ಗುರುವಾರ, ಮೇ 9, 2024
ಕೋವಿಶೀಲ್ಡ್‌ ಅಡ್ಡ ಪರಿಣಾಮ ಬಹಿರಂಗ ಆದ ಬೆನ್ನಲ್ಲೇ ಉತ್ಪಾದನೆ ಸ್ಥಗಿತಗೊಂಡಿದೆ ಎಂದ ಕಂಪೆನಿ..!-ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ..!-ಶಾಕಿಂಗ್ ನ್ಯೂಸ್; ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು..!-ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!-ಮದುವೆ ಆಗಲ್ಲ, ಆದರೆ ರಾಜಕೀಯಕ್ಕೆ ಹೋಗುವ ಆಸೆ ಇದೆ; ಸೋನು ಶ್ರೀನಿವಾಸ್ ಗೌಡ-ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!-ರೋಹಿಣಿ ಸಿಂಧೂರಿ ಮತ್ತು ರೂಪ ಮೌದ್ಗಿಲ್ ಗೆ ನ್ಯಾಯಾಲಯ ಮಹತ್ವದ ಸಲಹೆ ; ಏನದು?-ಕೋವಿಶೀಲ್ಡ್ ಲಸಿಕೆ ಹಿಂಪಡೆದ ತಯಾರಕ ಕಂಪನಿ ಆಸ್ಟ್ರಾಜೆನಿಕಾ..!-ಹೆಚ್ ಡಿ ರೇವಣ್ಣಗೆ ಮೇ 14 ರವರೆಗೆ ನ್ಯಾಯಾಂಗ ಬಂಧನ ಮುಂದೂಡಿಕೆ..!-ಮಂಗಳೂರು: 21 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆ...!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಧರ್ಮಸ್ಥಳಕ್ಕೆ ಪಾದಯಾತ್ರೆ ಹೊರಟಿದ್ದ ಯುವಕ ನಾಪತ್ತೆ – ಹುಡುಕಿಕೊಟ್ಟವರಿಗೆ ನಗದು ಬಹುಮಾನ

Twitter
Facebook
LinkedIn
WhatsApp
WhatsApp Image 2023 02 18 at 3.42.10 PM

ಚಿಕ್ಕಮಗಳೂರು: ಧರ್ಮಸ್ಥಳಕ್ಕೆ ಪಾದಯಾತ್ರೆ ಹೊರಟಿದ್ದ ಯುವಕನೊಬ್ಬ (Youth) ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ನಾಪತ್ತೆಯಾಗಿದ್ದು (Missing), ಆತನನ್ನು ಹುಡುಕಿಕೊಟ್ಟವರಿಗೆ 5,000 ರೂ. ಬಹುಮಾನ ನೀಡುತ್ತೇವೆ ಎಂದು ಆತನ ಪೋಷಕರು ಹೇಳಿದ್ದಾರೆ.

ನಾಪತ್ತೆಯಾದ ಯುವಕನ ಪೋಷಕರು ಮಗನಿಗಾಗಿ ಚಾರ್ಮಾಡಿಘಾಟ್, ಕೊಟ್ಟಿಗೆಹಾರ, ಬಣಕಲ್ ಸೇರಿದಂತೆ ಹಲವೆಡೆ ತೀವ್ರ ಹುಡುಕಾಟ ನಡೆಸಿದ್ದಾರೆ. ಆ ದಾರಿಯಾಗಿ ಸಂಚರಿಸುವ ವಾಹನಗಳನ್ನು ತಪಾಸಣೆ ಮಾಡಿದ್ದಾರೆ. ಸರ್ಕಾರಿ ಬಸ್‌ಗಳಲ್ಲೂ ಹುಡುಕಾಟ ನಡೆಸಿದ್ದಾರೆ. ಆದರೆ ಯುವಕ ಮಾತ್ರ ಪತ್ತೆಯಾಗಿಲ್ಲ.

ನಾಪತ್ತೆಯಾಗಿರುವ ಯುವಕನನ್ನು ಹಾಸನ ಜಿಲ್ಲೆ (Hassan) ಅರಸೀಕೆರೆ ತಾಲೂಕಿನ ಗಂಡಸಿ ಸಮೀಪದ ತಿಮ್ಲಾಪುರ ಗ್ರಾಮದ ಲವ (22) ಎಂದು ಗುರುತಿಸಲಾಗಿದೆ. ಯುವಕ ಲವ ಸ್ವಲ್ಪ ಬುದ್ಧಿಮಾಂದ್ಯನಾಗಿದ್ದಾನೆ. ಆದರೂ ಆತನಿಗೆ ಒಂದಷ್ಟು ಜ್ಞಾನವಿದೆ, ಒಳ್ಳೆಯದು-ಕೆಟ್ಟದರ ಬಗ್ಗೆ ಅರಿವಿದೆ ಎಂದು ಪೋಷಕರು ತಿಳಿಸಿದ್ದಾರೆ. 

ಹಾಸನದಿಂದ ಪೋಷಕರ ಜೊತೆಯೇ ನಡೆದುಕೊಂಡು ಬಂದವನು ಕೊಟ್ಟಿಗೆಹಾರದಲ್ಲಿ ನಾಪತ್ತೆಯಾಗಿದ್ದಾನೆ. ತಕ್ಷಣ ಜೊತೆಯಲ್ಲಿದ್ದವರು ಅಂಗಡಿ-ಮುಂಗಟ್ಟು, ಬಸ್, ಸುತ್ತಮುತ್ತ ಎಲ್ಲಾ ಕಡೆ ಹುಡುಕಾಡಿದ್ದಾರೆ. ಆದರೆ ಆತನ ಸುಳಿವು ಸಿಕ್ಕಿಲ್ಲ. ಕೂಡಲೇ ಪೋಷಕರು ಇಲ್ಲೇ ಎಲ್ಲೋ ಸುತ್ತಮುತ್ತ ಇರುತ್ತಾನೆ ಎಂದು ಸ್ಥಳಿಯರ ಸಹಾಯ ಪಡೆದು ಹುಡುಕಾಟ ನಡೆಸಿದ್ದಾರೆ. ಆದರೂ ಆತ ಸಿಕ್ಕಿಲ್ಲ.

ಪೋಷಕರು ಆತನನ್ನು ಹುಡುಕಿಕೊಟ್ಟವರಿಗೆ 5,000 ರೂ. ಹಣ ನೀಡುತ್ತೇವೆ (Cash Prize) ಎಂದಿದ್ದಾರೆ. ಆದರೆ ಕೊಟ್ಟಿಗೆಹಾರದ ಸ್ಥಳೀಯ ಯುವಕರಾದ ಸಂತೋಷ್, ತನ್ವೀರ್, ಸಂಜಯ್, ನಂದೀಶ್ ಸೇರಿದಂತೆ ಹಲವರು ನಿಮ್ಮ ಹಣ ಬೇಡ, ನಿಮ್ಮ ಮಗ ಸಿಕ್ಕರೆ ಸಾಕೆಂದಿದ್ದಾರೆ. ಆತನ ಫೋಟೋವನ್ನು ಮೊಬೈಲ್‌ನಲ್ಲಿ ಬೇರೆಯವರಿಗೂ ಶೇರ್ ಮಾಡಿದ್ದು, ಪತ್ತೆಯಾದಲ್ಲಿ ತಿಳಿಸುವಂತೆ ಕೋರಿಕೊಂಡಿದ್ದಾರೆ. ಇದೀಗ ಆತನ ಪೋಷಕರು ಈ ಬಗ್ಗೆ ಬಣಕಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ