ಬೆಂಗಳೂರು, ಮೇ29: ಟ್ರಾನ್ಸ್ಪೋರ್ಟ್ ಮಾಲೀಕನೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಹೆಸರಘಟ್ಟದ ಹಾವನೂರು ಬಡಾವಣೆಯಲ್ಲಿ ನಡೆದಿದೆ. ಮೂಡಬಿದಿರೆ ಮೂಲದ ಪ್ರಮೋದ್ ಹೆಗಡೆ (45) ನೇಣು ಬಿಗಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸಾಲದ ಕೂಪಕ್ಕೆ ಸಿಲುಕಿದ್ದ ಪ್ರಮೋದ್; ಪ್ರಮೋದ್ ಪೀಣ್ಯದಲ್ಲಿ ಟ್ರಾನ್ಪೋರ್ಟ್ ವ್ಯವಹಾರ ಮತ್ತು ಗಮ್ ಫ್ಯಾಕ್ಟರಿಯನ್ನು ನಡೆಸುತ್ತಿದ್ದರು. ಕೋವಿಡ್ನಿಂದ ಪ್ರಮೋದ್ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರು. ಆರ್ಥಿಕವಾಗಿ ಸಂಕಷ್ಟವಾದಗ ಸಾಲವನ್ನು ಮಾಡಿಕೊಂಡಿದ್ದರು. ಟ್ರಾನ್ಸ್ಪೋರ್ಟ್ ವ್ಯವಪಾರ ಅಷ್ಟಾಗಿ ನಡೆಯುತ್ತಿರಲಿಲ್ಲ ಇದರಿಂದಾಗಿ ಪ್ರಮೋದ್ ಆತ್ಮಹತ್ಯೆಯನ್ನು ಮಾಡಿಕೊಂಡಿದ್ದಾರೆ ಎಂದು ಪತ್ನಿ ವೀಣಾ ಹೆಗಡೆ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದಾರೆ.
ಪ್ರಮೋದ್ ಹೆಗಡೆ ಬೆಂಗೂರಿನ ಹೆಸರಘಟ್ಟ ಹಾವನೂರು ಬಡವಣೆಯಲ್ಲಿ ವಾಸವಾಗಿದ್ದರು. ಸ್ನೇಹಿತನ ಜೊತೆ ಹೋಗಿ ಬರುತ್ತೇನೆ ಎಂದು ಮನೆಯಲ್ಲಿ ಮಾಹಿತಿ ನೀಡಿದ್ದರು. ಕ್ರಿಕೆಟ್ ಪಂದ್ಯಾವಳಿಯನ್ನು ನೋಡಿಕೊಂಡು ರಾತ್ರಿ 10.30 ಸುಮಾರಿಗೆ ಮನೆಗೆ ವಾಪಸ್ಸಾಗಿದ್ದಾರೆ. ಆ ಬಳಿಕ ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾರೆ.
ಪತ್ನಿ ವೀಣಾ ಹೆಗಡೆ ನಿರಂತರವಾಗಿ ಪತಿ ಪ್ರಮೋದ್ ಹೆಗಡೆಗೆ ಕರೆ ಮಾಡಿದ್ದಾರೆ. ಆದರೆ ಪ್ರಮೋದ್ ಫೋನ್ ರಿಸೀವ್ ಮಾಡಿರಲಿಲ್ಲ ಇದರಿಂದ ತಮ್ಮ ಪರಿಚಯಸ್ಥ ಶಶಿಗೌಡಗೆ ಕರಮಾಡಿ ಪತಿಯ ಬಗ್ಗೆ ವಿಚಾರಿಸಿದ್ದಾರೆ. ಶಶಿಗೌಡ ಮನೆಗೆ ಬಂದು ನೋಡಿದಾಗ ನೇಣುಬಿಗಿದ ಸ್ಥಿತಿಯಲ್ಲಿ ಪ್ರಮೋದ್ ಮೃತದೇಹ ಪತ್ತೆಯಾಗಿದೆ. ತಕ್ಷಣಕ್ಕೆ ಬಾಗಲಗುಂಟೆ ಪೊಲೀಸರಿಗೆ ವಿಷಯವನ್ನು ಮುಟ್ಟಿಸಿದ್ದಾರೆ.
ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ
ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನೆಟ್ಟಿಬೈಲು ನಿವಾಸಿ ವಿನಾಯಕ ಭಟ್ (32) ಅವರು ತೀವ್ರ ಜ್ವರ ಬಾಧೆಯಿಂದ ಮೃತಪಟ್ಟಿದ್ದಾರೆ. ಅವರು ಸುಮಾರು ಹತ್ತು
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?