ಶುಕ್ರವಾರ, ಮಾರ್ಚ್ 14, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಜೆಡಿಎಸ್‌ ಈ ಬಾರಿ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರುವುದಿಲ್ಲ, 20 ಸೀಟು ಗೆದ್ದರೆ ಜಾಸ್ತಿ: ಸಿದ್ದರಾಮಯ್ಯ

Twitter
Facebook
LinkedIn
WhatsApp
siddaramaiah1650518424

ಮೈಸೂರು (ಜ.21): ಜೆಡಿಎಸ್‌ ಈ ಬಾರಿ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರುವುದಿಲ್ಲ. ಅವರು ಯಾವಾಗಲೂ ಗೆದ್ದೆತ್ತಿನ ಬಾಲ ಹಿಡಿಯುವ ಕೆಲಸ ಮಾಡುತ್ತಾರೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ. ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡರ ತವರು, ಮೈಸೂರು ತಾಲೂಕಿನ ಲಿಂಗದೇವರಕೊಪ್ಪಲು ಬಳಿ ಶುಕ್ರವಾರ ನಡೆದ ಚಾಮುಂಡೇಶ್ವರಿ ಕ್ಷೇತ್ರದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಮುಂದಿನ ಚುನಾವಣೆಯಲ್ಲಿ ಬಿಜೆಪಿ ಜೊತೆ ಜೆಡಿಎಸ್‌ ಒಳ ಒಪ್ಪಂದ ಮಾಡಿಕೊಂಡರೂ ಈ ಬಾರಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್‌ ಸೋಲು ಖಚಿತ ಎಂದು ಭವಿಷ್ಯ ನುಡಿದರು.

ಜೆಡಿಎಸ್‌ ಯಾವಾಗಲೂ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬಂದಿಲ್ಲ. ಈ ಹಿಂದೆ ನಾನು ಆ ಪಕ್ಷದ ರಾಜ್ಯಾಧ್ಯಕ್ಷನಾಗಿ, ದೇವೇಗೌಡರು ರಾಷ್ಟ್ರೀಯ ಅಧ್ಯಕ್ಷರಾಗಿದ್ದಾಗಲೂ ಅದು ಸಾಧ್ಯವಾಗಿಲ್ಲ. 2018ರಲ್ಲಿ ಅದು 37 ಸ್ಥಾನ ಗೆದ್ದಿತ್ತು. ಆದರೆ, ಈ ಬಾರಿ 20 ಸ್ಥಾನ ಗೆದ್ದರೆ ಅದೇ ಜಾಸ್ತಿ. ಕುಮಾರಸ್ವಾಮಿ ಹೇಳುವಂತೆ 120 ಸ್ಥಾನ ಬರುವುದು ಅಸಾಧ್ಯ. ಗೆದ್ದೆತ್ತಿನ ಬಾಲ ಹಿಡಿದು ತಮ್ಮ ಬೇಳೆಕಾಳು ಬೇಯಿಸಿಕೊಳ್ಳಲು ಮುಂದಾಗುತ್ತಾರೆ. 2018ರಲ್ಲಿ ಕಡಿಮೆ ಸ್ಥಾನ ಗೆದ್ದಿದ್ದ ಜೆಡಿಎಸ್‌ಗೆ ಸಿಎಂ ಸ್ಥಾನ ಕೊಡಲಾಯಿತು. 

ಆದರೆ, ಅವರು ಕಾಂಗ್ರೆಸ್‌ನವರನ್ನು ಕ್ಯಾರೆ ಅನ್ನಲಿಲ್ಲ. ಶಾಸಕರ ಮಾತಿಗೆ ಸ್ಪಂದಿಸಲಿಲ್ಲ. ಕುಮಾರಸ್ವಾಮಿಯವರು ಆಡಳಿತ ಮಾಡುವ ಬದಲಿಗೆ ವಿದೇಶದಲ್ಲಿ ಹೋಗಿ ಕುಳಿತರು. ಒಂದು ವೇಳೆ ಇಲ್ಲೇ ಇದ್ದು ಅಧಿಕಾರ ನಡೆಸಿದ್ದರೆ ‘ಆಪರೇಷನ್‌ ಕಮಲ’ ನಡೆಯುತ್ತಿರಲಿಲ್ಲ. ಅಲ್ಲಮಪ್ರಭು ವಚನದ ಮಾತಿನಂತೆ ಕೊಟ್ಟಕುದುರೆಯನ್ನು ಏರದವ ಶೂರನೂ ಅಲ್ಲ, ವೀರನೂ ಅಲ್ಲ ಎನ್ನುವಂತೆ ಆಡಳಿತ ನಡೆಸಲು ಸಾಧ್ಯವಾಗಲಿಲ್ಲ ಎಂದು ಕುಟುಕಿದರು.

ಕಾಂಗ್ರೆಸ್‌ ಸೇರಿದ ಜೆಡಿಎಸ್‌ ನಾಯಕರು: ಕಾರ್ಯಕ್ರಮದಲ್ಲಿ ಬನ್ನೂರು ಕ್ಷೇತ್ರದ ಮಾಜಿ ಶಾಸಕಿ ಜೆ. ಸುನೀತಾ ವೀರಪ್ಪಗೌಡ, ಪುರಸಭಾ ಮಾಜಿ ಸದಸ್ಯರಾದ ಎಸ್‌. ಸಿದ್ದೇಗೌಡ, ಡಾ. ಜ್ಞಾನಪ್ರಕಾಶ್‌, ತಾಪಂ ಮಾಜಿ ಅಧ್ಯಕ್ಷ ಬಸವೇಗೌಡ, ಸದಸ್ಯ ತೊಟ್ಟವಾಡಿ ಮಹದೇವಸ್ವಾಮಿ, ಗ್ರಾಪಂ ಮಾಜಿ ಸದಸ್ಯ ಬಸವೇಗೌಡ ಸೇರಿದಂತೆ ಜೆಡಿಎಸ್‌ನ ಹಲವು ನಾಯಕರು ಕಾಂಗ್ರೆಸ್‌ ಸೇರಿದರು. ಸಿದ್ದರಾಮಯ್ಯ, ಮಾಜಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಅವರು ಪಕ್ಷದ ಶಾಲನ್ನು ಹಾಕುವ ಮೂಲಕ ಸ್ವಾಗತಿಸಿದರು.

ಯಾರಿಗೆ ಟಿಕೆಟ್‌ ಕೊಟ್ಟರು ಗೆಲ್ಲಿಸಿ: ಜಿಪಂ ಮಾಜಿ ಅಧ್ಯಕ್ಷ ಹಾಗೂ ಕೆಪಿಸಿಸಿ ಸದಸ್ಯ ಕೆ. ಮರಿಗೌಡ ಮಾತನಾಡಿ, 2018ರ ಚುನಾವಣೆ ಸೋಲನ್ನು ಮರೆಸಲು ಈ ಬಾರಿ ಐತಿಹಾಸಿಕ ತೀರ್ವಾನ ಮಾಡಬೇಕು. ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್‌ ನೀಡಿದರು ಒಗ್ಗಟ್ಟಿನಿಂದ ಕೆಲಸ ಮಾಡಿ ಪಕ್ಷ ಗೆಲ್ಲಿಸಿ ಇತಿಹಾಸ ಸೃಷ್ಟಿಸಬೇಕು ಎಂದರು. ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡರು ಕಾಂಗ್ರೆಸ್‌, ಬಿಜೆಪಿ ಸೇರುತ್ತೇನೆ ಎಂದು ಬುಡುಬುಡಿಕೆ ಮಾತುಗಳನ್ನಾಡಿದರು. ಸ್ವ ಪಕ್ಷದ ಮುಖಂಡರಿಗೆ ಅನ್ಯಾಯ ಮಾಡಿದರು. ಸಿದ್ದರಾಮಯ್ಯ ಕಾಲದಲ್ಲಿ ಮಂಜೂರಾಗಿದ್ದ ಯೋಜನೆಗಳಿಗೆ ಗುದ್ದಲಿ ಪೂಜೆ, ಉದ್ಘಾಟನೆ ನೆರವೇರಿಸುವ ಕೆಲಸ ವಾಡುತ್ತಿದ್ದಾರೆ ಎಂದು ಅವರು ಟೀಕಿಸಿದರು.

ಸಿದ್ದರಾಮಯ್ಯಗೆ ಅದ್ಧೂರಿ ಸ್ವಾಗತ: ಚಾಮುಂಡೇಶ್ವರಿ ಕ್ಷೇತ್ರದ ಸ್ವಾಭಿವಾನಿ ಪಡೆ ಕಾಂಗ್ರೆಸ್‌ ಸೇರ್ಪಡೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಕಾರ್ಯಕರ್ತರು ಆತ್ಮೀಯ ಸ್ವಾಗತ ಕೋರಿದರು. ಹಲವು ತಿಂಗಳ ಬಳಿಕ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಬಂದ ಸಿದ್ದರಾಮಯ್ಯ ಅವರಿಗೆ ಭರ್ಜರಿ ಸ್ವಾಗತ ಕೋರಲಾಯಿತು. ಹಿನಕಲ್‌ ಗ್ರಾಮದ ನನ್ಮೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಸಿದ್ದರಾಮಯ್ಯ ಅವರು ಕಾರ್ಯಕರ್ತರ ಬೈಕ್‌ ರಾರ‍ಯಲಿಗೆ ಚಾಲನೆ ನೀಡಿದರು. ಅಲ್ಲಿಂದ ಹೊರಟು ಹಿನಕಲ್‌ ಮುಖ್ಯ ರಸ್ತೆಗೆ ಬರುತ್ತಿದ್ದಂತೆ ಕ್ರೇನ್‌ನಲ್ಲಿ ಬೃಹತ್‌ ಗಾತ್ರದ ಸೇಬಿನ ಹಾರ ಹಾಕಿ, ಪಟಾಕಿ ಸಿಡಿಸಲಾಯಿತು. ನಂತರ ಹೂಟಗಳ್ಳಿ ಮುಖ್ತ ರಸ್ತೆಯಲ್ಲಿ ಜವಾಯಿಸಿದ್ದ ಮುಖಂಡರು ಹಾರ ಹಾಕಿದರೆ, ಕ್ರೇನ್‌ ನಲ್ಲಿ ಪುಷ್ಪರಾಶಿ ಸುರಿಯಲಾಯಿತು.

ಹೌಸಿಂಗ್‌ ಬೋರ್ಡ್‌ ಕಾಲೋನಿ, ರಿಂಗ್‌ ರಸ್ತೆಯಲ್ಲೂ ಸ್ವಾಗತ ಕೋರಲಾಯಿತು. ಲಿಂಗದೇವರ ಕೊಪ್ಪಲು ಪ್ರವೇಶಿಸುತ್ತಿದ್ದಂತೆಯೇ ಪೂರ್ಣಕುಂಭದೊಡನೆ ಸ್ವಾಗತಿಸಲಾಯಿತು. ಒಂದು ಸಾವಿರಕ್ಕೂ ಹೆಚ್ಚು ಬೈಕ್‌ಗಳಲ್ಲಿ ಕಾರ್ಯಕರ್ತರು ಕಾಂಗ್ರೆಸ್‌ ಬಾವುಟ ಕಟ್ಟಿಕೊಂಡು ದಾರಿ ಉದ್ದಕ್ಕೂ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌ ಪರ ಘೋಷಣೆ ಕೂಗಿದರು. ವೇದಿಕೆ ಏರುತ್ತಿದ್ದಂತೆಯೇ ಸಭೀಕರತ್ತ ಕೈ ಬೀಸಿದ, ಎರಡೂ ಕೈಗಳಿಂದ ನಮಸ್ಕಾರ ಮಾಡಿದರು. ಕಾರ್ಯಕರ್ತರು ಶಿಳ್ಳೆ, ಚಪ್ಪಾಳೆ ಹೆಚ್ಚಾದಂತೆಯೇ ವೇದಿಕೆಯ ಎಡ, ಬಲ ಮಧ್ಯದಲ್ಲಿ ಕುಳಿತವರಿಗೆ ನಮಸ್ಕರಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist