ಸೋಮವಾರ, ಮೇ 6, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದೇಶಾದ್ಯಂತ ಹಲವು ನೂತನ ಆರೋಗ್ಯ ರಕ್ಷಣೆ ಯೋಜನೆಗಳ ಜಾರಿ

Twitter
Facebook
LinkedIn
WhatsApp
ದೇಶಾದ್ಯಂತ ಹಲವು ನೂತನ ಆರೋಗ್ಯ ರಕ್ಷಣೆ ಯೋಜನೆಗಳ ಜಾರಿ

ಗುಜರಾತ್‌: ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಮತ್ತೊಂದು ಸಿಹಿ ಸುದ್ದಿ ನೀಡಿದ್ದಾರೆ. ಹೌದು, ಮೋದಿ ಗುಜರಾತ್‌ನ ಸಿಎಂ ಆಗಿದ್ದಾಗ ಜಾರಿಗೊಳಿಸಿದ ಯೋಜನೆಗಳಾದ ಆಯುಷ್ಮಾನ್ ಭಾರತ್ ಯೋಜನೆ, ಮಿಷನ್ ಇಂದ್ರಧನುಷ್ ಮತ್ತು ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ (ಪಿಎಂಎಂವಿವೈ) ನಂತಹ ಆರೋಗ್ಯ ರಕ್ಷಣೆ ಯೋಜನೆಗಳ ಮಾದರಿಯಲ್ಲೇ ದೇಶಾದ್ಯಂತ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಪ್ರಧಾನಿ ಮೋದಿ ಗುಜರಾತ್‌ನ ನವಸಾರಿಗೆ ಭೇಟಿ ನೀಡಿ ಸುಮಾರು 3050 ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಶಂಕು ಸ್ಥಾಪನೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, ಗುಜರಾತ್‌ನಲ್ಲಿ ಕೈಗೊಂಡ ಆರೋಗ್ಯ ರಕ್ಷಣೆಯ ಉಪಕ್ರಮಗಳ ಹಲವಾರು ಉದಾಹರಣೆಗಳನ್ನು ಉಲ್ಲೇಖಿಸಿ, ನಾನು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಈ ಯೋಜನೆಗಳು ಸಮಾಜದ ದುರ್ಬಲ ವರ್ಗಗಳಿಗೆ ಹೇಗೆ ಪ್ರಯೋಜನವನ್ನು ನೀಡಿತು ಎಂಬುದನ್ನು ವಿವರಿಸಿದರು. ʻ


ಗುಜರಾತ್‌ನಲ್ಲಿ ಆರೋಗ್ಯ ಮೂಲಸೌಕರ್ಯ ಸುಧಾರಿಸಿದೆ ಮತ್ತು ಆರೋಗ್ಯ ಸೂಚಕಗಳು ಸ್ಥಿರವಾಗಿ ಸುಧಾರಿಸುತ್ತಿವೆ. ಮೂರನೇ ಸುಸ್ಥಿರ ಅಭಿವೃದ್ಧಿ ಗುರಿಗಳ ಸೂಚ್ಯಂಕದಲ್ಲಿ, ಗುಜರಾತ್ ದೇಶದ ಅಗ್ರಸ್ಥಾನದಲ್ಲಿದೆ. ನಾನು ಮುಖ್ಯಮಂತ್ರಿಯಾಗಿದ್ದಾಗ ಬಡವರ ಆರೋಗ್ಯಕ್ಕಾಗಿ ಹಲವಾರು ಕ್ರಮಗಳನ್ನು ಕೈಗೊಂಡಿದ್ದೆವು. ಆ ಅನುಭವಗಳು ಈಗ ದೇಶಾದ್ಯಂತ ಬಡವರಿಗೆ ಪ್ರಯೋಜನವನ್ನು ನೀಡುತ್ತಿವೆʼ ಎಂದು ಹೇಳಿದರು.

ಮೋದಿ ಗುಜರಾತ್‌ನ ಸಿಎಂ ಆಗಿದ್ದಾಗ ಜಾರಿಗೊಳಿಸಿದ ಚಿರಂಜೀವಿ ಯೋಜನೆ ಅಡಿಯಲ್ಲಿ 14 ಲಕ್ಷ ಗರ್ಭಿಣಿಯರಿಗೆ ಅನುಕೂಲವಾಗಿದೆ. ಖಿಲ್ಖಿಲತ್ ಯೋಜನೆಗಳನ್ನು ಮಿಷನ್ ಇಂದ್ರಧನುಷ್ ಮತ್ತು ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ ಹೆಸರಲ್ಲಿ ಜಾರಿಗೊಳಿಸಲಾಗಿದೆ. ಇದಕ್ಕೆ ಮೂರು ಲಕ್ಷ ಮಹಿಳೆಯರು ಒಳಪಟ್ಟಿದ್ದಾರೆ. ಆರೈಕೆ ಕೇಂದ್ರ ಮತ್ತು ದೀನದಯಾಳ್‌ ಔಷಧಾಲಗಳನ್ನು ನಿರ್ಮಿಸಲಾಗಿದ್ದು, ಲಕ್ಷಾಂತರ ಮಂದಿ ಇದರ ಪ್ರಯೋಜನ ಪಡೆದಿದ್ದಾರೆ ಎಂದು ತಿಳಿಸಿದರು.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ