ಗುರುವಾರ, ಮೇ 16, 2024
ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!-8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದೇವಾಲಯಕ್ಕೆ ಡಿಕ್ಕಿ ಹೊಡೆದು ವಿಮಾನ ಪತನ – ತರಬೇತಿ ಪಡೀತಿದ್ದ ಪೈಲಟ್ ಸಾವು

Twitter
Facebook
LinkedIn
WhatsApp
Twitter data breach 2022 3

ಭೋಪಾಲ್: ತರಬೇತಿ ವಿಮಾನವೊಂದು (Training Plane) ಶುಕ್ರವಾರ ಮುಂಜಾನೆ ದೇವಾಲಯವೊಂದಕ್ಕೆ (Temple) ಅಪ್ಪಳಿಸಿ ಪತನವಾಗಿರುವ (Plane Crash) ಘಟನೆ ಮಧ್ಯಪ್ರದೇಶದ (Madhya Pradesh) ರೇವಾ ಜಿಲ್ಲೆಯ ಡುಮ್ರಿ ಗ್ರಾಮದಲ್ಲಿ ನಡೆದಿದೆ. ವಿಮಾನ ಪತನದಲ್ಲಿ ತರಬೇತಿ ಪಡೆಯುತ್ತಿದ್ದ ಪೈಲಟ್ (Pilot) ಸಾವನ್ನಪ್ಪಿದ್ದಾರೆ.

ಖಾಸಗಿ ಕಂಪನಿಗೆ ಸೇರಿದ ವಿಮಾನ ಡುಮ್ರಿ ಗ್ರಾಮದ ದೇವಾಲಯದ ಗೋಪುರಕ್ಕೆ ಅಪ್ಪಳಿಸಿದ್ದರಿಂದ ಅಪಘಾತ ಸಂಭವಿಸಿದೆ. ವಿಮಾನದಲ್ಲಿ ಇಬ್ಬರು ಪೈಲಟ್‌ಗಳಿದ್ದು, ಒಬ್ಬ ಪೈಲಟ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೊಬ್ಬ ಪೈಲಟ್ ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.

ಈ ಬಗ್ಗೆ ರೇವಾ ಎಸ್‌ಪಿ ನವನೀತ್ ಭಾಸಿನ್ ಮಾಹಿತಿ ನೀಡಿದ್ದು, ಶುಕ್ರವಾರ ಮುಂಜಾನೆ ದುರ್ಘಟನೆ ನಡೆದಿದೆ. ಅಪಘಾತಕ್ಕೊಳಗಾದ ವಿಮಾನ ತರಬೇತಿ ವಿಮಾನವಾಗಿದ್ದು, ಒಬ್ಬ ಪೈಲಟ್ ಸಾವನ್ನಪ್ಪಿದ್ದಾರೆ. ಮತ್ತೊಬ್ಬರು ಗಾಯಗೊಂಡಿದ್ದಾರೆ. ಗಾಯಗೊಂಡ ಪೈಲಟ್ ಅನ್ನು ಸಂಜಯ್ ಗಾಂಧಿ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದ್ದು, ಅಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಮೇಲ್ನೋಟಕ್ಕೆ ಅಪಘಾತಕ್ಕೆ ಕಾರಣ ಹವಾಮಾನ ವೈಪರೀತ್ಯ ಎನ್ನಲಾಗಿದೆ. ಮಂಜು ಮುಸುಕಿದ ವಾತಾವರಣದಿಂದ ದಾರಿ ಸರಿಯಾಗಿ ಕಾಣಿಸದೇ ವಿಮಾನ ದೇವಾಲಯಕ್ಕೆ ಅಪ್ಪಳಿಸಿದೆ ಎಂದು ಶಂಕಿಸಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ