ಶನಿವಾರ, ಮೇ 4, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಟಿ ದಿವ್ಯಾ ಶ್ರೀಧರ್ ಪತಿ ಅಮ್ಜಾದ್ ಖಾನ್ ಗೆ ಮಂಗಳಮುಖಿ ಜೊತೆ ಸಂಬಂಧ

Twitter
Facebook
LinkedIn
WhatsApp
ನಟಿ ದಿವ್ಯಾ ಶ್ರೀಧರ್ ಪತಿ ಅಮ್ಜಾದ್ ಖಾನ್ ಗೆ ಮಂಗಳಮುಖಿ ಜೊತೆ ಸಂಬಂಧ

ನ್ನಡದ ನಟಿ ದಿವ್ಯಾ ಶ್ರೀಧರ್ (Divya Shridhar) ಹಾಗೂ ಅಮ್ಜಾದ್ ಖಾನ್ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ಈ ಸುದ್ದಿಯಿಂದ ಸ್ವತಃ ದಿವ್ಯಾ ಶಾಕ್ ಆಗಿದ್ದಾರೆ. ಸದ್ಯ ಅಮ್ಜಾದ್ ಖಾನ್ ಜೈಲಿನಲ್ಲಿದ್ದು, ಈ ಸಂದರ್ಭದಲ್ಲಿ ಅವರಿಗೆ ಮಂಗಳಮುಖಿ ಜೊತೆ ಸಂಬಂಧ ಇತ್ತು ಎನ್ನುವ  ಆಡಿಯೋ ವೈರಲ್ ಆಗಿದೆ. ಸಂಬಂಧ ಇತ್ತು ಎಂದು ಸ್ವತಃ ಆ ಮಂಗಳಮುಖಿಯೇ ಹೇಳಿರುವ ಆಡಿಯೋ (Audio) ಅದಾಗಿದೆ. ಅಲ್ಲದೇ, ಮಂಗಳಮುಖಿ ಜೊತೆ ಅಮ್ಜಾದ್ ಇರುವಂತಹ ಫೋಟೋಗಳು ಕೂಡ ಹರಿದಾಡುತ್ತಿವೆ.

ಪ್ರಿಯದರ್ಶಿನಿ (Priyadarshini) ಹೆಸರಿನ ಈ ಮಂಗಳಮುಖಿ ಸದ್ಯ ಇರುವುದು ಮಲೇಶಿಯಾದಲ್ಲಿ. ಈಕೆಯ ಜೊತೆಯೇ ಅಮ್ಜಾದ್ ಗೆ ಸಂಬಂಧವಿತ್ತು ಎಂದು ಆ ಆಡಿಯೋದಲ್ಲಿ ಹೇಳಲಾಗಿದೆ. ‘ಅವನು ನನ್ನನ್ನು ಪ್ರೀತಿಸಿದ. ಆನಂತರ ಗೊತ್ತಾಯಿತು ಅವನೊಬ್ಬ ಹೆಣ್ಣುಬಾಕಾ ಅಂತ. ಚೆನ್ನೈನಲ್ಲಿ ಅವನು ನನ್ನ ಜೊತೆ ಸಹ ಜೀವನ ನಡೆಸಿದ್ದಾನೆ. ಅಲ್ಲದೇ, ವಿವಾಹ ಕೂಡ ಆಗಿದ್ದ. ಎರಡು ವರ್ಷ ಒಟ್ಟಿಗೆ ಇದ್ದೆವು. ಆಮೇಲೆ ನನ್ನನ್ನು ಅವನು ದೂರ ಮಾಡಿದ. ನಾನು ನೋವು ತಾಳಲಾರದೆ ಮಲೇಶಿಯಾಗೆ ಹೊರಟೆ’ ಎಂದು ಆಡಿಯೋದಲ್ಲಿ ಹೇಳಲಾಗಿದೆ. 

ಈ ಆಡಿಯೋ ಇದೀಗ ಸಖತ್ ವೈರಲ್ ಆಗಿದೆ. ಅಮ್ಜಾದ್ ಸದ್ಯ ಜೈಲಿನಲ್ಲಿ ಇರುವುದರಿಂದ ಈ ಆಡಿಯೋ ಅವರ ಜೀವನಕ್ಕೆ ಯಾವೆಲ್ಲ ರೀತಿಯಲ್ಲಿ ತೊಂದರೆ ತಂದು ಇಡಲಿದೆ ಎನ್ನುವುದೇ ಸದ್ಯಕ್ಕಿರುವ ಪ್ರಶ್ನೆ. ಈ ಆಡಿಯೋ ವೈರಲ್ ಆಗುತ್ತಿದ್ದಂತೆಯೇ ಸ್ವತಃ ದಿವ್ಯಾ ಶ್ರೀಧರ್ ಅವರೇ ಶಾಕ್ ಗೆ ಒಳಗಾಗಿದ್ದು, ಆ ಹುಡುಗಿ ಯಾರು ಎಂದು ತಿಳಿದುಕೊಳ್ಳುವ ಪ್ರಯತ್ನ ಕೂಡ ಮಾಡಿಕೊಳ್ಳುತ್ತಿದ್ದಾರಂತೆ.

ಪತಿ ಮೇಲೆ ಸ್ವತಃ ದಿವ್ಯಾ ಶ್ರೀಧರ್ ಅವರೇ ದೂರು ನೀಡಿದ್ದರು. ಅಮ್ಜಾದ್ (Amjad Khan) ಬಂಧನಕ್ಕೂ ಮುನ್ನ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮಹಿಳಾ ಆಯೋಗ ಕೂಡ  ಪ್ರವೇಶ ಮಾಡಿತ್ತು. ಕರ್ನಾಟಕದ ನಟಿ ದಿವ್ಯಾ ಶ್ರೀಧರ್ ಗೆ ಸೂಕ್ತ ನ್ಯಾಯ ಒದಗಿಸುವಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ಆಗ್ರಹಿಸಿ, ಈ ಕುರಿತಂತೆ ತಮಿಳು ನಾಡು ಮಹಿಳಾ ಆಯೋಗದ ಜೊತೆ ದೂರವಾಣಿ ಮೂಲಕವೂ ಮಾತನಾಡಿದ್ದರು.

ತಮಿಳು ನಾಡು ಮಹಿಳಾ ಆಯೋಗದ ಜೊತೆ ದೂರವಾಣಿಯಲ್ಲಿ ಮಾತನಾಡುವುದರ ಜೊತೆಗೆ ಲಿಖಿತ ರೂಪದಲ್ಲೂ ಆಯೋಗಕ್ಕೆ ಪತ್ರ ಬರೆದು, ದಿವ್ಯಾಗೆ ಸೂಕ್ತ ರಕ್ಷಣೆ ಮತ್ತು ನ್ಯಾಯ ಒದಗಿಸುವಂತೆ ಮನವಿ ಮಾಡಿದ್ದಾರಂತೆ. ದಿವ್ಯಾ ಶ್ರೀಧರ್ ತನ್ನ ಗಂಡನಿಂದ ದೈಹಿಕ ಹಲ್ಲೆ ಮತ್ತು ಮಾನಸಿಕ ಕಿರುಕುಳಕ್ಕೆ ಒಳಗಾಗಿದ್ದರಿಂದ ಅವರಿಗೆ ರಕ್ಷಣೆ ನೀಡಬೇಕು. ಗರ್ಭಿಣಿ ಅನ್ನುವುದನ್ನೂ ನೋಡದೇ ಆಕೆಯ ಪತಿಯು ಹೊಟ್ಟೆಗೆ ಒದ್ದಿರುವ ಕುರಿತು ಗಂಭೀರ ಪ್ರಕರಣ ಎಂದು ಪರಿಗಣಿಸಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿತ್ತು.

ಸ್ಯಾಂಡಲ್ ವುಡ್ ಮೂಲಕ ಬಣ್ಣದ ಪ್ರಪಂಚಕ್ಕೆ ಕಾಲಿಟ್ಟ ದಿವ್ಯಾ ಶ್ರೀಧರ್, ಆನಂತರ ಕಿರುತೆರೆ ಜಗತ್ತಿಗೆ ಕಾಲಿಟ್ಟರು. ಸಿನಿಮಾ ರಂಗದಲ್ಲಿ ಅಷ್ಟೇನೂ ಮಿಂಚದೇ ಇದ್ದರೂ, ಆಕಾಶ ದೀಪ ಧಾರಾವಾಹಿ ಮೂಲಕ ಸಖತ್ ಫೇಮಸ್ ಆದರು. ಈ ಧಾರಾವಾಹಿಯ ಯಶಸ್ಸು ಅವರನ್ನು ತಮಿಳು ಕಿರುತೆರೆ ಜಗತ್ತಿಗೂ ಕಾಲಿಡುವಂತೆ ಮಾಡಿತು. ತಮಿಳು ಧಾರಾವಾಹಿಯಲ್ಲೂ ದಿವ್ಯಾ ಸಾಕಷ್ಟು ಹೆಸರು ಮಾಡಿದರು.

ತಮಿಳು ಧಾರಾವಾಹಿಯ ಸಂದರ್ಭದಲ್ಲೇ ನಟ ಅನರ್ವ್ ಅಲಿಯಾಸ್ ಅಮ್ಜದ್ ಖಾನ್ ಜೊತೆ ಸ್ನೇಹ ಬೆಳೆದು, ಅದು ಪ್ರೀತಿಗೂ ತಿರುಗಿ ನಂತರ ಮದುವೆಯಾಗಿದ್ದಾರೆ. ದಿವ್ಯಾ ಪ್ರಗ್ನೆಂಟ್ ಎಂದು ತಿಳಿಯುತ್ತಿದ್ದಂತೆಯೇ ಪತಿ ಅವರಿಂದ ದೂರವಾಗುವುದಕ್ಕೆ ಶುರು ಮಾಡಿದರು ಎಂದು ಆರೋಪಿಸಿದ್ದಾರೆ ದಿವ್ಯಾ. ಅಲ್ಲದೇ, ತಮಗೆ ಪತಿಯಿಂದ ದೈಹಿಕ ಹಿಂಸೆ ಸೇರಿದಂತೆ ಹಲವು ಆರೋಪಗಳನ್ನು ದಿವ್ಯಾ ಮಾಡಿದ್ದಾರೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಅಂಕಣ