ಭಾನುವಾರ, ಫೆಬ್ರವರಿ 23, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ನಟಿ, ನಿರೂಪಕಿ ರಶ್ಮಿ ಗೌತಮ್ ಅವರಿಗೆ ಸಾಮಾಜಿಕ ಜಾಲತಾಣದ ಮೂಲಕ ಬೆದರಿಕೆ!

Twitter
Facebook
LinkedIn
WhatsApp
ನಟಿ, ನಿರೂಪಕಿ ರಶ್ಮಿ ಗೌತಮ್ ಅವರಿಗೆ ಸಾಮಾಜಿಕ ಜಾಲತಾಣದ ಮೂಲಕ ಬೆದರಿಕೆ!

ತೆಲುಗು ಟಿವಿ ಲೋಕದ ಜನಪ್ರಿಯ ನಿರೂಪಕಿ ಹಾಗೂ ನಟಿಯೂ ಆಗಿರುವ ರಶ್ಮಿ ಗೌತಮ್ (Rashmi Gautam) ಅವರಿಗೆ ವ್ಯಕ್ತಿಯೊಬ್ಬ ಸಾಮಾಜಿಕ ಜಾಲತಾಣದ ಮೂಲಕ ಬೆದರಿಕೆ ಹಾಕಿದ್ದಾನೆ. ತಮಗೆ ಬಂದಿರುವ ಬೆದರಿಕೆ ಸಂದೇಶದ ಸ್ಕ್ರೀನ್ ಶಾಟ್ ಅನ್ನು ಟ್ವಿಟ್ಟರ್​ನಲ್ಲಿ ಹಂಚಿಕೊಂಡಿರುವ ನಟಿ ರಶ್ಮಿ, ಈತನ ವಿರುದ್ಧ ದೂರು ದಾಖಲಿಸಲೆ? ಎಂದು ಸಲಹೆ ಕೇಳಿದ್ದಾರೆ.

rashmi gautam 1 2

ರಶ್ಮಿ ಹಂಚಿಕೊಂಡಿರುವ ಸ್ಕ್ರೀನ್ ಶಾಟ್​ನಲ್ಲಿ ಒಬ್ಬನೇ ವ್ಯಕ್ತಿ ಕಳಿಸಿರುವ ಎರಡು ಸಂದೇಶಗಳಿದ್ದು, 2022 ರ ಜೂನ್​ನಲ್ಲಿ ಕಳಿಸಿರುವ ಸಂದೇಶದಲ್ಲಿ, ”ನಿನಗೆ ವಯಸ್ಸು ದಾಟಿ ಹೋಗುತ್ತಿದೆ ಮೊದಲು ಮದುವೆಯಾಗು” ಎಂದಿದ್ದಾನೆ. ಅದರ ಬಳಿಕ ಫೆಬ್ರವರಿ 25 ರಂದು ಕಳಿಸಿರುವ ಸಂದೇಶದಲ್ಲಿ ಕೊಲೆ ಬೆದರಿಕೆ ಹಾಕಿರುವ ನೆಟ್ಟಿಗ, ”ನಿನ್ನ ವಿರುದ್ಧ ಮಾಟ ಮಾಡಿಸುತ್ತೇನೆ. ತೆಪ್ಪಗೆ ಮನೆಯಲ್ಲಿರುವ ರೋಡಿಗೆ ತಿರುಗಲು ಬಂದರೆ ಆಕ್ಸಿಡೆಂಟ್ ಆಗಿ ಸಾಯುತ್ತೀಯ. ನೀನು ಪಾಪಿಷ್ಟೆ ನಿನ್ನ ಮೇಲೆ ಆಸಿಡ್ ಸುರಿಯುತ್ತೇನೆ. ತೆಪ್ಪಗೆ ಇರು, ನಿನ್ನ ಇಷ್ಟ ಬಂದಂತೆ ವರ್ತಿಸಿದರೆ ಕಷ್ಟಕ್ಕೆ ಗುರಿಯಾಗುತ್ತೀಯ” ಎಂದಿದ್ದಾನೆ.

ತಮಗೆ ಬಂದಿರುವ ಬೆದರಿಕೆ ಸಂದೇಶ ಹಂಚಿಕೊಂಡಿರುವ ನಟಿ ರಶ್ಮಿ ಗೌತಮ್, ”ಈತ ಅಥವಾ ಈಕೆಗೆ ಕೆಲವು ತಿಂಗಳ ಹಿಂದೆ ನನ್ನ ವಯಸ್ಸಿನ ಬಗ್ಗೆ ಮದುವೆ ಬಗ್ಗೆ ಕಾಳಜಿ ಇತ್ತು, ಈಗ ಹಠಾತ್ತನೆ ಕೊಲೆ ಮಾಡುವುದಾಗಿ, ಆಸಿಡ್ ಸುರಿಯುವುದಾಗಿ ಬೆದರಿಕೆ ಹಾಕಿದ್ದಾರೆ. ಇದರ ಕುರಿತು ನಾನು ದೂರು ನೀಡಲಾ ಬೇಡವಾ?” ಎಂದು ನೆಟ್ಟಿಗರ ಬಳಿ ರಶ್ಮಿ ಸಲಹೆ ಕೇಳಿದ್ದಾರೆ.

ರಶ್ಮಿ ಗೌತಮ್, ಮೂಲತಃ ಒಡಿಸ್ಸಾದವರಾದರೂ ಸಹ ತೆಲುಗು ಟಿವಿ ಜಗತ್ತಿನಲ್ಲಿ ಜನಪ್ರಿಯರು. ಹಲವು ಟಿವಿ ಶೋಗಳ ನಿರೂಪಣೆ ಮಾಡುತ್ತಿರುವ ರಶ್ಮಿ, ಸಾಮಾಜಿಕ ಜಾಲತಾಣದಲ್ಲಿಯೂ ಸಖತ್ ಸಕ್ರಿಯರು. ತಮ್ಮ ಡ್ಯಾನ್ಸ್ ವಿಡಿಯೋಗಳನ್ನು ಆಗಾಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವ ಈ ನಟಿ ಸಖತ್ ಬೋಲ್ಡ್ ಸಹ.

ಪ್ರಾಣಿ ಪ್ರೇಮಿ ಸಹ ಆಗಿರುವ ನಟಿ, ಆಂಕರ್ ರಶ್ಮಿ, ಕೆಲ ದಿನಗಳ ಹಿಂದೆ ಹೈದರಾಬಾದ್​ನಲ್ಲಿ ಮಗುವೊಂದರ ಮೇಲೆ ನಡೆದ ಬೀದಿ ನಾಯಿಗಳ ದಾಳಿಯ ಬಗ್ಗೆ ಮಾಡಿದ್ದ ಟ್ವೀಟ್ ಚರ್ಚೆಗೆ ಗ್ರಾಸವಾಗಿತ್ತು. ಬೀದಿನಾಯಿಗಳಿಗೆ ಬಲಿಯಾದ ಮಗುವಿನ ಬಗ್ಗೆ ಎಲ್ಲರೂ ಕಾಳಜಿ ವ್ಯಕ್ತಪಡಿಸುತ್ತಿದ್ದ ಸಂದರ್ಭದಲ್ಲಿ ಪ್ರಾಣಿ ಪ್ರೇಮಿ ರಶ್ಮಿ, ಆ ನಾಯಿಗಳಿಗೆ ಸರಿಯಾದ ಆಶ್ರಯ, ಆಹಾರದ ವ್ಯವಸ್ಥೆ ಮಾಡಬೇಕು ಎಂದಿದ್ದರು. ಇದು ನೆಟ್ಟಿಗರನ್ನು ಕೆರಳಿಸಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist