ಸ್ಯಾಂಡಲ್ವುಡ್ ಬ್ಯೂಟಿ ಪ್ರಣಿತಾ ಸುಭಾಷ್ ಮುದ್ದಾದ ಹೆಣ್ಣು ಮುಗುವಿಗೆ ತಾಯಿಯಾಗಿದ್ದಾರೆ. ಇತ್ತೀಚೆಗಷ್ಟೇ ಮಗುವಿನ ಫೋಟೋ ಕೂಡ ಹಂಚಿಕೊಂಡಿದ್ದರು. ಇದೀಗ ತಾಯಿಯಿಂದಲೇ ಹೆರಿಗೆ ಮಾಡಿಸಿಕೊಂಡ ಅನುಭವದ ಕುರಿತು ಪ್ರಣಿತಾ ಸುಭಾಷ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ನಟಿ ಪ್ರಣಿತಾಗೆ ಮೊದಲ ಮಗುವಿನ ಹೆರಿಗೆ ವಿಶೇಷ ಈ ಕುರಿತು ಸ್ವತಃ ಪ್ರಣಿತಾ ಅವರೇ ಹೇಳಿಕೊಂಡಿದ್ದಾರೆ. ಅವರ ಹೆರಿಗೆಯ ಜವಾಬ್ದಾರಿಯನ್ನು ಗೈನಕಲಾಜಿಸ್ಟ್ ಆಗಿರುವ ತಾಯಿ ಡಾ.ಜಯಶ್ರೀ ಅವರೇ ವಹಿಸಿಕೊಂಡಿದ್ದರು. ತನ್ನ ತಾಯಿಯೇ ಹೆರಿಗೆಯ ಕುರಿತು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ.
ಯಾವುದೇ ಹುಡುಗಿ ಕೇಳಬಹುದಾದ ಉತ್ತಮ ವಿಚಾರ ಅಂದ್ರೆ ಗೈನಕಲಾಜಿಸ್ಟ್ ಆಗಿರುವ ತಾಯಿ, ತನ್ನ ಮಗಳಿಗೆ ಹೆರಿಗೆ ಮಾಡಿಸುವುದು ಅತ್ಯಂತ ಸವಾಲಿನ ಸಂಗತಿ. ಭಾವನಾತ್ಮಕವಾಗಿ ಇದು ಕಠಿಣವಾದ ವಿಚಾರ. ಹೆರಿಗೆಯಲ್ಲಿ ಆಗುವ ಏರುಪೇರಿನ ಬಗ್ಗೆ ಚೆನ್ನಾಗಿ ಅವರಿಗೆ ತಿಳಿದಿರುತ್ತದೆ ಎಂದು ನಟಿ ಪ್ರಣಿತಾ ಹೇಳಿಕೊಂಡಿದ್ದಾರೆ.
ತಾಯಿ ಹೆರಿಗೆ ಮಾಡಿಸಿದ ವಿಚಾರಕ್ಕೆ `ಮುನ್ನಾಭಾಯಿ ಎಂಬಿಬಿಎಸ್’ ಚಿತ್ರದ ದೃಶ್ಯವೊಂದನ್ನು ನೆನಪಿಸಿಕೊಂಡಿದ್ದಾರೆ. ಚಿತ್ರದಲ್ಲಿ ಬೋಮನ್ ಇರಾನಿ ತನ್ನ ಮಗಳಿಗೆ ಆಪ್ರೇಷನ್ ಮಾಡಲು ಕೈ ನಡಗುತ್ತದೆ ಎಂದು ಹೇಳಿದನ್ನು ಈ ವೇಳೆ ನಟಿ ನೆನಪಿಸಿಕೊಂಡಿದ್ದಾರೆ. ಹೆರಿಗೆಯನ್ನು ಮತ್ತಷ್ಟು ನೆಮ್ಮದಿಯುತ ಅನುಭವ ಆಗಿಸಿದ್ದಕ್ಕೆ ಥ್ಯಾಂಕ್ಸ್ ಅಮ್ಮಾ ಎಂದಿದ್ದಾರೆ. ಅಮ್ಮ ಯಾಕೆ ಹೊತ್ತಲ್ಲದ ಹೊತ್ತಲ್ಲಿ ಆಸ್ಪತ್ರೆಗೆ ಹೋಗುತ್ತಿದ್ರು ಅಂತಾ ಈಗ ತಿಳಿಯಿತು ಎಂದು ತಾಯಿಯ ಕುರಿತು ಮೆಚ್ಚುಗೆ ಮಾತನ್ನು ಆಡಿದ್ದಾರೆ. ಈ ಪೋಸ್ಟ್ಗೆ ಅಭಿಮನಿಗಳಿಂದ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.
ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು
ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?