ಚೆನ್ನೈ: ಚಿಕನ್ ಶವರ್ಮ ಸೇವಿಸಿದ್ದ 15 ವಿದ್ಯಾರ್ಥಿಗಳ ಪೈಕಿ ಓರ್ವ ವಿದ್ಯಾರ್ಥಿನಿ ಮೃತಪಟ್ಟು, 14 ಮಂದಿ ಅಸ್ವಸ್ಥರಾದ ಘಟನೆ ಕಳೆದ ತಿಂಗಳು ಕಾಸರಗೋಡುನಲ್ಲಿ ಸಂಭವಿಸಿತ್ತು. ಈ ಘಟನೆ ಮಾಸುವ ಮುನ್ನವೇ ಇಂತಹದ್ದೇ ದುರ್ಘಟನೆ ತಮಿಳುನಾಡಿನಲ್ಲಿ ಸಂಭವಿಸಿದ್ದು, ದ್ವಿತೀಯ ಪಿಯು ವಿದ್ಯಾರ್ಥಿಯೊಬ್ಬ ದುರಂತ ಅಂತ್ಯ ಕಂಡಿದ್ದಾನೆ.
ತಂದೂರಿ ಚಿಕನ್ ಮತ್ತು ಫ್ರೈಡ್ ರೈಸ್ ತಿಂದ ಬಳಿಕ ಈತನಿಗೆ ವಾಂತಿ-ಭೇದಿ ಕಾಣಿಸುಕೊಂಡು ಕೊನೆಯುಸಿರೆಳೆದಿದ್ದಾನೆ.
ತಿರುಮುರುಗನ್(17) ಮೃತ ವಿದ್ಯಾರ್ಥಿ. ಈತ ತಿರುವಣ್ಣಾಮಲೈ ಜಿಲ್ಲೆಯ ಅರಣಿ ಪಟ್ಟಣದ ಆಪಲ್ ಶಾಲೆಯ ಮಾಲೀಕ ಗಣೇಶ್ (ಆಪಲ್ ಗಣೇಶ್) ಅವರ ಪುತ್ರ. ಗಣೇಶ್ಗೆ ಇಬ್ಬರು ಪುತ್ರರು. ಈ ಪೈಕಿ ಓರ್ವ ಪುತ್ರನಾದ ತಿರುಮುರುಗನ್ ದ್ವಿತೀಯ ಪಿಯು ಪರೀಕ್ಷೆ ಬರೆದಿದ್ದ. ಫಲಿತಾಂಶಕ್ಕಾಗಿ ಕಾಯುತ್ತಿದ್ದ. ಮೇ 24ರಂದು ಅರಣಿ ಟೌನ್ ಗಾಂಧಿ ರಸ್ತೆಯ 5 ಸ್ಟಾರ್ ಎಲೈಟ್ ಹೋಟೆಲ್ನಲ್ಲಿ ಸ್ನೇಹಿತರೊಂದಿಗೆ ಚಿಕನ್ ತಂದೂರಿ ಮತ್ತು ಫ್ರೈಡ್ ರೈಸ್ ಸೇವಿಸಿದ್ದ. ಅಂದು ರಾತ್ರಿ ಹೊಟ್ಟೆ ನೋವು ಕಾಣಿಸಿಕೊಂಡು ವಾಂತಿಯಾಗಿದೆ. ಮರುದಿನ ಬೆಳಗ್ಗೆ ಕುಟುಂಬಸ್ಥರು ತಿರುಮುರುಗನ್ನನ್ನು ಸಮೀಪದ ಖಾಸಗಿ ಕ್ಲಿನಿಕ್ಗೆ ಕರೆದೊಯ್ದರಾದರೂ ಪ್ರಯೋಜನವಾಗಲಿಲ್ಲ.
ಇದಕ್ಕೆ ಕಾರಣ ಹೋಟೆಲ್ನಲ್ಲಿ ತಿಂದ ತಂದೂರಿ ಚಿಕನ್. ಆಹಾರವು ವಿಷಪೂರಿತ ಆಗಿದ್ದರಿಂದಲೇ ಮಗ ಸತ್ತಿದ್ದಾನೆ ಎಂದು ಮೃತನ ತಂದೆ ಗಣೇಶ್ ಅರಣಿ ಟೌನ್ ಪೊಲೀಸರಿಗೆ ದೂರು ನೀಡಿದ್ದಾರೆ.
ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?