ಸೋಮವಾರ, ಏಪ್ರಿಲ್ 29, 2024
ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ತನ್ನಿಂದಲೇ ವಂಶ ಬೆಳೆಯಲೆಂದು ಸೊಸೆಯ ಮೇಲೆ ಕಣ್ಣಿಟ್ಟ ಮಾವನ ಕೊಲೆ

Twitter
Facebook
LinkedIn
WhatsApp
ತನ್ನಿಂದಲೇ ವಂಶ ಬೆಳೆಯಲೆಂದು ಸೊಸೆಯ ಮೇಲೆ ಕಣ್ಣಿಟ್ಟ ಮಾವನ ಕೊಲೆ

ಹಾಸನ: ಮಗ ಚುರುಕಿಲ್ಲ, ಹಾಗಾಗಿ ತನ್ನಿಂದಲೇ ವಂಶ ಬೆಳೆಯಲಿ ಎಂದು ಸೊಸೆಯ ಮೇಲೆ ಕಣ್ಣು ಹಾಕಿದ ಮಾವನನ್ನು ಸುಪಾರಿ ಕೊಟ್ಟು ಬೀಗರಿಂದಲೇ ಹತ್ಯೆ ಮಾಡಿಸಿರುವ ಘಟನೆ ಹಾಸನ (Hassan) ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ದೊಡ್ಡಿಹಳ್ಳಿ ಗ್ರಾಮದಲ್ಲಿ ನಡೆದಿದೆ.

ತಮ್ಮೇಗೌಡ (55) ಕೊಲೆಯಾದ ವ್ಯಕ್ತಿ. ನ.13 ರಂದು ರಾಗಿಕಾವಲು ಗ್ರಾಮದ ಹೊಸಕೆರೆಯಲ್ಲಿ ತಮ್ಮೇಗೌಡನ ಶವ ಪತ್ತೆಯಾಗಿತ್ತು. ಮುಖವನ್ನು ಪ್ಲಾಸ್ಟಿಕ್ ಚೀಲದಿಂದ ಮುಚ್ಚಿ ಕೆರೆಗೆ ಶವ ಎಸೆಯಲಾಗಿತ್ತು. ಈ ಸಂಬಂಧ ಮೃತನ 3ನೇ ಮಗ ನೀಡಿದ ದೂರನ್ನು ಆಧರಿಸಿ ಪೊಲೀಸರು ತನಿಖೆ ಕೈಗೊಂಡಿದ್ದರು. ಕೊನೆಗೂ ಕೊಲೆಯ ರಹಸ್ಯ ಭೇದಿಸುವಲ್ಲಿ ಪೊಲೀಸರು (Police) ಯಶಸ್ವಿಯಾಗಿದ್ದಾರೆ. 

ಸುಪಾರಿ ಕಿಲ್ಲಿಂಗ್ ನಡೆದದ್ದು ಹೇಗೆ?
ಮಾವ ತಮ್ಮೇಗೌಡ ತನ್ನ ಸೊಸೆ ನಾಗರತ್ನಾಳಿಗೆ ಅನೇಕ ರೀತಿಯಲ್ಲಿ ತೊಂದರೆ ಕೊಡುತ್ತಿದ್ದ. ಮಗ ಬೌದ್ಧಿಕವಾಗಿ ಅಷ್ಟೇನು ಚುರುಕಿರಲಿಲ್ಲ. ಈತನಿಂದ ಮಕ್ಕಳಾಗುವುದು ಅನುಮಾನವಿತ್ತು. ಹೀಗಾಗಿ ತನ್ನಿಂದಲೇ ವಂಶ ಬೆಳೆಯಲಿ ಎಂದು ಮಾವ ಸೊಸೆಗೆ ಲೈಂಗಿಕವಾಗಿ ಕಿರುಕುಳ (Sexual Harassment) ನೀಡುತ್ತಿದ್ದ. ಮಾವನ ನೀಚ ಬುದ್ದಿ ಬಗ್ಗೆ ತನ್ನ ಪೋಷಕರ ಬಳಿ ಸೊಸೆ ಹೇಳಿಕೊಂಡ ನಂತರ ನಾಗರತ್ನಾಳ ಪೋಷಕರಾದ ಮೈಲಾರಗೌಡ ಹಾಗೂ ತಾಯಮ್ಮ 50 ಸಾವಿರಕ್ಕೆ ಕೊಲೆ ಸುಪಾರಿ ನೀಡಿದ್ದಾರೆ. 

CRIME COURT

ತಮ್ಮ ಮನೆಯಲ್ಲೇ ಮದ್ಯ ಕುಡಿಸಿ ರಾಡ್‌ನಿಂದ ಬಲವಾಗಿ ಹೊಡೆದು, ಕುತ್ತಿಗೆ ಹಿಸುಕಿ ಕೊಲೆ ಮಾಡಿದ್ದಾರೆ. ನಂತರ ಶವವನ್ನ ಕೆರೆಗೆ ಬಿಸಾಡಿ ಎಸ್ಕೇಪ್ ಆಗಿದ್ದಾರೆ. ಈ ಸಂಬಂಧ ಕೇಸ್ ದಾಖಲಿಸಿ ತನಿಖೆ ಕೈಗೊಂಡಿದ್ದ ಹಳ್ಳಿಮೈಸೂರು ಠಾಣೆ ಪೊಲೀಸರು (HalliMysore Police) ಪ್ರಕರಣವನ್ನು ಭೇದಿಸಿ ಕೊಲೆ ಆರೋಪಿಗಳಾದ ಯೋಗೇಶ್, ಚಂದ್ರೇಗೌಡ, ಮೈಲಾರಿಗೌಡ ಆತನ ಪತ್ನಿ ತಾಯಮ್ಮ ಅವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ