತ್ತದೆ. ಬಹುಪಾಲು ಜನರಿಗೆ ನಿಧಾನಕ್ಕೆ ಅರ್ಥವಾಗುತ್ತಿರುವ ಸಂಗತಿ, ‘ನಮೋ’ ಎಂದರೆ ಜನರನ್ನು “ ನಂಬಿಸಿ ಮೋಸ ಮಾಡುವವರು” ಎಂದು. ನಂಬಿಸಿ ಮೋಸ ಮಾಡಿದ್ದೆ ಮೋದಿಯವರು ಈ ದೇಶದ ಜನರಿಗೆ ಕೊಟ್ಟ ಮಹಾನ್ ಕೊಡುಗೆ ಎಂದು ಹೇಳಿದರು.

ಇಂದು ಮೋದಿಯವರ ನೇತೃತ್ವದ ಬಿಜೆಪಿ ಸರ್ಕಾರವು ಸರ್ವರಂಗಗಳಲ್ಲೂ ವಿಫಲವಾಗಿದೆ. ದೇಶವು ಭಾರಿ ಗಂಡಾಂತರವನ್ನು ಎದುರಿಸುತ್ತಿದೆ. ಸುಳ್ಳು ಭಾಷಣಗಳನ್ನು ಬಿಟ್ಟರೆ ಯಾವ ಸಾಧನೆಯೂ ಇಲ್ಲ. ಭಾರತವನ್ನು ಹಿಂದೆ ತಳ್ಳಿ ನಮ್ಮ ಅಕ್ಕ ಪಕ್ಕದ ದೇಶಗಳು ಮುಂದು ಮುಂದಕ್ಕೆ ಹೋಗುತ್ತಿವೆ.

ಈ ವಿಚಾರವನ್ನು ಮರೆಮಾಚುವುದಕ್ಕೋಸ್ಕರವೆ ಧರ್ಮ, ಜಾತಿ, ಕೋಮು ದ್ವೇಷಗಳನ್ನು ಮುಂದೆ ಮಾಡಿಕೊಂಡು ಜನರನ್ನು ದಾರಿ ತಪ್ಪಿಸಲಾಗುತ್ತಿದೆ. ದೇಶ ಒಂದೇ ಸಮನೆ ಅಧಃಪತನದ ಹಾದಿ ಹಿಡಿದಿದ್ದರೂ ಅದನ್ನು ಉದ್ಧಾರವಾಗುತ್ತಿದೆಯೆಂದು ಬಿಂಬಿಸಲಾಗುತ್ತಿದೆ. ಇದನ್ನು ಅರಿತುಕೊಳ್ಳದಿದ್ದರೆ ಈ ದೇಶದ ಬಡವರು, ಮಧ್ಯಮವರ್ಗದವರು, ದಲಿತರು, ರೈತರು, ಹಿಂದುಳಿದವರು, ಪಶುಪಾಲಕರು, ಆದಿವಾಸಿಗಳು, ಮಹಿಳೆಯರು, ಕಾರ್ಮಿಕರು, ಕುಶಲಕರ್ಮಿಗಳಾದಿಯಾಗಿ ಯಾರಿಗೂ ಉಳಿಗಾಲವಿಲ್ಲ ಎಂದು ಸಿದ್ದರಾಮಯ್ಯ ಹೇಳಿದru

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ