ಸೋಮವಾರ, ಮೇ 6, 2024
ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!-6 ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ!-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ; ಕಂಗನಾ ರಣಾವತ್ ಹೇಳಿಕೆ ವಿಡಿಯೋ ವೈರಲ್-ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದೈವ ದರ್ಶನ ಪಡೆದ ನಿರೂಪಕಿ ಅನುಶ್ರೀ

Twitter
Facebook
LinkedIn
WhatsApp
mcms 8

ಸ್ಯಾಂಡಲ್‌ವುಡ್ (Sandalwood) ನಟಿ ಕಮ್ ನಿರೂಪಕಿ ಅನುಶ್ರೀ (Anushree) ಮತ್ತೆ ಸುದ್ದಿಯಲ್ಲಿದ್ದಾರೆ. ರಿಯಾಲಿಟಿ ಶೋ ನಿರೂಪಣೆ ಶೂಟಿಂಗ್ ಕೊಂಚ ಬ್ರೇಕ್ ನೀಡಿ ದೈವ ಕೋಲದಲ್ಲಿ ಭಾಗಿಯಾಗಿದ್ದಾರೆ. ಈ ಕುರಿತ ಫೋಟೋವನ್ನ ನಟಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

May be an image of 1 person and standing

ತಮ್ಮದೇ ಭಿನ್ನ ಶೈಲಿಯ ನಿರೂಪಣೆ ಮೂಲಕ ಗಮನ ಸೆಳೆದಿರುವ ಅನುಶ್ರೀ ಕೊಂಚ ಬಿಡುವು ಮಾಡಿಕೊಂಡು ದೈವ ಕೋಲದಲ್ಲಿ ಭಾಗಿಯಾಗಿದ್ದಾರೆ. ಮೂಲತಃ ಕರಾವಳಿ ಭಾಗದವರೇ ಆಗಿರುವ ಅನುಶ್ರೀ ದೈವದ ಆರಾಧನೆ ಮಾಡುತ್ತಾರೆ. ಇದೀಗ `777 ಚಾರ್ಲಿ’ (777 Charlie) ನಿರ್ದೇಶಕ ಕಿರಣ್ (Director Kiran) ಅವರ ಮನೆಯಲ್ಲಿ ದೈವ ಕೋಲ (Daiva Kola) ಮಾಡಲಾಗಿತ್ತು. ಈ ವೇಳೆ ಅನುಶ್ರೀ ಮತ್ತು ನಟಿ ಸಂಗೀತಾ (Sangeetha) ಕೂಡ ಭಾಗಿಯಾಗಿದ್ದಾರೆ.

ನಿರ್ದೇಶಕ ಕಿರಣ್ ಅವರ ಕಾಸರಗೋಡು ಮನೆಯಲ್ಲಿ ದೈಲ ಕೋಲ ನಡೆದಿದೆ. ಈ ವೇಳೆ ಅನುಶ್ರೀ ಕೂಡ ಭಾಗಿಯಾಗಿ ಪೂಜೆ ಸಲ್ಲಿಸಿದ್ದಾರೆ. ತಮ್ಮ ವೈಯಕ್ತಿಕ ಜೀವನದ ಬಗ್ಗೆ ದೈವದ ಬಳಿ ಕೇಳಿದ್ದಾರೆ. ಕೊರಗಜ್ಜನಿಗೆ ಕೋಲ ಸೇವೆ ನೀಡಿದ್ದಾರೆ. 

May be an image of 1 person, standing and sky

ದೈವ ಕೋಲದ ಫೋಟೋವನ್ನ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿ, ಸುಂದರ ಹಾಗೂ ದೈವಿಕ ಕ್ಷಣಗಳು, ಕಾಸರಗೋಡು ಮಲ್ಲಮೂಲೆ ದೇವಸ್ಥಾನದಲ್ಲಿ ಎಂದು ನಟಿ ಬರೆದುಕೊಂಡಿದ್ದಾರೆ. ಸದ್ಯ ಈ ಪೋಸ್ಟ್ ಸಖತ್ ಸದ್ದು ಮಾಡ್ತಿದೆ. ಈ ಪೋಸ್ಟ್ ನೋಡುತ್ತಲೇ ಕೆಲ ನೆಟ್ಟಿಗರು ಮದುವೆಯ ಸಿಹಿ ಸುದ್ದಿ ಯಾವಾಗ ಎಂದು ಕಾಮೆಂಟ್ ಮಾಡ್ತಿದ್ದಾರೆ.

May be an image of 1 person, standing, sitting, tree and outdoors

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ