ಭಾನುವಾರ, ಮೇ 5, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಟಿ ಮೀನಾ ಜೊತೆ ಧನುಷ್ ಮದುವೆ; ಸ್ಪೋಟಕ ಹೇಳಿಕೆ ನೀಡಿದ ಕಾಲಿವುಡ್ ನಟನಿಗೆ ಅಭಿಮಾನಿಗಳ ತರಾಟೆ

Twitter
Facebook
LinkedIn
WhatsApp
amazon 1

ಕಾಲಿವುಡ್ ಸ್ಟಾರ್ ನಟ ಧನುಷ್ ಮತ್ತೆ ಮದುವೆಯಾಗುತ್ತಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿದೆ. ಸೌತ್ ಸಿನಿ ರಂಗದ ಖ್ಯಾತ ನಟಿ ಮೀನಾ ಅವರನ್ನು ಕೈ ಹಿಡಿಯುತ್ತಿದ್ದಾರೆ ಎನ್ನುವ ಸುದ್ದಿ ಕಾಲಿವುಡ್‌ ಅಂಗಳದಲ್ಲಿ ಗುಲ್ಲಾಗಿದೆ. ಅಷ್ಟಕ್ಕೂ ಈ ಸುದ್ದಿ ವೈರಲ್ ಆಗಲು ಕಾರಣ ಕಾಲಿವುಡ್ ನಟ ಬೈಲ್ವಾನ್ ರಂಗನಾಥನ್ ಹೇಳಿಕೆ. ಹೌದು ಇತ್ತೀಚೆಗೆ ಬೈಲ್ವಾನ್ ರಂಗನಾಥನ್ ಸಂದರ್ಶನವೊಂದರಲ್ಲಿ ಧನುಷ್ ಮತ್ತು ಮೀನಾ ಇಬ್ಬರೂ ಸದ್ಯದಲ್ಲೇ ಮದುವೆಯಾಗುತ್ತಿದ್ದಾರೆ ಎಂದು ಸ್ಪೋಟಕ ಹೇಳಿಕೆ ನೀಡಿದ್ದರು. ಈ ಮಾತು ಈಗ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ, ಅಲ್ಲದೇ ರಂಗನಾಥನ್ ವಿರುದ್ಧ ಅಭಿಮಾನಿಗಳು ಕಿಡಿಕಾರುತ್ತಿದ್ದಾರೆ. ಧನುಷ್ ವಿಚ್ಛೇದನ ಮತ್ತು ಮೀನಾ ಅವರ 2ನೇ ಮದುವೆ ವಿಚಾರ ಬಂದಾಗ ರಂಗನಾಥನ್ ಇಬ್ಬರೂ ಮದುವೆ ಆಗಲಿದ್ದಾರೆ ಎಂದು ಹೇಳಿ ವಿವಾದ ಮೈ ಮೇಲೆ ಎಳೆದುಕೊಂಡಿದ್ದಾರೆ. 

Dhanush And Meena To Get Married? Bayilvan Ranganathan Latest Revelation  Goes Viral And Trending - Malayalam Filmibeat

ನಟ ರಂಗನಾಥನ್ ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಅಭಿಮಾನಿಗಳು ರಂಗನಾಥನ್ ವಿರುದ್ಧ ಮುಗಿಬಿದ್ದಿದ್ದಾರೆ. ಯಾವಾಗಲೂ ವಿವಾದಾತ್ಮಕ ಹೇಳಿಕೆಗಳನ್ನು ನೀಡಿ ಸುದ್ದಿಯಲ್ಲಿರುವ ರಂಗನಾಥನ್ ಈಗ ಮೀನಾ ಮತ್ತು ಧನುಷ್ ಬಗ್ಗೆ ಹೇಳಿಕೆ ನೀಡಿ ಮತ್ತೆ ಅವಾಂತರ ಸೃಷ್ಟಿಸಿಕೊಂಡಿದ್ದಾರೆ. ಅಷ್ಟಕ್ಕೂ ರಂಗನಾಥ್ ಹೇಳಿದ್ದೇನು? 

ಇಬ್ಬರೂ ನಲವತ್ತರ ಆಸುಪಾಸಿನವರು. ಇಬ್ಬರಿಗೂ ಏಕಾಂಗಿಯಾಗಿ ಜೀವನ ನಡೆಸುತ್ತಿದ್ದಾರೆ. ಹಾಗಾಗಿ ಇಬ್ಬರೂ ಹೊಸ ಬದುಕು ಕಟ್ಟಿಕೊಳ್ಳುವುದರಲ್ಲಿ ತಪ್ಪೇನಿಲ್ಲ. ಈ ಜೂನ್ ನಲ್ಲಿ ಅವರು ಮದುವೆಯಾಗಬಹುದು. ಒಂದು ವೇಳೆ ಅವರು ಮದುವೆಯಾಗದಿದ್ದರೂ ಒಟ್ಟಿಗೆ ವಾಸಿಸಬಹುದು’ ಎಂದು ಬೈಲ್ವಾನ್ ರಂಗನಾಥನ್ ಹೇಳಿಕೆ ನೀಡಿದ್ದಾರೆ. ರಂಗನಾಥ್ ಹೀಗೆ ಹೇಳುತ್ತಿದ್ದಂತೆ ಧನುಷ್ ಅಭಿಮಾನಿಗಳು ರೊಚ್ಚಿಗೆದ್ದಿದ್ದಾರೆ. ಹಿಗ್ಗಾಮುಗ್ಗಾ ಟ್ರೋಲ್ ಮಾಡುತ್ತಿದ್ದಾರೆ.  

Netizens Slam Bayilvan Ranganathan After He Opens Up About Meena And Dhanush  Marriage Goes Viral - Malayalam Filmibeat

‘ಇಂಥ ಹೇಳಿಕೆ ನೀಡುವ ಮೂಲಕ ಇತರರ ವೈಯಕ್ತಿಕ ವಿಚಾರಗಳಲ್ಲಿ ಹಸ್ತಕ್ಷೇಪ ಮಾಡುವ ರಂಗನಾಥನ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು’ ಒತ್ತಾಯ ಕೇಳಿ ಬರುತ್ತಿದೆ. ‘ಮೊದಲು ಇಂಥ ವಿಚಾರಗಳನ್ನು ಮಾತನಾಡುವುದನ್ನು ನಿಲ್ಲಿಸು, ಇನ್ನೊಬ್ಬರ ಜೀವನದಲ್ಲಿ ಹಸ್ತಕ್ಷೇಪ ಮಾಡುವುದನ್ನು ನಿಲ್ಲಿಸು’ ಎಂದು ಎಚ್ಚರಿಕೆ ನೀಡುತ್ತಿದ್ದಾರೆ. ಸಿನಿಮಾ ಸ್ಟಾರ್‌ಗಳ ವಿರುದ್ಧ ಅಪಪ್ರಚಾರ ಮಾಡುವುದು ಇದೆ ಮೊದಲಲ್ಲ. ಈ ಮೊದಲು ಸಹ ಅನೇಕ ಬಾರಿ ರಂಗನಾಥನ್ ಇಂಥ ಹೇಳಿಕೆಗಳನ್ನು ನೀಡಿ ವಿವಾದಕ್ಕೆ ಸಿಲುಕಿದ್ದಾರೆ.  

ಪತ್ನಿಗೆ ವಿಚ್ಛೇದನ ನೀಡಿರುವ ಧನುಷ್ 

May be an image of 1 person, standing and indoor

ನಟ ಧನುಷ್ ಮತ್ತು ಐಶ್ವರ್ಯಾ ದಂಪತಿ ಬೇರೆ ಬೇರೆಯಾಗಿ ಅನೇಕ ತಿಂಗಳುಗಳೇ ಕಳೆದಿವೆ. ಕಳೆದ ವರ್ಷ ಇಬ್ಬರೂ ಬೇರೆ ಬೇರೆ ಆಗುತ್ತಿರುವ ಬಗ್ಗೆ ಬಹಿರಂಗ ಪಡಿಸುವ ಮೂಲಕ ಅಭಿಮಾನಿಗಳಿಗೆ ಶಾಕ್ ನೀಡಿದ್ದರು. ಈ ಮೂಲಕ ಇಬ್ಬರೂ ತಮ್ಮ 18 ವರ್ಷಗಳ ದಾಂಪತ್ಯ ಜೀವನ ಮುರಿದುಕೊಂಡು ದೂರ ದೂರ ಆದರು. ಸದ್ಯ ಇಬ್ಬರ ವಿಚ್ಛೇದನ ಪ್ರಕರಣ ಕೋರ್ಟ್‌ನಲ್ಲಿದೆ. 

ಪತಿಯನ್ನು ಕಳೆದುಕೊಂಡಿರುವ ಮೀನಾ  

May be a close-up of 1 person and standing

ನಟಿ ಮೀನಾ ಇತ್ತೀಚಿಗಷ್ಟೆ ಪತಿಯನ್ನು ಕಳೆದುಕೊಂಡರು. ಮೀನಾ ಪತಿ ಸಾಗರ್ ಕಳೆದ ಕೆಲವು ತಿಂಗಳ ಹಿಂದೆಯಷ್ಟೆ ನಿಧನ ಹೊಂದಿದರು. ಪತಿಯನ್ನು ಕಳೆದುಕೊಂಡು ಏಕಾಂಗಿಯಾಗಿ ಜೀವನ ನಡೆಸುತ್ತಿರುವ ಮೀನಾ ಬಗ್ಗೆ ಇತ್ತೀಚಿಗಷ್ಟೆ 2ನೇ ಮದುವೆ ವದಂತಿ ವೈರಲ್ ಆಗಿತ್ತು. ಆದರೆ ಈ ಸುದ್ದಿಯನ್ನು ತಳ್ಳಿಹಾಕಿದ್ದರು. ಆದರೀಗ ಮೀನಾ ಮತ್ತು ಧನುಷ್ ಮದುವೆ ಆಗ್ತಾರೆ ಎಂದು ನಟ ಬೈಲ್ವಾನ್ ರಂಗನಾಥನ್ ಹೇಳಿದ್ದಾರೆ. ಈ ಬಗ್ಗೆ ಮೀನಾ  ಅಥವಾ ಧನುಷ್ ಪ್ರತಿಕ್ರಿಯೆ ನೀಡುತ್ತಾರಾ ಎಂದು ಕಾದುನೋಡಬೇಕಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ