ಧಾರವಾಡ: ಮರಕ್ಕೆ ಕ್ರೂಸರ್ ಡಿಕ್ಕಿಯಾಗಿ 7 ಜನರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಭೀಕರ ರಸ್ತೆ ಅಪಘಾತವು ಜಿಲ್ಲೆಯ ತಾಲೂಕಿನ ಬಾಡ ಗ್ರಾಮದ ಬಳಿ ದುರ್ಘಟನೆ ಸಂಭವಿಸಿದೆ. ಬೆನಕಟ್ಟಿ ಗ್ರಾಮದ ಅನನ್ಯಾ(14), ಹರೀಶ್(13), ಶಿಲ್ಪಾ(34), ನೀಲವ್ವ(60), ಮಧುಶ್ರೀ(20), ಮಹೇಶ್ವರಯ್ಯ(11), ಶಂಭುಲಿಂಗಯ್ಯ(35) ಮೃತಪಟ್ಟವರು. 6 ಜನರ ಸ್ಥಿತಿ ಗಂಭೀರವಾಗಿದ್ದು, ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಿಗದಿ ಗ್ರಾಮದ ಯುವಕನ ನಿಶ್ಚಿತಾರ್ಥ ಮುಗಿಸಿಕೊಂಡು ಮನ್ಸೂರು ಗ್ರಾಮದಿಂದ ಬೆನಕಟ್ಟಿಗೆ ಹಿಂದಿರುಗುವಾಗ ರಾತ್ರಿ 1.30ರಿಂದ 2 ಗಂಟೆ ಸುಮಾರಿಗೆ ಭೀಕರ ಅಪಘಾತ ನಡೆದಿದ್ದು, ಕ್ರೂಸರ್ ಚಾಲಕನ ಅಜಾಗರೂಕತೆಯೇ ದುರಂತಕ್ಕೆ ಕಾರಣ ಎನ್ನಲಾಗುತ್ತಿದೆ. ಮಳೆಯಿಂದಾಗಿ ಮನ್ಸೂರು ರೇವಣಸಿದ್ದೇಶ್ವರ ಮಠಕ್ಕೆ ಮದುವೆ ಸ್ಥಳಾಂತರಿಸಿದ್ದರು. ಮದುವೆ ಮುನ್ನ ದಿನ ನಿಶ್ಚಿತಾರ್ಥಕ್ಕೆ ಸಂಬಂಧಿಕರು ತೆರಳಿದ್ದರು. ಇಂದು ಮದುವೆ ನಡೆಯಬೇಕಾಗಿತ್ತ. ಆದರೆ ಆಘಾತದಿಂದ ಸಂಬಂಧಿಕರು ಕಲ್ಯಾಣ ಮಂಟಪದ ಕಡೆಗೆ ಬರುತ್ತಿಲ್ಲ. ಸಂಭ್ರಮದ ಬದಲಿಗೆ ಮದುವೆ ನಡೆಯಬೇಕಾದ ಸ್ಥಳದಲ್ಲಿ ಸ್ಮಶಾನ ಮೌನ ಆವರಿಸಿದೆ. ಅಪಘಾತ ಸ್ಥಳಕ್ಕೆ ಎಸ್ಪಿ ಕೃಷ್ಣಕಾಂತ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಧಾರವಾಡ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು
ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?