ಮಂಗಳವಾರ, ಏಪ್ರಿಲ್ 30, 2024
ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಧಾರವಾಡದಲ್ಲಿ ಭೀಕರ ಅಪಘಾತ; 7 ಜನರು ಸ್ಥಳದಲ್ಲೇ ಸಾವು, 6 ಜನರ ಸ್ಥಿತಿ ಗಂಭೀರ!!

Twitter
Facebook
LinkedIn
WhatsApp
ಧಾರವಾಡದಲ್ಲಿ ಭೀಕರ ಅಪಘಾತ; 7 ಜನರು ಸ್ಥಳದಲ್ಲೇ ಸಾವು, 6 ಜನರ ಸ್ಥಿತಿ ಗಂಭೀರ!!

ಧಾರವಾಡ: ಮರಕ್ಕೆ ಕ್ರೂಸರ್ ಡಿಕ್ಕಿಯಾಗಿ 7 ಜನರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಭೀಕರ ರಸ್ತೆ ಅಪಘಾತವು ಜಿಲ್ಲೆಯ ತಾಲೂಕಿನ ಬಾಡ ಗ್ರಾಮದ ಬಳಿ ದುರ್ಘಟನೆ ಸಂಭವಿಸಿದೆ. ಬೆನಕಟ್ಟಿ ಗ್ರಾಮದ ಅನನ್ಯಾ(14), ಹರೀಶ್(13), ಶಿಲ್ಪಾ(34), ನೀಲವ್ವ(60), ಮಧುಶ್ರೀ(20), ಮಹೇಶ್ವರಯ್ಯ(11), ಶಂಭುಲಿಂಗಯ್ಯ(35) ಮೃತಪಟ್ಟವರು. 6 ಜನರ ಸ್ಥಿತಿ ಗಂಭೀರವಾಗಿದ್ದು, ಹುಬ್ಬಳ್ಳಿ ಕಿಮ್ಸ್​ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಿಗದಿ ಗ್ರಾಮದ ಯುವಕನ ನಿಶ್ಚಿತಾರ್ಥ ಮುಗಿಸಿಕೊಂಡು ಮನ್ಸೂರು ಗ್ರಾಮದಿಂದ ಬೆನಕಟ್ಟಿಗೆ ಹಿಂದಿರುಗುವಾಗ ರಾತ್ರಿ 1.30ರಿಂದ 2 ಗಂಟೆ ಸುಮಾರಿಗೆ ಭೀಕರ ಅಪಘಾತ ನಡೆದಿದ್ದು, ಕ್ರೂಸರ್ ಚಾಲಕನ ಅಜಾಗರೂಕತೆಯೇ ದುರಂತಕ್ಕೆ ಕಾರಣ ಎನ್ನಲಾಗುತ್ತಿದೆ. ಮಳೆಯಿಂದಾಗಿ ಮನ್ಸೂರು ರೇವಣಸಿದ್ದೇಶ್ವರ ಮಠಕ್ಕೆ ಮದುವೆ ಸ್ಥಳಾಂತರಿಸಿದ್ದರು. ಮದುವೆ ಮುನ್ನ ದಿನ ನಿಶ್ಚಿತಾರ್ಥಕ್ಕೆ ಸಂಬಂಧಿಕರು ತೆರಳಿದ್ದರು. ಇಂದು ಮದುವೆ ನಡೆಯಬೇಕಾಗಿತ್ತ. ಆದರೆ ಆಘಾತದಿಂದ ಸಂಬಂಧಿಕರು ಕಲ್ಯಾಣ ಮಂಟಪದ ಕಡೆಗೆ ಬರುತ್ತಿಲ್ಲ. ಸಂಭ್ರಮದ ಬದಲಿಗೆ ಮದುವೆ ನಡೆಯಬೇಕಾದ ಸ್ಥಳದಲ್ಲಿ ಸ್ಮಶಾನ ಮೌನ ಆವರಿಸಿದೆ. ಅಪಘಾತ ಸ್ಥಳಕ್ಕೆ ಎಸ್​ಪಿ ಕೃಷ್ಣಕಾಂತ್​ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಧಾರವಾಡ ಗ್ರಾಮಾಂತರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ

ಅಂಕಣ