ಶನಿವಾರ, ಮೇ 11, 2024
ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!-ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಜೇಬಿನಲ್ಲಿದ್ದಾಗಲೇ ಮೊಬೈಲ್‌ ಸ್ಫೋಟ: 76ರ ವೃದ್ಧ ಅಪಾಯದಿಂದ ಪಾರು!

Twitter
Facebook
LinkedIn
WhatsApp
kohli faf du plessis rcb 1681112710 2

ತ್ರಿಶ್ಶೂರು:  ಕೇರಳದ ತ್ರಿಶ್ಶೂರು ಸನಿಹ 76 ವರ್ಷದ ವೃದ್ಧನೊಬ್ಬನ ಮೊಬೈಲ್‌, ಆತನ ಅಂಗಿಯ ಜೇಬಿನಲ್ಲೇ ಸ್ಫೋಟಗೊಂಡಿದೆ. ಅದೃಷ್ಟವಶಾತ್‌ ಆತ ಅಪಾಯದಿಂದ ಪಾರಾಗಿದ್ದಾನೆ. ಜೇಬಿನಲ್ಲಿ ಮೊಬೈಲ್‌ ಇಟ್ಟುಕೊಂಡು ಹೋಟೆಲ್‌ನಲ್ಲಿ ಕುಳಿತು ಚಹಾ ಸೇವಿಸುತ್ತಿದ್ದ. ಆಗ ಜೇಬಿನಲ್ಲಿದ್ದ ಮೊಬೈಲ್‌ ಸಿಡಿದಿದೆ. ಬಳಿಕ ತಕ್ಷಣ ಅದನ್ನು ಕೆಳಗೆ ಎಸೆದಿದ್ದಾನೆ. ಎಸೆದ ತಕ್ಷಣ ಅದು ಸಂಪೂರ್ಣ ಬೆಂಕಿಗಾಹುತಿಯಾಗಿದೆ.  ವ್ಯಕ್ತಿಯ ಸಮಯ ಪ್ರಜ್ಞೆಯಿಂದಾಗಿ ಆತ ಅಪಾಯದಿಂದ ಪಾರಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.  ಇತ್ತೀಚೆಗೆ ಕೇರಳದಲ್ಲಿ ಈ ರೀತಿಯ ಮೊಬೈಲ್‌ ಸ್ಫೋಟ ಘಟನೆ ಮೂರನೇ ಬಾರಿ ನಡೆದಿದ್ದು, ಕಳೆದ ವಾರ ಕಲ್ಲಿಕೋಟೆಯಲ್ಲಿ ಹಾಗೂ ಏ.24ರಂದು ತ್ರಿಶ್ಶೂರ್‌ನಲ್ಲಿ ಮೊಬೈಲ್‌ ಸ್ಫೋಟಕ್ಕೆ ಮಗು ಬಲಿಯಾಗಿತ್ತು.

ಇಲಿಯಾಸ್ ಅಪಾಯದಿಂದ ಪಾರಾದ ವ್ಯಕ್ತಿ. ಗುರುವಾರ ಬೆಳಗ್ಗೆ 10 ಗಂಟೆಗೆ ಈ ಘಟನೆ ನಡೆದಿದ್ದು, ಇಲಿಯಾಸ್ (Iliyas) ಮರೋಟ್ಟಿಚಾಲ್ ಪ್ರದೇಶದ ಚಹಾ ಅಂಗಡಿಯಲ್ಲಿ ಕುರ್ಚಿಯ ಮೇಲೆ ಕುಳಿತು ಚಹಾ ಸೇವಿಸುತ್ತಿದ್ದಾಗ ಘಟನೆ ನಡೆದಿದೆ. ಕೂಡಲೇ ಚಹಾ ಅಂಗಡಿಯವರು ಕೂಡ ಆತನ ನೆರವಿಗೆ ಬಂದಿದ್ದಾರೆ.  ಘಟನೆಯ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ (Social Media) ವೈರಲ್ ಆಗಿದೆ. ವೀಡಿಯೊದಲ್ಲಿ ಕಾಣಿಸುವಂತೆ ವೃದ್ಧರೊಬ್ಬರು ಚೇರ್‌ನಲ್ಲಿ ಕುಳಿತು ಚಹಾ (Tea) ಸೇವಿಸುತ್ತಿದ್ದು, ಇದ್ದಕ್ಕಿದ್ದಂತೆ ಅವರ ಜೇಬಿನಲ್ಲಿದ್ದ ಮೊಬೈಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಅವರು ಮೊಬೈಲ್ ಅನ್ನು ಕೆಳಕ್ಕೆಸೆದಿದ್ದಾರೆ. ಅಷ್ಟರಲ್ಲೇ ಅದು ಸ್ಪೋಟಿಸಿದೆ. 

ಘಟನೆಗೆ ಸಂಬಂಧಿಸಿದಂತೆ ಒಲ್ಲೂರು ಪೊಲೀಸ್ ಅಧಿಕಾರಿ (Police Officer) ಸುದ್ದಿಸಂಸ್ಥೆ ಪಿಟಿಐಗೆ ಮಾಹಿತಿ ನೀಡಿದ್ದು,  ಘಟನೆಗೆ ಸಂಬಂಧಿಸಿದಂತೆ ಮಾಹಿತಿ ಕೇಳಲು ವೃದ್ಧನನ್ನು ಪೊಲೀಸ್ ಠಾಣೆಗೆ ಕರೆಸಿದ್ದೆವು. ಆತ ನೀಡಿದ ಮಾಹಿತಿಯಿಂತೆ ಈ ಫೋನ್‌ ಅನ್ನು ವರ್ಷದ ಹಿಂದೆ 1000 ರೂ ನೀಡಿ ಆತ ಖರೀದಿಸಿದ್ದ, ಇದೊಂದು ಸಾಮಾನ್ಯ ಫೀಚರ್‌ಗಳಿರುವ ಫೋನ್ ಆಗಿದ್ದು, ಇಲ್ಲಿಯವರೆಗೆ ಈ ಮೊಬೈಲ್‌ನಲ್ಲಿ ಯಾವುದೇ ದ್ವೇಷ ಕಂಡು ಬಂದಿರಲಿಲ್ಲ ಎಂದು ಹೇಳಿದ್ದಾಗಿ ಮಾಹಿತಿ ನೀಡಿದರು. ಇತ್ತ ಮೊಬೈಲ್ ಸ್ಫೋಟದಿಂದ ಆತ ಪಾರಾಗಿದ್ದರು ಕೆಲ ಸುಟ್ಟ ಗಾಯಗಳಾಗಿವೆ.    

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ