ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಮಂಗಳೂರು: ಶೇ.5ಕ್ಕಿಂತ ಹೆಚ್ಚಿನ ಪಾಜಿಟಿವಿಟಿ ದರ ಇರುವ 13 ಜಿಲ್ಲೆಗಳಾದ ಹಾಸನ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಕೊಡಗು, ಧಾರವಾಡ, ಬಳ್ಳಾರಿ, ಚಿತ್ರದುರ್ಗ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಜುಲೈ 5 ರವರೆಗೆ ಲಾಕ್ಡೌನ್ ಮುಂದುವರೆಯಲಿದೆ. ಈ ಜಿಲ್ಲೆಗಳಲ್ಲಿ ಈಗ ಅನುಷ್ಠಾನದಲ್ಲಿರುವ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಉಳಿದ ಎಲ್ಲ ಜಿಲ್ಲೆಗಳಲ್ಲಿ ಜೂನ್ 21 ರಿಂದ ನಿರ್ಬಂಧ ಸಡಿಲಿಕೆ ಮಾಡುತ್ತೇವೆ ಎಂದು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ, 16 ಜಿಲ್ಲೆಗಳಲ್ಲಿ ಶೇಕಡಾ 5 ರಷ್ಟು ಪಾಸಿಟಿವಿಟಿ ದರ ಇರುವ ಕಾರಣದಿಂದಾಗಿ, ಆ ಜಿಲ್ಲೆಗಳಲ್ಲಿ ನಿರ್ಬಂಧಗಳನ್ನು ಸಡಿಲಿಕೆ ಮಾಡಲಾಗಿದೆ. ಉಳಿದಂತೆ 13 ಜಿಲ್ಲೆಗಳಲ್ಲಿ ಸೋಂಕಿನ ಪ್ರಕರಣಗಳು ಕಡಿಮೆಯಾಗದ ಹಿನ್ನೆಲೆಯಲ್ಲಿ ಲಾಕ್ ಡೌನ್ ಮುಂದುವರಿಯಲಿದೆ. ವಾರಾಂತ್ಯ ಕರ್ಫ್ಯೂ ಮುಂದುವರಿಯಲಿದೆ ಎಂದು ಅವರು ಹೇಳಿದ್ದಾರೆ.
ಶೇ.5 ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಾದ ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ (ಬಿಬಿಎಂಪಿ ಸೇರಿದಂತೆ), ಗದಗ, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳಿಗೆ ಸಂಜೆ 5 ಗಂಟೆಯವರೆಗೆ ಸಡಿಲಿಕೆ ನೀಡಲಾಗಿದೆ.
ಶೇ.10ಕ್ಕಿಂತ ಹೆಚ್ಚಿನ ಪಾಜಿಟಿವಿಟಿ ದರ ಇರುವ ಮೈಸೂರು ಜಿಲ್ಲೆಯಲ್ಲಿ ಯಥಾಸ್ಥಿತಿ ನಿರ್ಬಂಧಗಳು ಮುಂದುವರೆಯುತ್ತವೆ. ಅಲ್ಲದೆ ರಾಜ್ಯವ್ಯಾಪಿ ಅನ್ವಯವಾಗುವಂತೆ ಪ್ರತಿ ದಿನ ರಾತ್ರಿ 7 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕಫ್ರ್ಯೂ ಇರುತ್ತದೆ. ವಾರಾಂತ್ಯದ ಕಫ್ರ್ಯೂ ಶುಕ್ರವಾರ ರಾತ್ರಿ 7 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
ಬಿ ಎಸ್ ವೈ ಹೇಳಿದ ಪ್ರಮುಖ ಅಂಶಗಳು:
-ಸೋಮವಾರದಿಂದ ಮೆಟ್ರೋ ಸಂಚಾರ ಆರಂಭ
-ಮೆಟ್ರೋಗಳಲ್ಲಿ ಶೇಕಡಾ 50ರಷ್ಟು ಜನರ ಸಂಚಾರಕ್ಕೆ ಅವಕಾಶ
-ವಾರಾಂತ್ಯದ ಕರ್ಫ್ಯೂ ಮುಂದುವರಿಕೆ
-ಸೋಮವಾರದಿಂದ ರಾಜ್ಯಾದ್ಯಂತ ಜ್ಯುವೆಲ್ಲರಿ ಶಾಪ್ ತೆರೆಯಲು ಅವಕಾಶ
-ಮಾಲ್ ತೆರೆಯಲು ಅವಕಾಶವಿಲ್ಲ
-ಸರ್ಕಾರಿ ಕಚೇರಿಗಳಲ್ಲಿ ಶೇಕಡಾ. 50 ರಷ್ಟು ಸಿಬ್ಬಂದಿಗಳಿಗೆ ಅವಕಾಶ
-ಸೋಮವಾರದಿಂದ ಹೋಟೇಲ್ ತೆರೆಯಲು ಅವಕಾಶ ಇದೆ.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ದಿನನಿತ್ಯ ಕೋಲ್ಡ್ ನೀರು ಕುಡಿಯುತ್ತಿದ್ದೀರಾ; ಇದು ಶರೀರಕ್ಕೆ ಒಳ್ಳೆಯದೇ ಅಥಾವ ಅಪಾಯವೇ?