ಕೇಂದ್ರ ಸರ್ಕಾರದ ಸೆಣಬಿನ ನೀತಿಯ ಬಗ್ಗೆ ಟೀಕಿಸಿದ ಮತ್ತು ಬಂಗಾಳದಲ್ಲಿ ಮುಕ್ತವಾಗಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಕೆಲವು ದಿನಗಳ ನಂತರ, ಬರಾಕ್ಪುರದ ಬಿಜೆಪಿ (BJP) ಸಂಸದ ಅರ್ಜುನ್ ಸಿಂಗ್ (Arjun Singh) ಭಾನುವಾರ ತೃಣಮೂಲ ಕಾಂಗ್ರೆಸ್ಗೆ (TMC) ಮರಳಿದ್ದಾರೆ.ಕೋಲ್ಕತ್ತಾದ ಕ್ಯಾಮಾಕ್ ಸ್ಟ್ರೀಟ್ ಕಚೇರಿಯಲ್ಲಿ ಟಿಎಂಸಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರ ಸಮ್ಮುಖದಲ್ಲಿ ಸಿಂಗ್ ಅವರು ಪಕ್ಷಕ್ಕೆ ಸೇರ್ಪಡೆಗೊಂಡರು. ಟಿಎಂಸಿಗೆ ಸೇರ್ಪಡೆಯಾದ ನಂತರ ಮಾತನಾಡಿದ ಸಿಂಗ್ “ಬಂಗಾಳದ ಅಭಿವೃದ್ಧಿಯಲ್ಲಿ ತೃಣಮೂಲ ಕಾಂಗ್ರೆಸ್ ಕೆಲಸ ಮಾಡುತ್ತಿರುವ ರೀತಿ ಶ್ಲಾಘನೀಯ. ನಾನು ಸೆಣಬಿನ ಮಿಲ್ ಪ್ರದೇಶದವನಾಗಿದ್ದು, ಕೇಂದ್ರದ ಅನ್ಯಾಯದ ನೀತಿಗಳಿಂದ ಅಲ್ಲಿನ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಿಜೆಪಿ ಫೇಸ್ಬುಕ್ ಮತ್ತು ಇತರ ಸಾಮಾಜಿಕ ಮಾಧ್ಯಮಗಳಿಗೆ ಸೀಮಿತವಾಗಿದೆ. ಫೇಸ್ಬುಕ್ನಲ್ಲಿ ಮಾತ್ರ ರಾಜಕೀಯ ಮಾಡಲು ಸಾಧ್ಯವಿಲ್ಲ. ಬಂಗಾಳದಲ್ಲಿ ನೆಲದ ಮೇಲೆ ಕೆಲಸ ಮಾಡುವುದು ಮುಖ್ಯ ಮತ್ತು ಅವರ ನಾಯಕರು ಹವಾನಿಯಂತ್ರಿತ ಕೊಠಡಿಗಳಲ್ಲಿ ಕುಳಿತಿರುವುದರಿಂದ ಬಿಜೆಪಿಯು ಅದನ್ನು ಕಳೆದುಕೊಳ್ಳುತ್ತಿದೆ ಎಂದಿದ್ದಾರೆ. ಸಿಂಗ್ ಅವರನ್ನು ಪಕ್ಷಕ್ಕೆ ಸ್ವಾಗತಿಸಿದ ಅಭಿಷೇಕ್ ಬ್ಯಾನರ್ಜಿ ಬಿಜೆಪಿಯಲ್ಲಿ ವಿಭಜಕ ಶಕ್ತಿಗಳನ್ನು ತಿರಸ್ಕರಿಸಿದ ಮತ್ತು ಇಂದು ಟಿಎಂಸಿ ಕುಟುಂಬಕ್ಕೆ ಸೇರ್ಪಡೆಗೊಂಡ ಅರ್ಜುನ್ ಸಿಂಗ್ ಅವರಿಗೆ ಆತ್ಮೀಯ ಸ್ವಾಗತವನ್ನು ನೀಡುತ್ತಿದ್ದೇವೆ. ರಾಷ್ಟ್ರದಾದ್ಯಂತ ಜನರು ಬಳಲುತ್ತಿದ್ದಾರೆ ಮತ್ತು ಅವರಿಗೆ ಹಿಂದೆಂದಿಗಿಂತಲೂ ಈಗ ನಮ್ಮ ಅವಶ್ಯಕತೆಯಿದೆ. ಹೋರಾಟವನ್ನು ಜೀವಂತವಾಗಿಡೋಣ ಎಂದು ಟ್ವೀಟ್ ಮಾಡಿದ್ದಾರೆ.
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?