![ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್](https://urtv24.com/wp-content/uploads/2024/12/WhatsApp-Image-2024-12-12-at-22.37.00-6787e1d3-300x169.jpg)
ಶಿವಾಜಿ ಸುರತ್ಕಲ್ ಭಾಗ-2 ಈ ಸಿನಿಮಾದ ಬಗ್ಗೆ ಮಾಹಿತಿ ನೀಡಿದ ನಿರ್ದೇಶಕ ಆಕಾಶ್ ಶ್ರೀವತ್ಸ, ‘ಶಿವಾಜಿ ಸುರತ್ಕಲ್ನ ಮೊದಲ ಭಾಗದಲ್ಲಿ ಇಲ್ಲದ ಕತೆ ಶಿವಾಜಿ ಅವರ ಮಗಳದ್ದು. ಈ ಭಾಗದ ಕತೆಯ ಮುಖ್ಯ ಎಳೆಯಾಗಿ ಈ ಅಪ್ಪ ಮಗಳ ಪಾತ್ರ ಬರುತ್ತದೆ. ಈಗಾಗಲೇ ಈ ಇಬ್ಬರ ಕಾಂಬಿನೇಶನ್ ಹಾಡಿನ ಚಿತ್ರೀಕರಣವೂ ನಡೆದಿದೆ. ರಮೇಶ್ ಅರವಿಂದ್ ಹಾಗೂ ಆರಾಧ್ಯಾ ಲವಲವಿಕೆಯಿಂದ ನಟಿಸಿದ್ದಾರೆ. ಈ ಚಿತ್ರದಲ್ಲಿ ಜಿ ವಿ ಅಯ್ಯರ್ ಅವರ ಸಿನಿಮಾಗಳಿಗೆ ಛಾಯಾಗ್ರಾಹಕರಾಗಿದ್ದ ಮಧು ಅಂಬಟ್ ಪುತ್ರ ದರ್ಶನ್ ಅಂಬಟ್ ಡಿಓಪಿ ಆಗಿದ್ದಾರೆ. ಯಲ್ಲಾಪುರದ ಕಾಡು, ಸಾತೊಡ್ಡಿ ಜಲಪಾತಗಳಲ್ಲೆಲ್ಲ ಡ್ರೋನ್ ಮೂಲಕ ಚಿತ್ರೀಕರಣ ಮಾಡಲಾಗಿದೆ.
ಉಳಿದಂತೆ ಸುರತ್ಕಲ್, ಕಾಪು, ಮಲ್ಪೆ, ಮುರುಡೇಶ್ವರ, ಹೊನ್ನಾವರ, ಮರವಂತೆಗಳಲ್ಲಿ ಮುಖ್ಯ ಭಾಗದ ಚಿತ್ರೀಕರಣ ನಡೆದಿದೆ’ ಎನ್ನುತ್ತಾರೆ.ಸೃಷ್ಟಿಶೆಟ್ಟಿ, ಮಧುರ ಗೌಡ ಎಂಬಿಬ್ಬರು ಹೊಸ ನಟಿಯರು ಈ ಚಿತ್ರಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ನಕುಲ್ ಅಭಯಂಕರ್ ಸಂಗೀತವಿದೆ. ಈಗಾಗಲೇ 21 ದಿನಗಳ ಶೂಟಿಂಗ್ ಮುಗಿದಿದ್ದು, ಇನ್ನೂ 30 ದಿನಗಳ ಶೂಟ್ ಬೆಂಗಳೂರಿನಲ್ಲಿ ನಡೆಯಲಿದೆ. ಈ ಚಿತ್ರದಲ್ಲಿ ಹಿರಿಯ ದಕ್ಷಿಣ ಭಾರತೀಯ ನಟ ಎಂ ನಾಸರ್ (Nasser M) ಅವರ ಎಂಟ್ರಿಯಾಗಿದೆ. ಅವರು ಈ ಚಿತ್ರದಲ್ಲಿ ರಮೇಶ್ ಅರವಿಂದ್ ತಂದೆ, ನಿವೃತ್ತ ಐಜಿ ವಿಜಯೇಂದ್ರ ಸುರತ್ಕಲ್ ಪಾತ್ರ ನಿರ್ವಹಿಸಲಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಚಿತ್ರದ ನಿರ್ದೇಶಕ ಆಕಾಶ್ ಶ್ರೀವತ್ಸ ‘ರಮೇಶ್ ಅರವಿಂದ್ ಹಾಗೂ ನಾಸರ್ ಇಬ್ಬರೂ ಹಿರಿಯ ನಿರ್ದೇಶಕ ಕೆ ಬಾಲಚಂದರ್ (K.Balachander) ಗರಡಿಯಲ್ಲಿ ಬೆಳೆದವರು ಎಂದವರು ಹೇಳಿದ್ದಾರೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist