ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ನಟಿ ಪೂನಂ ಕೌರ್ ಕೈ ಹಿಡಿದು ನಡೆದ ರಾಹುಲ್ ಗಾಂಧಿ; ತಾತನ ಪರಂಪರೆ ಮುದುವರಿಕೆ ಎಂದ ಬಿಜೆಪಿ..! ಬಿಜೆಪಿಯ ನಾಯಕಿಯ ವ್ಯಂಗ್ಯ ಟ್ವೀಟ್ ವಿರುದ್ದ ಆಕ್ರೋಶ

Twitter
Facebook
LinkedIn
WhatsApp
ನಟಿ ಪೂನಂ ಕೌರ್ ಕೈ ಹಿಡಿದು ನಡೆದ ರಾಹುಲ್ ಗಾಂಧಿ; ತಾತನ ಪರಂಪರೆ ಮುದುವರಿಕೆ ಎಂದ ಬಿಜೆಪಿ..! ಬಿಜೆಪಿಯ ನಾಯಕಿಯ ವ್ಯಂಗ್ಯ ಟ್ವೀಟ್ ವಿರುದ್ದ ಆಕ್ರೋಶ

ದೆಹಲಿ: ತೆಲಂಗಾಣದಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ನಟಿ ಪೂನಂ ಕೌರ್  ಅವರ ಕೈ ಹಿಡಿದಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ವಿವಿಧ ರೀತಿಯ ಕಾಮೆಂಟ್​ಗಳನ್ನು ಮಾಡಲಾಗುತ್ತಿದೆ. ಫೋಟೋವನ್ನು ಟ್ವಿಟರ್​ನಲ್ಲಿ ಹಂಚಿಕೊಂಡ ಬಿಜೆಪಿಯ ಪ್ರೀತಿ ಗಾಂಧಿ, “ಅವರ ಮುತ್ತಜ್ಜನ ಹೆಜ್ಜೆಗಳನ್ನು ಅನುಸರಿಸುತ್ತಿದ್ದಾರೆ” ಎಂದು ಹೇಳಿದ್ದರು. ಇದಕ್ಕೆ ಪ್ರತಿಟ್ವೀಟ್ ಮಾಡಿದ ಪೂನಂ ಕೌರ್, “ಇದು ನಿಮಗೆ ಸಂಪೂರ್ಣವಾಗಿ ಅವಮಾನಕರವಾಗಿದೆ, ಪ್ರಧಾನಿ ನಾರಿಶಕ್ತಿ ಬಗ್ಗೆ ಮಾತನಾಡಿದ್ದು ನೆನಪಿರಲಿ” ಎಂದು ಹೇಳಿದ್ದಾರೆ. ಇನ್ನು ಕಾಂಗ್ರೆಸ್​ನ ಜೈರಾಮ್ ರಮೇಶ್ ಅವರು ವಿಕೃತ ಮತ್ತು ಅನಾರೋಗ್ಯದ ಮನಸ್ಸು ಎಂದು ಪ್ರೀತಿ ಗಾಂಧಿಯನ್ನು ಜರಿದಿದ್ದಾರೆ.

ಇನ್ನು ಪ್ರೀತಿ ಗಾಂಧಿಯ ಟೀಕೆಯನ್ನು ಸಕಾರಾತ್ಮಕವಾಗಿ ತೆಗೆದುಕೊಂಡ ಕಾಂಗ್ರೆಸ್ ಪಕ್ಷದ ವಕ್ತಾರ ಸುಪ್ರಿಯಾ ಶ್ರಿನಾಟೆ, “ರಾಹುಲ್ ಗಾಂಧಿ ಅವರು ನಿಜವಾಗಿಯೂ ತಮ್ಮ ಅಜ್ಜನ ಹಾದಿಯಲ್ಲಿ ಸಾಗುತ್ತಿದ್ದಾರೆ ಮತ್ತು ದೇಶವನ್ನು ಒಗ್ಗೂಡಿಸಿದ್ದಾರೆ” ಎಂದರು. ಕಾಂಗ್ರೆಸ್ ಮುಖಂಡ ಪವನ್ ಖೇರಾ, “ನಿಮಗೆ ಚಿಕಿತ್ಸೆಯ ಅಗತ್ಯವಿದೆ, ನಿಮ್ಮ ಮಾನಸಿಕ ಸ್ಥಿತಿಯು ನಿಮ್ಮ ಕುಟುಂಬ ಮತ್ತು ಸ್ನೇಹಿತರಿಗೆ ಹಾನಿಕಾರಕವಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ.

ಬಿಜೆಪಿಯ ಪ್ರೀತಿ ಗಾಂಧಿ ಅವರು ಮಹಿಳೆಯರನ್ನು ಈ ಮಟ್ಟಕ್ಕೆ ದೂಡುವ ಸಿದ್ಧಾಂತದ ಬಲಿಪಶು ಎಂದು ಕಾಂಗ್ರೆಸ್ ಸಂಸದೆ ಜೋತಿಮಣಿ ಹೇಳಿದ್ದಾರೆ. “ಆಳವಾಗಿ ಬೇರೂರಿರುವ ದ್ವೇಷದಿಂದ ನಿಮ್ಮಂತಹ ಜನರನ್ನು ರಕ್ಷಿಸಲು ರಾಹುಲ್ ಗಾಂಧಿ ನಿಖರವಾಗಿ ಅದೇ ಆರ್​ಎಸ್​ಎಸ್​ ಸಿದ್ಧಾಂತದ ವಿರುದ್ಧ ನಡೆಯುತ್ತಿದ್ದಾರೆ. ದಯವಿಟ್ಟು ಬನ್ನಿ ಮತ್ತು ನಮ್ಮೊಂದಿಗೆ ಒಂದು ದಿನ ನಡೆಯಿರಿ. ನೀವು ಉತ್ತಮವಾಗುತ್ತೀರಿ” ಎಂದು ಟ್ವೀಟ್ ಮಾಡಿದ್ದಾರೆ.

ತೆಲಂಗಾಣದ ನೇಕಾರರೊಂದಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂವಾದ ನಡೆಸುತ್ತಿದ್ದಂತೆ ನಟಿ ಪೂನಂ ಕೌರ್ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡು ರಾಹುಲ್ ಗಾಂಧಿಯೊಂದಿಗೆ ಹೆಜ್ಜೆ ಹಾಕಿದರು. “ಮಹಿಳೆಯರ ಬಗ್ಗೆ ಅವರ ಕಾಳಜಿ, ಗೌರವ ಮತ್ತು ರಕ್ಷಣಾತ್ಮಕ ಸ್ವಭಾವವು ನನ್ನ ಹೃದಯವನ್ನು ಮುಟ್ಟಿದೆ. ನೇಕಾರರ ಸಮಸ್ಯೆಗಳನ್ನು ಆಲಿಸಿದ್ದಕ್ಕಾಗಿ ನೇಕಾರರ ತಂಡದೊಂದಿಗೆ ನಾನು ರಾಹುಲ್ ಗಾಂಧಿ ಅವರಿಗೆ ಹೃತ್ಪೂರ್ವಕವಾಗಿ ಧನ್ಯವಾದಗಳು” ಎಂದು ಪೂನಂ ಕೌರ್ ಟ್ವೀಟ್ ಮಾಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist