ಬೆಂಗಳೂರು: ದರೋಡೆಗೆ ಹೊಂಚು ಹಾಕುತ್ತಿದ್ದ ರೌಡಿಶೀಟರ್ ಗ್ಯಾಂಗ್ (Gang Arrest) ಒಂದನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಕಾಟನ್ ಪೇಟೆ ಪೊಲೀಸ್ ಠಾಣಾ ರೌಡಿಶೀಟರ್ ಜಾನ್ ಪೀಟರ್, ವಿಜಯ ನಗರ ಪೊಲೀಸ್ ಠಾಣಾ ರೌಡಿಶೀಟರ್ ಭೈರೇಗೌಡ ಅಲಿಯಾಸ್ ಭೈರ, ಕುಣನಕುಂಟೆ ಪೊಲೀಸ್ ಠಾಣಾ ರೌಡಿಶೀಟರ್ ಫೈರೋಜ್ ಪಾಷಾ ಬಂಧಿತ ಆರೋಪಿಗಳು. ಆರೋಪಿಗಳು ದರೋಡೆ, ಕೊಲೆ, ಪ್ರಕರಣಗಳಲ್ಲಿ ಈ ಹಿಂದೆಯೂ ಭಾಗಿಯಾಗಿದ್ದರು.
ಇದೀಗ ಆರೋಪಿಗಳು ಮಣಿಕಂಠ ಅಲಿಯಾಸ್ ಡಿಕ್ಕ, ರಿಜ್ವಾನ್ ಎಂಬುವರನ್ನು ಬಳಿಸಿಕೊಂಡು ಕಾಟನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಬಿನ್ನಿಪೇಟೆಯ ಖಾಲಿ ಜಾಗದಲ್ಲಿ ದರೋಡೆಗೆ ಹೊಂಚು ಹಾಕಿಕೊಂಡಿದ್ದರು. ಆರೋಪಿಗಳು ದರೋಡೆಗೆ ಇಳಿಯುವ ಮುನ್ನವೇ ಸಿಸಿಬಿ ಪೊಲೀಸರು ಆರೋಪಿಗಳ ಎಡೆಮುರಿ ಕಟ್ಟಿದ್ದಾರೆ. ಬಂಧಿತರಿಂದ ಕೃತ್ಯಕ್ಕೆ ಬಳಸಲು ಇಟ್ಟುಕೊಂಡಿದ್ದ ಮಾರಕಾಸ್ತ್ರಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣ ಸಂಬಂಧ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!
ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?