ಗುರುವಾರ, ಮೇ 2, 2024
ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ-ಪೆನ್ ಡ್ರೈವ್ ಪ್ರಕರಣ: ಅಪ್ಪ- ಮಗನಿಗೆ ನೋಟಿಸ್!-ತೆಲಂಗಾಣದ ನಿಜಾಮಾಬಾದ್ ಕ್ಷೇತ್ರದ ಚುನಾವಣಾ AICC ಉಸ್ತುವಾರಿಯಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇಮಕ-ಅನೈತಿಕ ಸಂಬಂಧ ಶಂಕೆ ಕಾರಿಗೆ ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ!-Commercial LPG ಗ್ಯಾಸ್‌ ಸಿಲಿಂಡರ್‌ ದರದಲ್ಲಿ19 ರೂ. ಇಳಿಕೆ-ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದೊಡ್ಮನೆಯಲ್ಲಿ ಬ್ರೇಕಪ್ ಮಾಡಿಕೊಂಡ ರಾಕೇಶ್ – ಅಮೂಲ್ಯ

Twitter
Facebook
LinkedIn
WhatsApp
ದೊಡ್ಮನೆಯಲ್ಲಿ ಬ್ರೇಕಪ್ ಮಾಡಿಕೊಂಡ ರಾಕೇಶ್ – ಅಮೂಲ್ಯ

ಬಿಗ್ ಬಾಸ್ ಮನೆಯಲ್ಲಿ (Bigg boss) ಹೈಲೈಟ್ ಆಗಿರುವ ಮತ್ತೊಂದು ಜೋಡಿ ಅಂದ್ರೆ ರಾಕೇಶ್ ಅಡಿಗ (Rakesh Agiga) ಮತ್ತು ಅಮೂಲ್ಯ ಗೌಡ (Amulya Gowda) ಇದೀಗ ಬೇರೆ ಬೇರೇ ಆಗಿದ್ದಾರೆ. ಟೀ ವಿಚಾರಕ್ಕೆ ಮನಸ್ತಾಪ ಆಗಿ, ದೂರ ದೂರ ಆಗಿದ್ದಾರೆ.

ದೊಡ್ಮನೆಯಲ್ಲಿ ಸೋನು ನಂತರ ರಾಕೇಶ್‌ಗೆ ಸಖತ್ ಕ್ಲೋಸ್ ಆಗಿರೋದೆ ಅಮೂಲ್ಯ ಗೌಡ, ಮೊದಲಿನಿಂದಲೂ ಅಮ್ಮು ಮತ್ತೆ ರಾಕಿ ಒಬ್ಬರಿಗೊಬ್ಬರು ಸಾಥ್ ನೀಡುತ್ತಾ ಪ್ರಶಂಸೆ ವ್ಯಕ್ತಪಡಿಸುತ್ತಿದ್ದ ಈ ಜೋಡಿಯ ನಡುವೆ ಬಿರುಕು ಉಂಟಾಗಿದೆ. ಟೀ ವಿಚಾರಕ್ಕೆ ಬಿಗ್ ಬಾಸ್ ಮನೆಯಲ್ಲಿ ದೊಡ್ಡ ಗಲಾಟೆನೇ ಆಗಿದೆ. ಅಮ್ಮು ಮುನಿಸಿಗೆ ರಾಕಿ ಮನವೊಲಿಸಲು ಸೋತಿದ್ದಾರೆ. 

ಟೀ ಅವರವರೇ ಮಾಡಿಕೋತ್ತಾರಾ, ಎಲ್ಲರಿಗೂ ಮಾಡೋದಾ ಎಂದು ರಾಕಿ ಮನೆ ಮಂದಿಗೆ ಕೇಳಿದ್ದಾರೆ. ಈ ವೇಳೆ ನನಗೆ ಹಾಲಿಗೆ ಜಾಸ್ತಿ ನೀರು ಹಾಕಬೇಡಿ. ನನಗೆ ಒಂದು ಪ್ಯಾಕೇಟ್ ಹಾಲು ಕೊಟ್ಟು ಬಿಡಿ ಎಂದು ಈ ವೇಳೆ ಅಮೂಲ್ಯ ಹೇಳಿದ್ದಾರೆ. ನನಗೆ ಪ್ರತಿಕ್ರಿಯೆ ನೀಡಿಲ್ಲ ನೀವು ಎಂದು ಅಮ್ಮು, ರಾಕಿ ಮೇಲೆ ಬೇಸರ ವ್ಯಕ್ತಪಡಿಸಿದ್ದಾರೆ. ಸಾರಿ ಈ ವೇಳೆ ನನ್ನ ಗಮನಕ್ಕೆ ಬಂದಿಲ್ಲ ಎಂದ ರಾಕಿ ಮಾತಿಗೆ, ನಾನು ನಿಮ್ಮ ಗಮನಕ್ಕೆ ಬಂದಿಲ್ಲ ಎಂದಿದ್ದು ಹಿಂಸೆ ಆಯ್ತು. ನೀವು ಎರಡು ಹೆಜ್ಜೆ ಮುಂದೆ ಬಂದಿದ್ದರೆ ನಿಮ್ಮ ಇಗೋ ಕಮ್ಮಿಯಾಗುತ್ತಿರಲಿಲ್ಲ ಎಂದಿದ್ದಾರೆ.

ನನಗೆ ಕಾಮನ್ ಸೆನ್ಸ್ ಇಲ್ಲಾ, ನಿಮ್ಮ ಅಷ್ಟು ಥಿಂಕಿಂಗ್ ಲೆವಲ್‌ಗೆ ನಾನಿಲ್ಲ ಎಂದು ರಾಕಿ ಮುಂದೆ ಕಣ್ಣೀರಿಟ್ಟಿದ್ದಾರೆ. ಒಟ್ನಲ್ಲಿ ರಾಕಿ ಕ್ಯಾಪ್ಟೆನ್ಸಿ ಸಮಯದಲ್ಲಿ ಟೀ ವಿಚಾರಕ್ಕೆ ದೊಡ್ಡ ಕಲಹ ಉಂಟಾಗಿದೆ. ಈ ಜೋಡಿ ಇದೀಗ ದೂರ ದೂರ ಆಗಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ