ಶುಕ್ರವಾರ, ಮೇ 3, 2024
ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಡಿಜೆ ಸೌಂಡ್‌ ಗದ್ದಲ, ಹಾರ ಬದಲಿಸುತ್ತಿದ್ದಂತೆ ಹೃದಯಾಘಾತವಾಗಿ ಸಾವನ್ನಪ್ಪಿದ ವರ!

Twitter
Facebook
LinkedIn
WhatsApp
photo 1621801306185 8c0ccf9c8eb8

ಬಿಹಾರ: ಮದುವೆಯ ವಿಧಿವಿಧಾನಗಳು ನಡೆಯುತ್ತಿದ್ದಾಗ ಹೃದಯಾಘಾತದಿಂದ ವರ ಸಾವನ್ನಪ್ಪಿದ್ದಾನೆ. ಬಿಹಾರದ ಸೀತಾಮರ್ಹಿ ಜಿಲ್ಲೆಯ ಸೋನ್‌ಬರ್ಸಾ ಬ್ಲಾಕ್‌ನ ಇಂದರ್ವಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ವಿವಾಹ ವಿಧಿವಿಧಾನಗಳು ನಡೆಯುತ್ತಿದ್ದ ವೇಳೆಯೇ ಯುವಕ ಕುಸಿದು ಬಿದ್ದು ಮೃತಪಟ್ಟಿದ್ದಾನೆ. ಮೃತರನ್ನು ಅದೇ ಜಿಲ್ಲೆಯ ಮಾಣಿಕ್ತಾರ್ ಗ್ರಾಮದ ಸುರೇಂದ್ರ ಎಂದು ಗುರುತಿಸಲಾಗಿದೆ. ಮದುವೆಯ ದಿಬ್ಬಣ ಸ್ಥಳಕ್ಕೆ ಆಗಮಿಸಿದ ನಂತರ ವಿವಾಹ ವಿಧಿವಿಧಾನಗಳು ನಡೆಯುತ್ತಿದ್ದ ಸಂದರ್ಭ ಘಟನೆ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಡಿಜೆ ಸೌಂಡ್‌ನಿಂದ ಅಸ್ವಸ್ಥತೆ ಅನುಭವಿಸಿದ್ದ ವರ
ಮದುವೆಯ (Marriage) ಶಾಸ್ತ್ರದಂತೆ ಹೂವಿನ ಮಾಲೆ ಹಾಕುವ ಸಂದರ್ಭ ಸುರೇಂದ್ರ ಅವರು ವೇದಿಕೆಯ ಮೇಲೆ ಹಠಾತ್ ಕುಸಿದು ಬಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅಲ್ಲಿಗೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ. ಸುರೇಂದ್ರ ಅವರು ವಿಪರೀತ ಡಿಜೆ ಸೌಂಡ್ ಹಾಕದಂತೆ ಮನವಿ ಮಾಡಿದ್ದರು. ಆದರೂ ಇದನ್ನು ನಿರ್ಲಕ್ಷಿಸಲಾಯಿತು ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಡಿಜೆ ಅಬ್ಬರ ಸಂಭ್ರಮದ ವಾತಾವರಣವನ್ನ ಶೋಕ ಸಾಗರವಾಗಿ ಪರಿವರ್ತಿಸಿದೆ. ವಧು-ವರರು (Bride-groom) ಹಾರಗಳನ್ನು ಬದಲಾಯಿಸಿಕೊಂಡ ಕೆಲವೇ ಕ್ಷಣಗಳಲ್ಲಿ ವರ ವೇದಿಕೆಯ ಮೇಲೆ ಕುಸಿದು ಬಿದ್ದಿದ್ದಾನೆ. ಹೈ ಡೆಸಿಬಲ್​ ಡಿಜೆ ಮ್ಯೂಸಿಕ್​ ಪರಿಣಾಮ ವರ ಅಸ್ವಸ್ಥನಾಗಿ ವೇದಿಕೆಯ ಮೇಲೆ ಕುಸಿದು ಬಿದ್ದಿದ್ದಾನೆ ಎಂದು ತಿಳಿದುಬಂದಿದೆ.

ಬುಧವಾರದಂದು ಸುರೇಂದ್ರ ಮತ್ತು ವಧು ಇಬ್ಬರೂ ಮದುವೆಗೆ ಸಿದ್ಧಪಡಿಸಲಾದ ವೇದಿಕೆ ಮೇಲೆ ನಿಂತಿದ್ದರು. ನವಜೋಡಿ ಹಾರ ಬದಲಾಯಿಸಿಕೊಂಡು ಇತರ ಧಾರ್ಮಿಕ ವಿಧಿಗಳನ್ನು ಮುಗಿಸಿದ್ದಾರೆ. ಈ ವೇಳೆ ಸುರೇಂದ್ರ ಅವರು ತಮ್ಮ ಮದುವೆಯ ಮೆರವಣಿಗೆಯಲ್ಲಿ ಪ್ಲೇ ಆಗುತ್ತಿದ್ದ ಡಿಜೆಯ ಭಾರಿ ಶಬ್ದವನ್ನು ತಗ್ಗಿಸುವಂತೆ ಹಲವು ಬಾರಿ ಮನವಿ ಮಾಡಿದ್ದಾರೆ. ಆದರೂ ಇವರ ಮಾತನ್ನು ಯಾರು ಕೇಳಿಲ್ಲ. ಹಾರ ಬದಲಿಸಿಕೊಂಡ ಕೆಲವೇ ಕ್ಷಣಗಳಲ್ಲಿ, ಸುರೇಂದ್ರ ವೇದಿಕೆಯ ಮೇಲೆ ಕುಸಿದುಬಿದ್ದಿದ್ದಾರೆ. ನಂತರ ಅವರನ್ನು ಚಿಕಿತ್ಸೆಗಾಗಿ (Treatment) ಸ್ಥಳೀಯ ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಲಾಯಿತು, ಆದರೆ ಸುರೇಂದ್ರ ದಾರಿಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ನಿಷೇಧದ ಹೊರತಾಗಿಯೂ ಡಿಜೆ ಬಳಕೆ
ಮದುವೆ ಮನೆ, ಸಮಾರಂಭಗಳಲ್ಲಿ ಡಿಜೆ ಮೇಲೆ ಕಟ್ಟುನಿಟ್ಟಾದ ನಿಷೇಧವೇರಿದೆ. ಆದರೂ ಇದರ ಬಳಕೆ ಮಾಡಿರುವುದು ಎಷ್ಟು ಸರಿ ಎಂಬ ಪ್ರಶ್ನೆ ಮೂಡಿದೆ. ಸಾಮಾಜಿಕ ಕಾರ್ಯಕರ್ತ ಡಾ.ರಾಜೀವ್ ಕುಮಾರ್ ಮಿಶ್ರಾ ಕೂಡ ಡಿಜೆಗಳ ಮೇಲಿನ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕೆಂದು ಸ್ಥಳೀಯ ಆಡಳಿತವನ್ನು ಒತ್ತಾಯಿಸಿದ್ದಾರೆ.

ವಿವಾಹ ಸಮಾರಂಭ ಟೈಮಲ್ಲೇ ಹೃದಯಾಘಾತದಿಂದ ಮೃತಪಟ್ಟ ವಧು: ತಂಗಿಯ ಜತೆ ಮದ್ವೆ ಮಾಡಿಕೊಟ್ಟ ಕುಟುಂಬ
ಗುಜರಾತಿನ ಭಾವನಗರದಲ್ಲಿ ವಧುವೊಬ್ಬರು ಸುಭಾಷ್‌ನಗರ ಪ್ರದೇಶದ ಮದುವೆ ಸ್ಥಳದಲ್ಲಿ, ಅದರಲ್ಲೂ ಮದುವೆ ಸಮಾರಂಭದ ಮಧ್ಯೆಯೇ ಹೃದಯಾಘಾತದಿಂದ ಮೃತಪಟ್ಟಿದ್ದರು. ಗುಜರಾತಿನ ಭಾವನಗರದ ಭಗವಾನೇಶ್ವರ ಮಹಾದೇವ ದೇವಸ್ಥಾನದ ಮುಂಭಾಗದಲ್ಲಿ ಈ ಅಹಿತಕರ ಘಟನೆ ನಡೆದಿತ್ತು. ಜಿನಾಭಾಯಿ ರಾಥೋಡ್ ಎಂದು ಗುರುತಿಸಲಾದ ವ್ಯಕ್ತಿಯ ಪುತ್ರಿಯಾದ ಹೀತಲ್‌, ನಾರಿ ಗ್ರಾಮದ ರಾಣಾಭಾಯ್ ಬೂತಭಾಯ್ ಅಲ್ಗೋಟಾರ್ ಅವರ ಮಗ ವಿಶಾಲ್ ಅವರನ್ನು ಮದುವೆಯಾಗುವ (Marriage) ಮುನ್ನವೇ ಹಾರ್ಟ್‌ ಅಟ್ಯಾಕ್‌ನಿಂದ ಸಾವನ್ನಪ್ಪಿದ್ದರು.

ದುವೆಯನ್ನು ನಿಲ್ಲಿಸಲು ಇಷ್ಟಪಡದ ಸಂಬಂಧಿಕರು ಮದುವೆ ಸಮಾರಂಭ ಮುಂದುವರಿಸಲು ವರ ವಿಶಾಲ್‌ಗೆ ವಧುವಿನ ಬದಲು ಆಕೆಯ ತಂಗಿಯನ್ನು ಮದುವೆಯಾಗಲು ಸಲಹೆ ನೀಡಿದರು. ಅದಕ್ಕೆ ವರ ಕೂಡ ಒಪ್ಪಿದ ನಂತರ, ಎರಡೂ ಕುಟುಂಬದವರು ವಧುವಿನ ತಂಗಿ ಜತೆ ಮದುವೆ ಮಾಡಲಾಯಿತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ