ಬುಧವಾರ, ಮೇ 8, 2024
ಟಿ-20 ವಿಶ್ವಕಪ್ ಗೆ ಪ್ರಕಟಗೊಂಡ ಎಲ್ಲಾ ತಂಡದಲ್ಲಿ ಯಾರೆಲ್ಲಾ ಆಟಗಾರರಿದ್ದಾರೆ? ಬಲಿಷ್ಠ ತಂಡ ಯಾವುದು?-ಕರ್ನಾಟಕದಲ್ಲಿ ಸಂಜೆ 5 ಗಂಟೆವರೆಗೆ ಶೇಕಡಾ 66.05 ರಷ್ಟು ಮತದಾನ..!-ಕಳೆದ ಐದು ತಿಂಗಳಿಂದ ರಿಜಿಸ್ಟ್ರೇಷನ್ ಸರ್ವರ್ ಸಮಸ್ಯೆ ಮುಗಿಯದ ಕಥೆ!10 ನಿಮಿಷದ ಡಾಕ್ಯೂಮೆಂಟ್ಗೆ ಅಪ್ಲೋಡೆಗೆ ಬೇಕು ಮೂರರಿಂದ ನಾಲ್ಕು ದಿನ!!-ಮಂಜೇಶ್ವರ: ಕಾರು ಮತ್ತು ಅಂಬುಲೆನ್ಸ್ ನಡುವೆ ಭೀಕರ ಅಪಘಾತ; ಮೂವರು ಸಾವು.!-ಬಂಟ್ವಾಳ: ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!-Rain Alert: ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ.!-ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದಂತ ವೈದ್ಯ ಡಾ|ಕೃಷ್ಣಮೂರ್ತಿ ಸಾವಿನ ಪ್ರಕರಣ: ಕನ್ನಡಕ, ಚಪ್ಪಲಿ, ಬೆಲ್ಟ್ ಪತ್ತೆ; ಬ್ಯಾಗ್‌ಗಾಗಿ ಹುಡುಕಾಟ

Twitter
Facebook
LinkedIn
WhatsApp
ನಾಪತ್ತೆಯಾಗಿದ್ದ ಬದಿಯಡ್ಕದ ಡಾ|ಕೃಷ್ಣಮೂರ್ತಿ ಮೃತದೇಹ ಕುಂದಾಪುರ ರೈಲ್ವೇ ಹಳಿಯಲ್ಲಿ ಪತ್ತೆ

ಕುಂದಾಪುರ: ಬದಿಯಡ್ಕದ ಹಿರಿಯ ದಂತ ವೈದ್ಯ ಡಾ| ಕೃಷ್ಣಮೂರ್ತಿ ಸರ್ಪಂಗಳ ಅವರ ನಿಗೂಢ ಸಾವಿಗೆ ಸಂಬಂಧಿಸಿ ಕುಂದಾಪುರ ಪೊಲೀಸರು ತನಿಖೆ ಮುಂದುವರಿಸಿದ್ದು, ಸಾವು ಸಂಭವಿಸುವ ಮುನ್ನ ಕುಂದಾಪುರದಿಂದ ಬಸ್ಸಿನಲ್ಲಿ ಸಿದ್ದಾಪುರದ ಕಡೆಗೆ ಸಂಚರಿಸಿದ್ದರು ಎನ್ನಲಾಗುತ್ತಿದೆ. ಅವರು ಬ್ಯಾಗ್‌ ಹೊಂದಿದ್ದರು ಎನ್ನುವುದು ಶಾಸ್ತ್ರೀ ಸರ್ಕಲ್‌ನಲ್ಲಿರುವ ಸಿಸಿ ಕೆಮರಾದಲ್ಲಿ ದಾಖಲಾಗಿದೆ. ಆದರೆ ಅದು ಇನ್ನೂ ಪತ್ತೆಯಾಗಿಲ್ಲ.

ನ. 8ರಂದು ಬದಿಯಡ್ಕದ ತಮ್ಮ ಕ್ಲಿನಿಕ್‌ನಿಂದ ನಾಪತ್ತೆಯಾಗಿದ್ದ ವೈದ್ಯರ ಛಿದ್ರಗೊಂಡ ದೇಹವು ಕುಂದಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯ ಹಟ್ಟಿಯಂಗಡಿ ಗ್ರಾಮದ ಕಾಡು ಅಜ್ಜಿಮನೆಯಲ್ಲಿಯ ರೈಲು ಹಳಿಯಲ್ಲಿ ನ. 9ರಂದು ಪತ್ತೆಯಾಗಿತ್ತು. ನ. 10ರಂದು ಅವರ ಪುತ್ರಿಯ ಸಹಿತ ಕುಟುಂಬಿಕರು ಮೃತದೇಹವನ್ನು ಗುರುತಿಸಿದ್ದರು.

ರೈಲು ನಿಲ್ದಾಣದ ದಾರಿ ವಿಚಾರಿಸಿದ್ದರು ಕುಂದಾಪುರಕ್ಕೆ ಕೆಎಸ್ಸಾರ್ಟಿಸಿ ಬಸ್‌ ಮೂಲಕ ಬಂದ ಕೃಷ್ಣಮೂರ್ತಿ ಅವರು ಕುಂದಾಪುರ ಬಸ್‌ ನಿಲ್ದಾಣ ತಲುಪಿದ್ದು, ಬಳಿಕ ಶಾಸ್ತ್ರಿ ಸರ್ಕಲ್‌ಗೆ ಬಂದು ಸಾರ್ವಜನಿಕರೊಬ್ಬರ ಬಳಿ ಮೂಡ್ಲಕಟ್ಟೆಯ ರೈಲು ನಿಲ್ದಾಣಕ್ಕೆ ಹೋಗುವ ದಾರಿಯ ಬಗ್ಗೆ ವಿಚಾರಿಸಿದ್ದರು. ಬಳಿಕ ಸಿದ್ದಾಪುರ ಕಡೆಗೆ ತೆರಳುವ ಖಾಸಗಿ ಬಸ್ಸಿನಲ್ಲಿ ತೆರಳಿರುವುದು ಸಿಸಿ ಕೆಮರಾದಲ್ಲಿ ಸೆರೆಯಾಗಿದೆ. ಮೂಡ್ಲಕಟ್ಟೆ ಅಥವಾ ದಾರಿ ಮಧ್ಯೆ ಎಲ್ಲಿಯೋ ಇಳಿದು ಅಲ್ಲಿಂದ ರೈಲು ಹಳಿಯಲ್ಲಿಯೇ ಹಟ್ಟಿಯಂಗಡಿಯವರೆಗೆ ನಡೆದು ಹೋಗಿರಬಹುದೇ ಅನ್ನುವ ಶಂಕೆ ವ್ಯಕ್ತವಾಗಿದೆ.

ಕೆಲವು ಸೊತ್ತುಗಳು ಪತ್ತೆ
ರೈಲು ಹಳಿಯ ಮರು ಪರಿಶೀಲನೆ ವೇಳೆ ಕೃಷ್ಣಮೂರ್ತಿ ಅವರು ಧರಿಸಿದ್ದ ಕನ್ನಡಕ, ಚಪ್ಪಲಿ ಹಾಗೂ ಬೆಲ್ಟ್ ಪತ್ತೆಯಾಗಿದೆ. ಅವರು ತಂದಿದ್ದ ಬ್ಯಾಗ್‌ ಸಿಕ್ಕರೆ ಅದರಲ್ಲಿ ಡೆತ್‌ನೋಟ್‌ ಏನಾದರೂ ಬರೆದಿಟ್ಟಿರಬಹುದೇ? ಅಥವಾ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದಾದರೂ ಮಹತ್ವವಾದ ಸುಳಿವು ಸಿಗಬಹುದೇ ಅನ್ನುವ ಕಾರಣಕ್ಕಾಗಿ ಆ ಬ್ಯಾಗ್‌ಗಾಗಿ ಪೊಲೀಸರಿಂದ ತೀವ್ರ ಶೋಧ ನಡೆಯುತ್ತಿದೆ ಎನ್ನಲಾಗಿದೆ.

ಈ ಬಗ್ಗೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹಾಕೆ ಅಕ್ಷಯ್‌ ಮಚ್ಚಿಂದ್ರ ಅವರು ಕುಂದಾಪುರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ತನಿಖೆ ಹಂತ ದಲ್ಲಿರುವುದರಿಂದ ಈಗಲೇ ಏನು ಹೇಳಲು ಆಗುವುದಿಲ್ಲ. ಪೂರ್ಣವಾದ ಬಳಿಕವೇ ಮಾಹಿತಿ ನೀಡಲಾಗುವುದು ಎಂದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ