ಸೋಮವಾರ, ಏಪ್ರಿಲ್ 29, 2024
ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಟಿಪ್ಪು ಮತಾಂತರ ಮಾಡಿದ್ದ ಸತ್ಯವನ್ನು ಪಠ್ಯದಲ್ಲಿ ಸೇರಿಸಿದ್ದೇವೆ- ಬಿ.ಸಿ. ನಾಗೇಶ್

Twitter
Facebook
LinkedIn
WhatsApp
ಟಿಪ್ಪು ಮತಾಂತರ ಮಾಡಿದ್ದ ಸತ್ಯವನ್ನು ಪಠ್ಯದಲ್ಲಿ ಸೇರಿಸಿದ್ದೇವೆ- ಬಿ.ಸಿ. ನಾಗೇಶ್

ಬೆಂಗಳೂರು: ಶಾಲಾ ಹಾಗೂ ಕಾಲೇಜು ಪಠ್ಯ ಪುಸ್ತಕ ಪರಿಷ್ಕರಣೆ ಬಗ್ಗೆ ಏರ್ಪಟ್ಟಿರುವ ಗೊಂದಲ ಬಗ್ಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸ್ಪಷ್ಟನೆ ನೀಡಿದ್ದಾರೆ. ನಮ್ಮ ಸರ್ಕಾರದ ಕೆಲಸಗಳನ್ನು ಸಹಿಸಿಕೊಳ್ಳದೇ ಅನಾವಶ್ಯಕವಾಗಿ ಸುಳ್ಳು ಪ್ರಚಾರ ಮಾಡಿ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಪರೋಕ್ಷವಾಗಿ ಕಾಂಗ್ರೆಸ್‌ಗೆ ಟಾಂಗ್ ನೀಡಿದ್ದಾರೆ.

 

ದ್ವಿತೀಯ ಪಿಯುಸಿ ಇತಿಹಾಸ ಪಠ್ಯ ಪುಸ್ತಕ ಪರಿಷ್ಕರಣೆಯನ್ನು ರೋಹಿತ್ ಚಕ್ರತೀರ್ಥ ಸಮಿತಿಗೆ ವಹಿಸಿರುವ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸುದ್ದಿಗೋಷ್ಠಿ ಕರೆದು ಸ್ಪಷ್ಟನೆ ನೀಡಿದರು.

 

”ಕಳೆದ ವರ್ಷ ಹಲವರು ಕಾರಣಗಳಿಂದ ಶಾಲೆ ಆರಂಭವಾಗಲ್ಲ ಎಂದಿದ್ದರು. ಶಾಲೆ ಪ್ರಾರಂಭ ಎಂದಾಗಲೂ ಕೋವಿಡ್ ನೆಪ ಹೇಳಿದ್ದರು. ಬಡವರ ಪ್ರಾಣದ ಜತೆ ಚೆಲ್ಲಾಟ ಎಂದಿದ್ದರು.

 

ಶಾಲೆಯಲ್ಲಿನ ಬಡ ವಿದ್ಯಾರ್ಥಿಗಳ ವ್ಯಾಸಂಗ ಗಮನಿಸಿ ಸರ್ಕಾರ ಶಾಲೆ ಪ್ರಾರಂಭಿಸಿತು. ಹಿಜಾಬ್ ವಿಚಾರದಲ್ಲಿ ತಗಾದೆ ತೆಗೆದರು. ಅದು ಸರಿಯಾಗಲಿಲ್ಲ. ಕೋರ್ಟ್ ಆದೇಶ ಬಂದಾಗ ಅದನ್ನೂ ಸಹಿಸಲಿಲ್ಲ. ಬೊಮ್ಮಾಯಿ ಸರ್ಕಾರದ ಕೆಲಸಗಳನ್ನು ಸಹಿಸದೇ ವಿರೋಧ ಪಕ್ಷದವರು ಗೊಂದಲ ಸೃಷ್ಟಿಸುತ್ತಿದ್ದಾರೆ,” ಎಂದು ಆರೋಪಿಸಿದರು.

ಬೊಮ್ಮಾಯಿ ಸರ್ಕಾರ ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡುತ್ತಿದೆ. ಹದಿನೈದು ಸಾವಿರ ಶಿಕ್ಷಕರ ನೇಮಕಾತಿ ಆಗುತ್ತಿದೆ. 27 ಸಾವಿರ ಅತಿಥಿ ಶಿಕ್ಷಕರ ನೇಮಕಾತಿ ಸಹಿಸೋಕೆ ವಿರೋಧ ಪಕ್ಷಕ್ಕೆ ಆಗುತ್ತಿಲ್ಲ. 7000 ಶಾಲಾ ಕಟ್ಟಡ ನಿರ್ಮಾಣ ಮಾಡಿದರು. ಕಲಿಕಾ ಚೇತರಿಕೆ ಹಮ್ಮಿಕೊಂಡೆವು. ಇವನ್ನು ಸಹಿಸಲು ವಿರೋಧ ಪಕ್ಷಕ್ಕೆ ಆಗುತ್ತಿಲ್ಲ.

”ಪಠ್ಯ ಪುಸ್ತಕ ವಿಚಾರಕ್ಕೆ ಬಂದರೆ, ಟಿಪ್ಪು ಸುಲ್ತಾನ್ ಪಠ್ಯ ತೆಗೆಸಿದ್ದಾರೆ, ಭಗತ್ ಸಿಂಗ್ ಪಠ್ಯ ಬಿಟ್ಟಿದ್ದಾರೆ ಎಂದು ಹಬ್ಬಿಸಿದರು. ಶಿಕ್ಷಣ ಸಚಿವನಾಗಿ ನಾನು ಸ್ಪಷ್ಟನೆ ನೀಡಿದ್ದರೂ ಸುಳ್ಳು ಪ್ರಚಾರ ಮಾಡಿದರು. ಬಸವಣ್ಣ, ನಾರಾಯಣ ಗುರು, ಪಠ್ಯ ತೆಗೆಸಿದರು ಎಂದು ಹಬ್ಬಿಸಿದರು. ಈಗ ಕುವೆಂಪು ಪಠ್ಯ ಕುರಿತ ಗೊಂದಲ ಸೃಷ್ಠಿಸಿ ಜಾತಿ ವಿಚಾರ ಎಳೆದು ತರುತ್ತಿದ್ದಾರೆ” ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಕಿಡಿ ಕಾರಿದ್ದಾರೆ.

ಟಿಪ್ಪು ಸುಲ್ತಾನ್ ಮತಾಂತರ ಮಾಡ್ತಿದ್ದ. ಬಲವಂತವಾಗಿ ಟಿಪ್ಪು ಸುಲ್ತಾನ್ ಮತಾಂತರ ಮಾಡುತ್ತಿದ್ದ ಬಗ್ಗೆ ಉಲ್ಲೇಖಗಳಿವೆ. ಕೊಡಗು, ಮೈಸೂರು, ಮತಾಂತರ ಮಾಡಿದ್ದವ ಟಿಪ್ಪು ಮಾಡಿದ್ದು ಸತ್ಯ.. ಅವರ ಬಗ್ಗೆ ನಿಜ ಬರೆಯಬೇಕಿತ್ತು. ಬ್ರಿಟಿಷರ ವಿರುದ್ದ ಹೋರಾಡಿದ್ದ ಕುರಿತು 10ನೇ ತರಗತಿ, ಸಂಗೊಳ್ಳಿ ರಾಯಣ್ಣ, ಅಬ್ಬಕ್ಕ, ಮದಕರಿ, ಎಲ್ಲರೂ ಬ್ರಿಟೀಷರ ವಿರುದ್ದ ಹೋರಾಡಿದವರೇ ಹಿಂದೂ ಎಂಬ ಕಾರಣಕ್ಕೆ ಅವರನ್ನೆಲ್ಲಾ ಕೈಬಿಟ್ಟು, ಟಿಪ್ಪು ಬಗ್ಗೆ ಮಾತ್ರ ಆರು ಪುಟ ಪಠ್ಯ ಸೇರಿಸಿದ್ದರು.

ಬರಗೂರು ರಾಮಚಂದ್ರಪ್ಪರಂತೆ ನಾವು ಕೆಟ್ಟರಾಜಕೀಯ ನಾವು ಮಾಡುವುದಿಲ್ಲ, ಟಿಪ್ಪು ಸುಲ್ತಾನ್ ಪಠ್ಯ ತೆಗೆದಿಲ್ಲ. ಇಂತಹ ಸತ್ಯವನ್ನು ಅಳವಡಿಸಿದ್ದೇವೆ ಎಂದು ಸ್ಪಷ್ಟಪಡಿಸಿದರು.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ

ಅಂಕಣ