Mangalore : ಉಳ್ಳಾಲದಲ್ಲಿ ಗೋಡೆ ಕುಸಿದು ಮಕ್ಕಳ ಸಹಿತ ನಾಲ್ವರು ಬಲಿ
Mangalore : ಉಳ್ಳಾಲದಲ್ಲಿ ಗೋಡೆ ಕುಸಿದು ಮಕ್ಕಳ ಸಹಿತ ನಾಲ್ವರು ಬಲಿ
ಹಾಸನ: ಬಿಜೆಪಿ ಹಾಗೂ ಕಾಂಗ್ರೆಸ್ ಎರಡು ರಾಷ್ಟ್ರೀಯ ಪಕ್ಷಗಳು ಸೇರಿ ಜೆಡಿಎಸ್ ಪಕ್ಷವನ್ನು ಟಾರ್ಗೆಟ್ ಮಾಡಿದರು. ಈ ಪ್ರಾದೇಶಿಕ ಪಕ್ಷ ಮುಗಿಸಲು ಯಾರಿಂದಲೂ ಆಗಲ್ಲ. ಬಿಜೆಪಿ, ಕಾಂಗ್ರೆಸ್ನಿಂದಲೂ ಆಗಲ್ಲ ದೇವೇಗೌಡರು ಇರೋವರೆಗೂ ಆಗಲ್ಲ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ಬಿಜೆಪಿ ಹಾಗೂ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.
ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಂಧಗಿಯಲ್ಲಿ ಬಿಜೆಪಿ ಗೆಲ್ಲಲು ಕಾಂಗ್ರೆಸ್ ಕಾರಣ. ಬಿಜೆಪಿ ಒಳಜಗಳದಿಂದ ಹಾನಗಲ್ನಲ್ಲಿ ಕಾಂಗ್ರೆಸ್ ಗೆದ್ದಿದೆ. ಮತದಾರರು ಪ್ರೀತಿಯಿಂದ ಮತ ಹಾಕಿಲ್ಲ, ಮುಖಂಡರಿಂದಲೂ ಗೆದ್ದಿಲ್ಲ. ಕಾಂಗ್ರೆಸ್ನಿಂದ ಜನ ಬೇಸತ್ತು ಸಿಂಧಗಿಯಲ್ಲಿ 32 ಸಾವಿರ ಮತಗಳಿಂದ ಸೋಲಿಸಿದ್ದಾರೆ. ಕಾಂಗ್ರೆಸ್ ಪಕ್ಷ ಜೆಡಿಎಸ್ ಅಭ್ಯರ್ಥಿಯನ್ನು ಕರೆದುಕೊಂಡು ಹೋಗಿ ನಿಲ್ಲಿಸಿದ್ದಕ್ಕೆ ಜನರು ಬಿಜೆಪಿಯನ್ನು ಗೆಲ್ಲಿಸಿದ್ದಾರೆ. ಕಾಂಗ್ರೆಸ್ನವರು ಎಲ್ಲಾ ಕಡೆ ಇದೇ ಕೆಲಸ ಮಾಡುತ್ತಿದ್ದಾರೆ. 2018ರಲ್ಲಿ ನಮ್ಮ ಪಕ್ಷದ ಏಳು ಜನ ಕರೆದುಕೊಂಡು ಹೋದರು. ಎಲ್ಲರೂ ಐವತ್ತು ಸಾವಿರದಿಂದ ಸೋತು ಮನೆಗೆ ಹೋದರು. 125 ಸೀಟ್ ಇದ್ದ ಕಾಂಗ್ರೆಸ್ 79ಕ್ಕೆ ಬಂತು. ಜನ ಕಾಂಗ್ರೆಸ್ಗೆ ಬುದ್ದಿ ಕಲಿಸಿದರು ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಇನ್ನು ಚುನಾವಣೆಯಲ್ಲಿ ಸೋಲು-ಗೆಲುವ ಸರ್ವೇ ಸಾಮಾನ್ಯ. ಇದಕ್ಕೆಲ್ಲ ಧೃತಿಗೆಡಬೇಕಿಲ್ಲ ಎಂದು ಅವರು ಹೇಳಿದ್ದಾರೆ.
Mangalore : ಉಳ್ಳಾಲದಲ್ಲಿ ಗೋಡೆ ಕುಸಿದು ಮಕ್ಕಳ ಸಹಿತ ನಾಲ್ವರು ಬಲಿ
ಮನ್ಸೂನ್ ಪ್ರವಾಸಕ್ಕೆ ಹೇಳಿ ಮಾಡಿಸಿದ ಸ್ಥಳ ಕೊಡಗು; ಈ ಪ್ರವಾಸದ ಸಂದರ್ಭದಲ್ಲಿ ಈ ಸ್ಥಳಗಳನ್ನು ಮಿಸ್ ಮಾಡಬೇಡಿ!