ಶುಕ್ರವಾರ, ಏಪ್ರಿಲ್ 26, 2024
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಮ್ಮೂರಿಗೆ ಬಾರ್ ಬೇಡವೆಂದು, ಬಾರನ್ನೇ ಪುಡಿಪುಡಿ ಮಾಡಿದ ಮಹಿಳೆಯರು!

Twitter
Facebook
LinkedIn
WhatsApp
ನಮ್ಮೂರಿಗೆ ಬಾರ್ ಬೇಡವೆಂದು, ಬಾರನ್ನೇ ಪುಡಿಪುಡಿ ಮಾಡಿದ ಮಹಿಳೆಯರು!

ಚಿಕ್ಕಮಗಳೂರು: ನಮ್ಮ ಹಳ್ಳಿಗೆ ಬಾರ್ ಬೇಡ ಎಂದು ಹತ್ತಾರು ಮಹಿಳೆಯರು ಬಾರ್​​ಗೆ ನುಗ್ಗಿ ಅಲ್ಲಿದ್ದ ಕುರ್ಚಿಗಳನ್ನು ಪುಡಿ, ಪುಡಿ ಮಾಡಿ ಧ್ವಂಸ ಮಾಡಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಎಮ್ಮೆದೊಡ್ಡಿ ಸಮೀಪದ ಮುಸ್ಲಾಪುರ ಗ್ರಾಮದಲ್ಲಿ ನಡೆದಿದೆ.
ನಮ್ಮೂರಿಗೆ ಬಾರ್ ಬೇಡ ಅಂತ ಮುಸ್ಲಾಪುರ ಗ್ರಾಮದಲ್ಲಿ ಕಳೆದ ಒಂದೂವರೆ ತಿಂಗಳಿಂದ ಮಹಿಳೆಯರು ಪ್ರತಿಭಟನೆ ನಡೆಸುತ್ತಿದ್ದರು. 

ಬಾರ್ ಓಪನ್ ವಿರುದ್ಧ ಹಳ್ಳಿ ಹೆಂಗಸರೆಲ್ಲಾ ಒಂದಾಗಿ ಗಾಡಿ ಮಾಡಿಕೊಂಡು ಬಂದು ಜಿಲ್ಲಾಧಿಕಾರಿಯವರಲ್ಲಿ, ನಮ್ಮೂರಿಗೆ ಬಾರ್ ಬೇಡ ಅಂತ ಮನವಿ ಮಾಡಿದ್ದರು. ಆದ್ರೆ, ಹಳ್ಳಿ ಹೆಂಗಸರ ಮಾತನ್ನು ಯಾರೂ ಕೇಳಲಿಲ್ಲ. ಈ ಮಧ್ಯೆಯೂ ಬಾರ್ ಓಪನ್ ಮಾಡಲು ಮಾಲೀಕ ಮುಂದಾದ ಹಿನ್ನೆಲೆ ಬಾರ್ ಓಪನ್ ಮಾಡದಂತೆ ಗ್ರಾಮ ಪಂಚಾಯತ್ ನೋಟಿಸ್ ನೀಡಿತ್ತು. ಪೊಲೀಸರು ಬಾರ್ ಓಪನ್ ಮಾಡುವಂತಿಲ್ಲ ಎಂದು ಸೂಚಿಸಿದ್ದರು. ಈ ಮಧ್ಯೆಯೂ ಕಳೆದ ನಾಲ್ಕೈದು ದಿನಗಳಿಂದ ಬಾರ್ ಓಪನ್ ಸಿದ್ಧತೆ ನಡೆದಿತ್ತು. ಬಾಗಿಲು ತೆಗೆಯದೆ ಬಂದವರಿಂದ ಹಣ ಪಡೆದುಕೊಂಡು ಎಣ್ಣೆ ನೀಡುತ್ತಿದ್ದರು. ಸದ್ಯದಲ್ಲೇ ಬಾರ್ ಓಪನ್‍ಗೆ ಮಾಲೀಕ ಕೂಡ ಸಿದ್ಧತೆ ನಡೆಸಿಕೊಂಡಿದ್ದರು. ಹಾಗಾಗಿ, ಹಳ್ಳಿ ಹೆಂಗಸರು ಬಾರ್‍ಗೆ ನುಗ್ಗಿ ಧ್ವಂಸ ಮಾಡಿದ್ದಾರೆ. 

ಕೈಗೆ ಸಿಕ್ಕ ವಸ್ತುಗಳನ್ನ ಪುಡಿ, ಪುಡಿ ಮಾಡಿದ್ದಾರೆ. ಬಾರ್ ಆರಂಭದ ಬಗ್ಗೆ ಪ್ರಶ್ನಿಸಲು ಹೋದ ಮಹಿಳೆಯರ ಮೇಲೆ ಹಲ್ಲೆ ಕೂಡ ಮಾಡಿದ್ದರಂತೆ. ಅವರೇ ಹೊಡೆದು ಅವರೇ ಹೋಗಿ ದೂರು ನೀಡಿದ್ದರಂತೆ. ಆಸ್ಪತ್ರೆಯಲ್ಲಿ ದಾಖಲಾಗಿದ್ದವರನ್ನು ಪೊಲೀಸರು ಏಕಾಏಕಿ ಜೀಪ್‍ನಲ್ಲಿ ತುಂಬಿಕೊಂಡು ಹೋಗಿದ್ದಾರೆಂದು ಸ್ಥಳಿಯರು ಆರೋಪಿಸಿದ್ದಾರೆ. ಬಾರ್ ವಿರುದ್ಧ ಮಹಿಳೆಯರು ರೆಬಲ್ ಆಗಿದ್ದು, ಗಂಡಂದಿರಿಗಾಗಿ, ಮಕ್ಕಳಿಗಾಗಿ, ಭವಿಷ್ಯಕ್ಕಾಗಿ ಬಾರ್ ಬೇಡ ಎಂದು ಉಗ್ರಸ್ವರೂಪ ತಾಳಿದ ಮಹಿಳೆಯರು ಬಾರ್ ಧ್ವಂಸ ಮಾಡಿ ಮತ್ತೆ ಓಪನ್ ಮಾಡಿದ್ರೆ ಬೆಂಕಿ ಇಡ್ತೀವಿ ಅಂತ ಎಚ್ಚರಿಸಿದ್ದಾರೆ.

ನಮಗೆ ಯಾರೂ ಸಪೋರ್ಟ್ ಮಾಡುತ್ತಿಲ್ಲ. ಪೊಲೀಸರು, ರಾಜಕಾರಣಿಗಳು ಎಲ್ಲಾ ಅವರಿಗೆ ಸಪೋರ್ಟ್ ಮಾಡುತ್ತಿದ್ದಾರೆ ನಮಗೆ ನ್ಯಾಯ ಕೊಡಿಸಿ ಅಂತ ಸ್ಥಳೀಯರು ಮನವಿ ಮಾಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು