ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ತೈಲ ಬೆಲೆ ಏರಿಕೆಯ ತತ್ತರ, KSRTC ಯಿಂದ 50 ಎಲೆಕ್ಟ್ರಿಕ್‌ ಬಸ್‌ಗಳ ಖರೀದಿ

Twitter
Facebook
LinkedIn
WhatsApp
ತೈಲ ಬೆಲೆ ಏರಿಕೆಯ ತತ್ತರ, KSRTC ಯಿಂದ 50 ಎಲೆಕ್ಟ್ರಿಕ್‌ ಬಸ್‌ಗಳ ಖರೀದಿ

ಬೆಂಗಳೂರು (ಜು.19): ಡೀಸೆಲ್‌ ಬೆಲೆ ಏರಿಕೆಯಿಂದ ತತ್ತರಿಸಿರುವ ಕೆಎಸ್‌ಆರ್‌ಟಿಸಿ ವಿದ್ಯುತ್‌ ಬಸ್‌ಗಳತ್ತ ಮುಖ ಮಾಡುತ್ತಿದ್ದು, ಖಾಸಗಿ ಕಂಪನಿಯಿಂದ ಒಪ್ಪಂದ ಮೇರೆಗೆ 50 ಬಸ್‌ಗಳನ್ನು ಪಡೆದುಕೊಳ್ಳಲು ಮುಂದಾಗಿದೆ. 2022ರ ಡಿಸೆಂಬರ್‌ ತಿಂಗಳಲ್ಲಿ 25 ಬಸ್‌ಗಳು ಮತ್ತು 2023ರ ಮಾರ್ಚ್‌ನಲ್ಲಿ  25 ಬಸ್‌ಗಳು ವಿದ್ಯುತ್‌ ಬಸ್‌ಗಳು ಲಭ್ಯವಾಗಲಿದೆ. 2023ರ ಜನವರಿಯಿಂದ ಬೆಂಗಳೂರು ನಗರದಿಂದ ವಿವಿಧ ಭಾಗಗಳಿಗೆ ಕೆಲ ಬಸ್‌ಗಳು ಕಾರ್ಯಾಚರಣೆ ಮಾಡುವ ನಿರೀಕ್ಷೆಯಿದೆ. ಹೈದ್ರಾಬಾದ್‌ ಮೂಲದ ಒಲೆಕ್ಟ್ರಾ ಕಂಪನಿಯಿಂದ ಹವಾನಿಯಂತ್ರಿತ (ಎಸಿ) 50 ಎಲೆಕ್ಟ್ರಿಕ್‌ ಬಸ್‌ಗಳನ್ನು ಒಪ್ಪಂದದ ಮೇರೆಗೆ ಪಡೆದುಕೊಳ್ಳಲು ನಿರ್ಧರಿಸಲಾಗಿದೆ. ಈ ಬಸ್‌ಗಳು ಪ್ರತಿ ದಿನ 450 ಕಿ.ಮೀ. ಕಾರ್ಯಾಚರಣೆ ಮಾಡಲಿವೆ. ಒಮ್ಮೆ ಚಾರ್ಜಿಂಗ್‌ ಮಾಡಿದಲ್ಲಿ 250 ಕಿ.ಮೀ. ಸಂಚರಿಸುವ ಸಾಮರ್ಥ್ಯ ಹೊಂದಿವೆ. ಬಸ್‌ ಚಾಲಕರನ್ನು ಮತ್ತು ನಿರ್ವಹಣೆಯನ್ನು ಕಂಪನಿಯೇ ಮಾಡಲಿದೆ. ಜತೆಗೆ, ಎಲೆಕ್ಟ್ರಿಕ್‌ ಚಾರ್ಜಿಂಗ್‌ ವೆಚ್ಚವನ್ನು ಕಂಪನಿ ಭರಿಸಲಿದೆ. ಆದರೆ, ನಿರ್ವಾಹಕರನ್ನು ಮಾತ್ರ ಕೆಎಸ್‌ಆರ್‌ಟಿಸಿ ಒದಗಿಸಲಿದ್ದು, ಪ್ರತಿ ಕಿ.ಮೀ. 55 ರು.ಗಳನ್ನು ಪಾವತಿ ಮಾಡಬೇಕಾಗುತ್ತದೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.

ಚಾರ್ಜಿಂಗ್‌ ಘಟಕಗಳು: ಎಲೆಕ್ಟ್ರಿಕ್‌ ಬಸ್‌ಗಳನ್ನು ಒದಗಿಸುತ್ತಿರುವ ಒಲೆಕ್ಟ್ರಾ ಕಂಪೆನಿಯವರೇ ಬಸ್‌ನ ಚಾರ್ಜಿಂಗ್‌ ಘಟಕಗಳನ್ನು ಪ್ರಾರಂಭಿಸಲಿದೆ. ಆದರೆ, ಘಟಕಗಳ ನಿರ್ಮಾಣಕ್ಕೆ ಕೆಎಸ್‌ಆರ್‌ಟಿಸಿ ಸ್ಥಳ ನೀಡಬೇಕಾಗಿದೆ. ಇದಕ್ಕಾಗಿ ಹಲವು ಭಾಗಗಳ ಡಿಪೋಗಳನ್ನು ಸ್ಥಳಾವಕಾಶ ಪರಿಶೀಲನೆ ಮಾಡಿದ್ದು, ಶೀಘ್ರದಲ್ಲಿ ಘಟಕ ನಿರ್ಮಾಣ ಕಾರ್ಯ ಆರಂಭವಾಗಲಿದೆ ಎಂದು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್‌ ಮಾಹಿತಿ ನೀಡಿದರು.

ಇತರೆ ನಗರಕ್ಕೂ ಸೇವೆ: ಎಲೆಕ್ಟ್ರಿಕ್‌ ಬಸ್‌ಗಳು ಸಂಚಾರ ಮಾಡುವ ಸಾಮರ್ಥ್ಯವನ್ನು ಪರಿಗಣಿಸಿ ಕಾರ್ಯಾಚರಣೆ ಮಾಡುವ ಸಂಬಂಧ ತೀರ್ಮಾನಿಸಲಾಗಿದೆ. ಬೆಂಗಳೂರು ನಗರದಿಂದ ಮೈಸೂರು, ಚಿಕ್ಕಮಗಳೂರು, ವಿರಾಜಪೇಟೆ, ಮಡಿಕೇರಿ, ಶಿವಮೊಗ್ಗ, ದಾವಣಗೆರೆ ನಡುವೆ ಸಂಚರಿಸಲಿವೆ. ಈ ಎಲ್ಲ ಭಾಗಗಳಲ್ಲಿ ಒಂದೊಂದು ಸ್ಥಳದಲ್ಲಿ ಚಾರ್ಜಿಂಗ್‌ ಘಟಕ ಪ್ರಾರಂಭಕ್ಕೆ ಕೆಎಸ್‌ಆರ್‌ಟಿಸಿ ಸ್ಥಳಾವಕಾಶ ಮಾಡಿಕೊಡಲಿದೆ ಎಂದು ಅವರು ಹೇಳಿದರು.

ಒಲೆಕ್ಟ್ರಾ ಕಂಪನಿಯಿಂದ 50 ಎಲೆಕ್ಟ್ರಿಕ್‌ ಬಸ್‌ಗಳನ್ನು ಒಪ್ಪಂದ ಮೇರೆಗೆ ಪಡೆದುಕೊಳ್ಳುತ್ತಿದ್ದೇವೆ. ಸೆಪ್ಟಂಬರ್‌ ತಿಂಗಳಲ್ಲಿ ಒಂದು ಬಸ್‌ ಬರಲಿದ್ದು, ಅದನ್ನು ಕಾರ್ಯಾಚರಣೆ ನಡೆಸಿ ಅಗತ್ಯವಿರುವ ಬದಲಾವಣೆಗಳನ್ನು ಕಂಪನಿಗೆ ತಿಳಿಸಲಾಗುವುದು. ಅದಕ್ಕೆ ತಕ್ಕಂತೆ ಸಿದ್ಧಪಡಿಸಿ ಒದಗಿಸಲಿದೆ. ಈ ಬಸ್‌ಗಳಿಗೆ ಬೇಕಾಗಿರುವ ಚಾರ್ಜಿಂಗ್‌ ಘಟಕಗಳ ನಿರ್ಮಾಣ ಶೀಘ್ರದಲ್ಲಿ ಪ್ರಾರಂಭವಾಗಲಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist