ಸ್ಯಾಂಡಲ್ ವುಡ್ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ(Rakshith Shetty) ಆಗಾಗ, ಪ್ರೀತಿ, ಮದುವೆ ವಿಚಾರವಾಗಿ ಸುದ್ದಿಯಲ್ಲಿರುತ್ತಾರೆ. ಸದ್ಯ ರಕ್ಷಿತ್ 777 ಚಾರ್ಲಿ ಸಿನಿಮಾದ ಬಿಡುಗಡೆ ತಯಾರಿಯಲ್ಲಿದ್ದಾರೆ. ಈಗಾಗಲೇ ಟ್ರೈಲರ್ ರಿಲೀಸ್ ಮಾಡಿದ್ದು ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇದೇ ಖುಷಿಯಲ್ಲಿರುವ ರಕ್ಷಿತ್ಗೆ ಲವ್ ಫೇಲ್ಯೂರ್ ಪ್ರಶ್ನೆ ಎದುರಾಗಿದೆ. ಅಂದಹಾಗೆ ಈ ಪ್ರಶ್ನೆ ಮಾಡಿದ್ದು ಮತ್ಯಾರು ಅಲ್ಲ ಸ್ಯಾಂಡಲ್ ವುಡ್ ಕ್ರೇಜಿ ಸ್ಟಾರ್ ರವಿಚಂದ್ರನ್. ಹೌದು, ನಿರೂಪಕಿ ಅನುಶ್ರೀ ತಮ್ಮ ಯೂಟ್ಯೂಬ್ ವಾಹಿನಿಯಲ್ಲಿ ರಕ್ಷಿತ್ ಮತ್ತು ರವಿಚಂದ್ರನ್(Ravichandran) ಅವರನ್ನು ಸಂದರ್ಶನ ಮಾಡಿದ್ದಾರೆ. ಈ ಸಂದರ್ಶನದಲ್ಲಿ ರವಿಚಂದ್ರನ್, ರಕ್ಷಿತ್ ಅವರಿಗೆ ಲವ್ ಫೇಲ್ಯೂರ್ ಬಗ್ಗೆ ಪ್ರಶ್ನೆ ಮಾಡಿದ್ದಾರೆ.ಸಂದರ್ಶನದಲ್ಲಿ ಒಂದಿಷ್ಟು ಇಂಟ್ರಸ್ಟಿಂಗ್ ವಿಚಾರಗಳನ್ನು ಚರ್ಚೆ ಮಾಡಲಾಗಿದೆ. ಇದರಲ್ಲಿ ಕ್ರೇಜಿ ಸ್ಟಾರ್, ರಕ್ಷಿತ್ ಅವರಿಗೆ ‘ಲವ್ ಫೇಲ್ಯೂರ್ ಆಗಿದ್ರೆ ನಿಮಗೆ, ಅದಕ್ಕೆ ಇವತ್ತು ನೀವು ಸಕ್ಸಸ್ ಆಗಿರುವುದು’ ಎಂದು ಹೇಳಿದ್ದಾರೆ. ಇದಕ್ಕೆ ಉತ್ತರಿಸಿದ ರಕ್ಷಿತ್, ‘ನನ್ನ ಪ್ರಕಾರ ನನಗೆ ಲವ್ ಫೇಲ್ಯೂರ್ ಆಗಿಲ್ಲ. ಆದರೆ ಜಗತ್ತು ಪೂರ್ತಿ ಅದನ್ನು ಲವ್ ಫೇಲ್ಯೂರ್ ಅಂತ ಅಂದ್ಕೊಂಡಿದೆ’ ಎಂದು ಹೇಳಿದ್ದಾರೆ. ಈ ವೇಳೆ ನಿರೂಪಕಿ ಅನುಶ್ರೀ ಸೇರಿದಂತೆ ಅಲ್ಲಿ ಇದ್ದ ಪ್ರೇಕ್ಷಕರು ಸಹ ಜೋರಾಗಿ ನಕ್ಕಿದ್ದಾರೆ.
ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ
ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನೆಟ್ಟಿಬೈಲು ನಿವಾಸಿ ವಿನಾಯಕ ಭಟ್ (32) ಅವರು ತೀವ್ರ ಜ್ವರ ಬಾಧೆಯಿಂದ ಮೃತಪಟ್ಟಿದ್ದಾರೆ. ಅವರು ಸುಮಾರು ಹತ್ತು
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?