ಶುಕ್ರವಾರ, ಮೇ 17, 2024
Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಢಾಬಾದ ಫ್ರೀಜರ್ ನೊಳಗಡೆ ಪತ್ತೆಯಾದ ಮಹಿಳೆಯ ಮೃತದೇಹ! ದೆಹಲಿಯಲ್ಲಿ ಮತ್ತೊಂದು ಶ್ರದ್ಧಾ ಪ್ರಕರಣ!

Twitter
Facebook
LinkedIn
WhatsApp
ಢಾಬಾದ ಫ್ರೀಜರ್ ನೊಳಗಡೆ ಪತ್ತೆಯಾದ ಮಹಿಳೆಯ ಮೃತದೇಹ! ದೆಹಲಿಯಲ್ಲಿ ಮತ್ತೊಂದು ಶ್ರದ್ಧಾ ಪ್ರಕರಣ!

ನವದೆಹಲಿ (ಫೆಬ್ರವರಿ 14, 2023): ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಶ್ರದ್ದಾ ವಾಕರ್‌ ಕೊಲೆ ಪ್ರಕರಣ ಇಡೀ ದೇಶವನ್ನು ಬೆಚ್ಚಿ ಬೀಳಿಸಿತ್ತು.ನಂತರ ದೇಶದ ಹಲವೆಡೆ ಇಂತದ್ದೇ ಕೆಲ ಪ್ರಕರಣಗಳು ಬೆಳಕಿಗೆ ಬಂದವು. ಈಗ ದೆಹಲಿಯಲ್ಲೇ ಶ್ರದ್ಧಾ ರೀತಿಯ ಮತ್ತೊಂದು ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ನೈಋತ್ಯ ದೆಹಲಿಯ ನಜಾಫ್‌ಗಢದ ಢಾಬಾವೊಂದರಲ್ಲಿ 25 ವರ್ಷದ ಮಹಿಳೆಯ ಶವ ವ್ಯಾಲೆಂಟೈನ್ಸ್‌ ದಿನ ಅಂದರೆ ಫೆಬ್ರವರಿ 14, 2023 ರ ಮಂಗಳವಾರ ಫ್ರೀಜರ್‌ನಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೆ, 2 – 3 ದಿನಗಳ ಹಿಂದೆ ಮಹಿಳೆಯನ್ನು ಕೊಂದು ಆಕೆಯ ಶವವನ್ನು ಢಾಬಾದ ಫ್ರೀಜರ್‌ನಲ್ಲಿ ಇರಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನು, ಢಾಬಾದ (Dhaba) ಫ್ರೀಜರ್‌ನಲ್ಲಿ (Freezer) ಮಹಿಳೆಯ ಮೃತದೇಹ (Women Deadbody) ಸಿಕ್ಕಿರುವ ಘಟನೆ ಸಂಬಂಧ ಆ ಢಾಬಾದ ಮಾಲೀಕ (Dhaba Owner) ಸಾಹಿಲ್ ಗಹ್ಲೋಟ್‌ನನ್ನು (Sahil Gahlot) ಬಂಧಿಸಲಾಗಿದೆ (Arrested). ಇನ್ನು, ಮೃತ ಮಹಿಳೆ ದೆಹಲಿಯ (Delhi) ಉತ್ತಮ್ ನಗರದ ನಿವಾಸಿ ಎಂದೂ ಪೊಲೀಸರು (Police) ತಿಳಿಸಿದ್ದು, ಆಕೆಯನ್ನು ನಿಕ್ಕಿ ಎಂದು ಗುರುತಿಸಲಾಗಿದೆ. ಸದ್ಯ, ಢಾಬಾ ಮಾಲೀಕ ಸಾಹಿಲ್ ಗಹ್ಲೋಟ್ ಅವರನ್ನು ಶಂಕೆಯ ಮೇಲೆ ಬಂಧಿಸಲಾಗಿದೆ ಎಂದೂ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲದೆ, ಸಾಹಿಲ್ ಗಹ್ಲೋಟ್ ಮತ್ತು ಮಹಿಳೆ ಇಬ್ಬರೂ ಸಂಬಂಧದಲ್ಲಿದ್ದರು (Relationship) ಎಂದು ಪೊಲೀಸ್ ಅಧಿಕಾರಿ ವಿಕ್ರಮ್ ಸಿಂಗ್ ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ