ದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ (Arvind Kejriwal) ಅವರ ಮನೆ ಮೇಲೆ ಬಿಜೆಪಿ (BJP) ಕಾರ್ಯಕರ್ತರು ಬುಧವಾರ ದಾಳಿ ನಡೆಸಿದ್ದು, ಕೇಜ್ರಿವಾಲ್ ಇದನ್ನು ಗೂಂಡಾಗಿರಿ ಎಂದು ಕರೆದಿದ್ದಾರೆ.”ಭಾರತದ ಅತಿದೊಡ್ಡ ಪಕ್ಷವು ಗೂಂಡಾಗಿರಿಯಲ್ಲಿ ತೊಡಗಿದರೆ, ಅದು ತಪ್ಪು ಸಂದೇಶವನ್ನು ರವಾನಿಸುತ್ತದೆ. ಅರವಿಂದ ಕೇಜ್ರಿವಾಲ್ ಮುಖ್ಯವಲ್ಲ ಆದರೆ ರಾಷ್ಟ್ರ ಮುಖ್ಯ. ನಾನು ದೇಶಕ್ಕಾಗಿ ನನ್ನ ಪ್ರಾಣವನ್ನು ಕೊಡಬಲ್ಲೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. ದೇಶದ ಅತಿ ದೊಡ್ಡ ಹಾಗೂ ಆಡಳಿತಾರೂಢ ಪಕ್ಷವೇ ದೆಹಲಿಯಲ್ಲಿ ಇಂತಹ ‘ಗೂಂಡಾಗಿರಿ’ ಮಾಡಿದರೆ ದೇಶದ ಯುವಕರಿಗೆ ಯಾವ ಸಂದೇಶ ನೀಡಲಿದೆ? ದೇಶ ಈ ರೀತಿ ಪ್ರಗತಿ ಹೊಂದಲು ಸಾಧ್ಯವಿಲ್ಲ ಎಂದು ಕೇಜ್ರಿವಾಲ್ ಹೇಳಿರುವುದಾಗಿ ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ. ಬುಧವಾರ ಆಮ್ ಆದ್ಮಿ ಪಕ್ಷ (AAP) ಕೇಜ್ರಿವಾಲ್ ಅವರ ಮನೆ ಮೇಲಿನ ದಾಳಿಯ ಕುರಿತು ಟ್ವೀಟ್ ಮಾಡಿದ್ದು, “ಬಿಜೆಪಿ ಗೂಂಡಾಗಳು ದೆಹಲಿ ಪೊಲೀಸರ ಸಮ್ಮುಖದಲ್ಲಿ ಸಿಸಿಟಿವಿ ಕ್ಯಾಮೆರಾಗಳು ಮತ್ತು ಭದ್ರತಾ ತಡೆಗಳನ್ನು ಮುರಿದಿದ್ದಾರೆ” ಎಂದು ಹೇಳಿದೆ. ಇದಾದ ನಂತರ 35-ಸೆಕೆಂಡ್ ಕ್ಲಿಪ್ ಅನ್ನು ಟ್ವೀಟ್ ಮಾಡಿ, ಅದನ್ನು “ರಾ ಸಿಸಿಟಿವಿ ಫೂಟೇಜ್” ಎಂದು ಕರೆದಿದೆ. ಕ್ಲಿಪ್ ಸುಮಾರು ಎರಡು ಡಜನ್ ಪ್ರತಿಭಟನಾಕಾರರು ಗೇಟ್ಗಳವರೆಗೆ ನಡೆದುಕೊಂಡು ಹೋಗುತ್ತಿರುವುದನ್ನು ತೋರಿಸುತ್ತದೆ ಮತ್ತು ಭದ್ರತಾ ತಡೆಗೋಡೆಯನ್ನು ಉರುಳಿಸುವುದನ್ನು ತೋರಿಸುತ್ತದೆ.
ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು
ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?