ಮಂಗಳವಾರ, ಮೇ 7, 2024
ಟಿ-20 ವಿಶ್ವಕಪ್ ಗೆ ಪ್ರಕಟಗೊಂಡ ಎಲ್ಲಾ ತಂಡದಲ್ಲಿ ಯಾರೆಲ್ಲಾ ಆಟಗಾರರಿದ್ದಾರೆ? ಬಲಿಷ್ಠ ತಂಡ ಯಾವುದು?-ಕರ್ನಾಟಕದಲ್ಲಿ ಸಂಜೆ 5 ಗಂಟೆವರೆಗೆ ಶೇಕಡಾ 66.05 ರಷ್ಟು ಮತದಾನ..!-ಕಳೆದ ಐದು ತಿಂಗಳಿಂದ ರಿಜಿಸ್ಟ್ರೇಷನ್ ಸರ್ವರ್ ಸಮಸ್ಯೆ ಮುಗಿಯದ ಕಥೆ!10 ನಿಮಿಷದ ಡಾಕ್ಯೂಮೆಂಟ್ಗೆ ಅಪ್ಲೋಡೆಗೆ ಬೇಕು ಮೂರರಿಂದ ನಾಲ್ಕು ದಿನ!!-ಮಂಜೇಶ್ವರ: ಕಾರು ಮತ್ತು ಅಂಬುಲೆನ್ಸ್ ನಡುವೆ ಭೀಕರ ಅಪಘಾತ; ಮೂವರು ಸಾವು.!-ಬಂಟ್ವಾಳ: ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!-Rain Alert: ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ.!-ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ತೈಲ ಬೆಲೆ ಏರಿಕೆಯ ತತ್ತರ, KSRTC ಯಿಂದ 50 ಎಲೆಕ್ಟ್ರಿಕ್‌ ಬಸ್‌ಗಳ ಖರೀದಿ

Twitter
Facebook
LinkedIn
WhatsApp
ತೈಲ ಬೆಲೆ ಏರಿಕೆಯ ತತ್ತರ, KSRTC ಯಿಂದ 50 ಎಲೆಕ್ಟ್ರಿಕ್‌ ಬಸ್‌ಗಳ ಖರೀದಿ

ಬೆಂಗಳೂರು (ಜು.19): ಡೀಸೆಲ್‌ ಬೆಲೆ ಏರಿಕೆಯಿಂದ ತತ್ತರಿಸಿರುವ ಕೆಎಸ್‌ಆರ್‌ಟಿಸಿ ವಿದ್ಯುತ್‌ ಬಸ್‌ಗಳತ್ತ ಮುಖ ಮಾಡುತ್ತಿದ್ದು, ಖಾಸಗಿ ಕಂಪನಿಯಿಂದ ಒಪ್ಪಂದ ಮೇರೆಗೆ 50 ಬಸ್‌ಗಳನ್ನು ಪಡೆದುಕೊಳ್ಳಲು ಮುಂದಾಗಿದೆ. 2022ರ ಡಿಸೆಂಬರ್‌ ತಿಂಗಳಲ್ಲಿ 25 ಬಸ್‌ಗಳು ಮತ್ತು 2023ರ ಮಾರ್ಚ್‌ನಲ್ಲಿ  25 ಬಸ್‌ಗಳು ವಿದ್ಯುತ್‌ ಬಸ್‌ಗಳು ಲಭ್ಯವಾಗಲಿದೆ. 2023ರ ಜನವರಿಯಿಂದ ಬೆಂಗಳೂರು ನಗರದಿಂದ ವಿವಿಧ ಭಾಗಗಳಿಗೆ ಕೆಲ ಬಸ್‌ಗಳು ಕಾರ್ಯಾಚರಣೆ ಮಾಡುವ ನಿರೀಕ್ಷೆಯಿದೆ. ಹೈದ್ರಾಬಾದ್‌ ಮೂಲದ ಒಲೆಕ್ಟ್ರಾ ಕಂಪನಿಯಿಂದ ಹವಾನಿಯಂತ್ರಿತ (ಎಸಿ) 50 ಎಲೆಕ್ಟ್ರಿಕ್‌ ಬಸ್‌ಗಳನ್ನು ಒಪ್ಪಂದದ ಮೇರೆಗೆ ಪಡೆದುಕೊಳ್ಳಲು ನಿರ್ಧರಿಸಲಾಗಿದೆ. ಈ ಬಸ್‌ಗಳು ಪ್ರತಿ ದಿನ 450 ಕಿ.ಮೀ. ಕಾರ್ಯಾಚರಣೆ ಮಾಡಲಿವೆ. ಒಮ್ಮೆ ಚಾರ್ಜಿಂಗ್‌ ಮಾಡಿದಲ್ಲಿ 250 ಕಿ.ಮೀ. ಸಂಚರಿಸುವ ಸಾಮರ್ಥ್ಯ ಹೊಂದಿವೆ. ಬಸ್‌ ಚಾಲಕರನ್ನು ಮತ್ತು ನಿರ್ವಹಣೆಯನ್ನು ಕಂಪನಿಯೇ ಮಾಡಲಿದೆ. ಜತೆಗೆ, ಎಲೆಕ್ಟ್ರಿಕ್‌ ಚಾರ್ಜಿಂಗ್‌ ವೆಚ್ಚವನ್ನು ಕಂಪನಿ ಭರಿಸಲಿದೆ. ಆದರೆ, ನಿರ್ವಾಹಕರನ್ನು ಮಾತ್ರ ಕೆಎಸ್‌ಆರ್‌ಟಿಸಿ ಒದಗಿಸಲಿದ್ದು, ಪ್ರತಿ ಕಿ.ಮೀ. 55 ರು.ಗಳನ್ನು ಪಾವತಿ ಮಾಡಬೇಕಾಗುತ್ತದೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.

ಚಾರ್ಜಿಂಗ್‌ ಘಟಕಗಳು: ಎಲೆಕ್ಟ್ರಿಕ್‌ ಬಸ್‌ಗಳನ್ನು ಒದಗಿಸುತ್ತಿರುವ ಒಲೆಕ್ಟ್ರಾ ಕಂಪೆನಿಯವರೇ ಬಸ್‌ನ ಚಾರ್ಜಿಂಗ್‌ ಘಟಕಗಳನ್ನು ಪ್ರಾರಂಭಿಸಲಿದೆ. ಆದರೆ, ಘಟಕಗಳ ನಿರ್ಮಾಣಕ್ಕೆ ಕೆಎಸ್‌ಆರ್‌ಟಿಸಿ ಸ್ಥಳ ನೀಡಬೇಕಾಗಿದೆ. ಇದಕ್ಕಾಗಿ ಹಲವು ಭಾಗಗಳ ಡಿಪೋಗಳನ್ನು ಸ್ಥಳಾವಕಾಶ ಪರಿಶೀಲನೆ ಮಾಡಿದ್ದು, ಶೀಘ್ರದಲ್ಲಿ ಘಟಕ ನಿರ್ಮಾಣ ಕಾರ್ಯ ಆರಂಭವಾಗಲಿದೆ ಎಂದು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್‌ ಮಾಹಿತಿ ನೀಡಿದರು.

ಇತರೆ ನಗರಕ್ಕೂ ಸೇವೆ: ಎಲೆಕ್ಟ್ರಿಕ್‌ ಬಸ್‌ಗಳು ಸಂಚಾರ ಮಾಡುವ ಸಾಮರ್ಥ್ಯವನ್ನು ಪರಿಗಣಿಸಿ ಕಾರ್ಯಾಚರಣೆ ಮಾಡುವ ಸಂಬಂಧ ತೀರ್ಮಾನಿಸಲಾಗಿದೆ. ಬೆಂಗಳೂರು ನಗರದಿಂದ ಮೈಸೂರು, ಚಿಕ್ಕಮಗಳೂರು, ವಿರಾಜಪೇಟೆ, ಮಡಿಕೇರಿ, ಶಿವಮೊಗ್ಗ, ದಾವಣಗೆರೆ ನಡುವೆ ಸಂಚರಿಸಲಿವೆ. ಈ ಎಲ್ಲ ಭಾಗಗಳಲ್ಲಿ ಒಂದೊಂದು ಸ್ಥಳದಲ್ಲಿ ಚಾರ್ಜಿಂಗ್‌ ಘಟಕ ಪ್ರಾರಂಭಕ್ಕೆ ಕೆಎಸ್‌ಆರ್‌ಟಿಸಿ ಸ್ಥಳಾವಕಾಶ ಮಾಡಿಕೊಡಲಿದೆ ಎಂದು ಅವರು ಹೇಳಿದರು.

ಒಲೆಕ್ಟ್ರಾ ಕಂಪನಿಯಿಂದ 50 ಎಲೆಕ್ಟ್ರಿಕ್‌ ಬಸ್‌ಗಳನ್ನು ಒಪ್ಪಂದ ಮೇರೆಗೆ ಪಡೆದುಕೊಳ್ಳುತ್ತಿದ್ದೇವೆ. ಸೆಪ್ಟಂಬರ್‌ ತಿಂಗಳಲ್ಲಿ ಒಂದು ಬಸ್‌ ಬರಲಿದ್ದು, ಅದನ್ನು ಕಾರ್ಯಾಚರಣೆ ನಡೆಸಿ ಅಗತ್ಯವಿರುವ ಬದಲಾವಣೆಗಳನ್ನು ಕಂಪನಿಗೆ ತಿಳಿಸಲಾಗುವುದು. ಅದಕ್ಕೆ ತಕ್ಕಂತೆ ಸಿದ್ಧಪಡಿಸಿ ಒದಗಿಸಲಿದೆ. ಈ ಬಸ್‌ಗಳಿಗೆ ಬೇಕಾಗಿರುವ ಚಾರ್ಜಿಂಗ್‌ ಘಟಕಗಳ ನಿರ್ಮಾಣ ಶೀಘ್ರದಲ್ಲಿ ಪ್ರಾರಂಭವಾಗಲಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ