ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ನನ್ನ ತಂಟೆಗೆ ಬಂದ್ರೆ ನಿಜವಾದ ಹಾವು ಬಿಡ್ತಿನಿ; ಯತ್ನಾಳ್ ಎಚ್ಚರಿಕೆ

Twitter
Facebook
LinkedIn
WhatsApp
ನನ್ನ ತಂಟೆಗೆ ಬಂದ್ರೆ ನಿಜವಾದ ಹಾವು ಬಿಡ್ತಿನಿ; ಯತ್ನಾಳ್ ಎಚ್ಚರಿಕೆ

ಬೆಳಗಾವಿ: ನಿಮ್ಮ ಬಳಿ ಬಟ್ಟೆಯ ಹಾವಿದ್ದರೆ ನನ್ನ ಬಳಿ ನಿಜವಾದ ಹಾವಿದೆ. ನಮ್ಮ ತಂಟೆಗೆ ಬಂದ್ರೆ ನಿಜವಾದ ಹಾವು ಬಿಡಬೇಕಾಗುತ್ತದೆ. ನಾನು ಯಾರ ಬಳಿಯೂ ಕೋರ್ ಕಮಿಟಿ ಅಧ್ಯಕ್ಷನನ್ನಾಗಿ ಮಾಡಿ, ಕೋರ್ ಕಮಿಟಿ ಸದಸ್ಯನನ್ನಾಗಿ ‌ಮಾಡಿ ಎಂದು ಹೋಗಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹೇಳಿದರು.

ಬೆಳಗಾವಿಯ ಹುಕ್ಕೇರಿಯಲ್ಲಿ ನಡೆದ 2ಎ ಮೀಸಲಾತಿ ಆಗ್ರಹಿಸಿ ಆಯೋಜಿಸಿದ್ದ ಸಮಾವೇಶದಲ್ಲಿ ಅವರು ಮಾತನಾಡಿದ್ದಾರೆ. ಈ ವೇಳೆ ನಾನು ಇಲ್ಲಿ ಟಿಕೆಟ್ ಹಂಚಲು ಬಂದಿಲ್ಲ‌. ಕೋರ್ ಕಮಿಟಿ ಸದಸ್ಯನಾಗಿಯೂ ಬಂದಿಲ್ಲ. ನನ್ನನ್ನು ಏನಾದರೂ ಮಾಡಿ ಅಂತಾ ನಾನು ಯಾರ ಕಾಲಿಗೂ ಬಿದ್ದಿಲ್ಲ. ನಾನು ಕಾಲಿಗೆ ಬಿದ್ದಿದ್ದು ಕೇವಲ ಅಟಲ್ ಬಿಹಾರಿ ವಾಜಪೇಯಿಯವರಿಗೆ ಮಾತ್ರ. ನಾವು ಗೂಟ ಇಟ್ಟರೆ ವಾಪಸ್ ಸುಧಾರಿಸಿಕೊಳ್ಳಲು ನಿಮ್ಮಿಂದ ಆಗಲ್ಲ. ಪ್ರಧಾನಿಯೇ ಹೇಳ್ತಾರೆ ನಾನು ಒಬ್ಬ ಪ್ರಧಾನ ಸೇವಕ ಅಂತ. ನಾನೂ ಸಹ ಸೇವಕನೇ ಎಂದು ಹೆಸರು ಹೇಳದೇ ಯಡಿಯೂರಪ್ಪ ಹಾಗೂ ಬಿ.ವೈ.ವಿಜಯೇಂದ್ರ ಅವರಿಗೆ ಟಾಂಗ್ ನೀಡಿದರು.

ಬಸನಗೌಡನಿಗೆ ಯಾವುದೇ ಸೀಟು ಬರಬಾರದು ಎಂದು ಹಣ ಹಂಚಲಾಗುತ್ತಿದೆ. ವಿಜಯಪುರದ ಮಹಾನಗರ ಪಾಲಿಕೆ ಚುನಾವಣೆಗೆ ಬೆಂಗಳೂರಿನಿಂದ ಹಣ ಬರುತ್ತಿದೆ. ಮುಧೋಳದ ಸಕ್ಕರೆ ಕಾರ್ಖಾನೆ ನಡೆಸುವವ ಒಬ್ಬ ರೊಕ್ಕ ಕಳುಹಿಸುತ್ತಿದ್ದಾನೆ ಎಂದರು. ಇಂದು ಎಸ್ಪಿಯಿಂದ ಮುಖ್ಯಮಂತ್ರಿಗಳಿಗೆ ಮೆಸೇಜ್ ಹೋಗುತ್ತದೆ‌. ಎಷ್ಟು ಜನ ಸೇರಿದ್ದರು. ಯತ್ನಾಳ್ ಏನು ಮಾತಾಡಿದ್ರು, ಅವನನ್ನು ತೆಗೆಯಲಿಕ್ಕೆ ಏನು ಮಾಡಬೇಕು ಎಂಬೆಲ್ಲ ಮಾಹಿತಿಗಳು ಸಿಎಂಗೆ ಹೋಗುತ್ತವೆ.

ಕೆಲ ಪತ್ರಕರ್ತರು, ಯೂಟ್ಯೂಬ್ ಚಾನಲ್ನವರೂ ಸಹ ನನ್ನ ಹಿಂದೆ ಬಿದ್ದಿದ್ದಾರೆ. ನಾನು ಮಂತ್ರಿ ಆಕಾಂಕ್ಷಿ ಅಂತ ಯಾರೂ ಬರೆಯಬೇಡಿ. ನನಗೆ ಮಂತ್ರಿ ಸ್ಥಾನ ಬೇಡ. ಯಾರ ಕಾಲಿಗೂ ಬೀಳದವರು ಮೊನ್ನೆ ನಮ್ಮ ಸ್ವಾಮೀಜಿ ಕಾಲಿಗೆ ಬಿದ್ದಿದ್ದಾರೆ. ಯಾರ ಕಾಲಿಗೂ ಬಿದ್ದಿಲ್ಲ ಸರ್ ಅವರು ಅಂತ ನಮಗೆ ಒಬ್ಬರು ಅಂದಿದ್ರು. ಆದ್ರೆ, ಈಗ ಎಲ್ಲರೂ ಕಾಲಿಗೆ ಬೀಳುತ್ತಿದ್ದಾರೆ ಎಂದರು.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ

ಈ ಹಿಂದೆಯೂ ಯತ್ನಾಳ್, ವಿಜಯೇಂದ್ರ ವಿರುದ್ಧ ಕಿಡಿಕಾರಿದ್ದರು. ಬಿಜೆಪಿಯಲ್ಲಿ ಸಿಎಂ ಆಗಲು ರೂ. 2500 ಕೋ. ಹಣ ನೀಡಬೇಕು ಎಂದು ತಾವು ಈ ಹಿಂದೆ ನೀಡಿರುವ ಹೇಳಿಕೆಯ ಕುರಿತು ಕೇಳಲಾದ ಪ್ರಶ್ನೆಗೆ ಗರಂ ಆಗಿದ್ದ ಶಾಸಕರು, ನಾನು ಅಂದು ಹೇಳಿರುವ ವಿಚಾರದ ವಿಡಿಯೋವನ್ನು ಮಾಧ್ಯಮಗಳು ತಿರುಚಿ ಪ್ರಸಾರ ಮಾಡಿವೆ. ಅವುಗಳನ್ನು ಸಂಪೂರ್ಣವಾಗಿ ನೋಡಿ. ಬಿಜೆಪಿ ರಾಜ್ಯ ಉಪಾಧ್ಯಕ್ಷನ ಮಾತು ಕೇಳಿ ಕೆಲವು ಮಾಧ್ಯಮಗಳು ಈ ರೀತಿ ಮಾಡುತ್ತಿರುವುದನ್ನು ಇನ್ನಾದರೂ ಕೈ ಬಿಡಬೇಕು ಎಂದು ಹೇಳಿದ್ದರು.

ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲ ದಲ್ಲಾಳಿಗಳು ಇದ್ದಾರೆ. ದಲ್ಲಾಳಿಗಳು ಎಲ್ಲಾ ಪಕ್ಷದಲ್ಲಿದ್ದಾರೆ. ಅವರು ಯಾವುದೇ ಪಕ್ಷಕ್ಕೆ ಸೀಮಿತವಾಗಿಲ್ಲ. ರಾಮದುರ್ಗದಲ್ಲಿ ಕೆಲ ಟಿಕೆಟ್ ಆಕಾಂಕ್ಷಿಗಳಿದ್ದರು. ದೆಹಲಿಯಲ್ಲಿ ಅವರಿವರನ್ನು ಭೇಟಿ ಮಾಡಿಸುತ್ತೇನೆ. ರೂ. 2 ಕೋ. ರೂ. 3 ಕೋ. ಹಣ ಕೊಡಿ. ಬಿಜೆಪಿ ಟಿಕೆಟ್ ಕೊಡಿಸುತ್ತೇವೆ ಎಂದು ನಮಗೆ ಹೇಳಿದ್ದಾರೆ. ದೆಹಲಿ ಮತ್ತು ಬೆಂಗಳೂರಿನವರು ಹೇಳಿದ್ದಾರೆ ಎಂದು ನನಗೆ ರಾಮದುರ್ಗದಲ್ಲಿ ಹೇಳಿದ್ದರು. ಬಿಜೆಪಿಯಲ್ಲಿ ಅಂಥ ಪದ್ದತಿಯಿಲ್ಲ. ಬಿಜೆಪಿಯಲ್ಲಿ ಕಾರ್ಯಕರ್ತರಿಂದ ಹಿಡಿದು ದಿಲ್ಲಿಗೆ ನೇರ ಸಂಪರ್ಕವಿದೆ. ನಾನು ಮೋದಿ ಅಮೀತ್ ಶಾ ಹಾಗೂ ನಡ್ಡಾ ಅವರನ್ನು ಭೇಟಿಯಾಗಲು ನೇರವಾಗಿ ಹೋಗುತ್ತೇನೆ. ನನಗೆ ದಲ್ಲಾಲಿಗಳ ಅವಶ್ಯಕತೆಯಿಲ್ಲ ಎಂದು ಯತ್ನಾಳ ಹೇಳಿದರು.

ವಿಜಯೇಂದ್ರನ ಮಾತು ಕೇಳಿ ನೀವು ಮತ್ತೆ ಮತ್ತೆ ಅದನ್ನೇ ಕೇಳುತ್ತೀರಿ. ವಿಜಯೇಂದ್ರ ಕೆಲವರಿಗೆ ಎನೋ ಪ್ರಸಾದ ವ್ಯವಸ್ಥೆ ಮಾಡಿರಬೇಕು. ವಿಜಯೇಂದ್ರನ ಮಾತು ಕೇಳಿ ಹೇಗಾದರೂ ಮಾಡಿ ಬಸನಗೌಡನ್ನಾ ಕಂಡೆಮ್ ಮಾಡಬೇಕು. ಕೇಂದ್ರದವರು ರೂ. 2500 ಕೋ. ಕೇಳಿದ್ದಾರೆಂದು ಹೇಳಿ ನನ್ನ ಝೀರೋ ಮಾಡಬೇಕು ಎಂದು ಕೆಲ ಮಧ್ಯಮ ವ್ಯವಸ್ಥಿತ ಪ್ರಚಾರ ಮಾಡಿದ್ದವು. ಸನ್ಮಾನ್ಯ ಶ್ರೀ ಉಪಾಧ್ಯಕ್ಷ ಬಿಜೆಪಿ ವಿಜಯೇಂದ್ರನ ಮುಖಾಂತರ ನನ್ನನ್ನು ಮುಗಿಸಲು ಕೆಲ ಚಾನಲ್ ಗಳು ಪ್ರಯತ್ನ ಮಾಡಿದವು. ವಿಜಯೇಂದ್ರದ ಕೃಪಾರ್ಶಿವಾದದಿಂದ ಅವರು ಮಾಜಿ ಆಗಿದ್ದಾರೆ. ಒಳ್ಳೆಯದನ್ನು ಪ್ರಚಾರ ಮಾಡಿ. ಇವತ್ತಿಗೂ ನನಗೆ ದೆಹಲಿಯಿಂದ ಕೆಲವರು ಕರೆ ಮಾಡುತ್ತಾರೆ ಎಂದು ಕಿಡಿಕಾರಿದ್ದರು.

ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist