ಶನಿವಾರ, ಮೇ 4, 2024
ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!-ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನವೆಂಬರ್ 8ರಿಂದ ತರಗತಿ ಆರಂಭ : ಹಿಂದೇಟು ಹಾಕ್ತಿದ್ದಾರೆ ಪೋಷಕರು

Twitter
Facebook
LinkedIn
WhatsApp
ನವೆಂಬರ್ 8ರಿಂದ ತರಗತಿ ಆರಂಭ : ಹಿಂದೇಟು ಹಾಕ್ತಿದ್ದಾರೆ ಪೋಷಕರು

ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಈಗಾಗಲೇ ಪೂರ್ಣ ಪ್ರಮಾಣದಲ್ಲಿ ಶಾಲೆಗಳನ್ನು ಆರಂಭಿಸಿರುವ ರಾಜ್ಯ ಸರಕಾರ ಇದೀಗ ಎಲ್‌ಕೆಜಿ ಹಾಗೂ ಯುಕೆಜಿ ಆರಂಭಕ್ಕೆ ಗ್ರೀನ್‌ಸಿಗ್ನಲ್ ನೀಡಿದೆ. ನವೆಂಬರ್ 8 ರಿಂದ ಎಲ್‌ಕೆಜಿ, ಯುಕೆಜಿ ಭೌತಿಕ ತರಗತಿ ಆರಂಭಕ್ಕೆ ಅವಕಾಶ ಮಾಡಲಾಗಿದೆ. ಈ ಕುರಿತು ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಆದರೆ ಪೋಷಕರು ಮಾತ್ರ ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ.

ರಾಜ್ಯದಲ್ಲಿ ಅಕ್ಟೋಬರ್ 25ರಿಂದ 1ರಿಂದ 5ನೇ ತರಗತಿ ಶಾಲೆ ಆರಂಭವಾಗಿತ್ತು. ಅಲ್ಲದೇ ಅ. 25ರಿಂದ ಅ. 30ರವರೆಗೆ ಅರ್ಧದಿನ ಮಾತ್ರ ತರಗತಿಗಳು ನಡೆದಿತ್ತು. ನವೆಂಬರ್​ 2ರಿಂದ ಪೂರ್ಣಾವಧಿ ತರಗತಿಗಳು ಆರಂಭವಾಗಿದೆ. ಇದೀಗ ಎಲ್‌ಕೆಜಿ, ಯುಕೆಜಿ ಆರಂಭಕ್ಕೂ ರಾಜ್ಯ ಸರಕಾರ ಮುಂದಾಗಿದೆ. ಆದರೆ ಮಕ್ಕಳನ್ನು ತರಗತಿಗೆ ಹಾಜರಾಗಲು ಪೋಷಕರ ಅನುಮತಿ ಪತ್ರವನ್ನು ಕಡ್ಡಾಯಗೊಳಿಸಿದೆ. ಈ ಹಿಂದೆ ಶಾಲೆಗಳನ್ನು ಆರಂಭಿಸಲು ಹೊರಡಿಸಿದ್ದ ಮಾರ್ಗಸೂಚಿಯನ್ನೇ ಸ್ವಲ್ಪ ಮಟ್ಟಿಗೆ ಪರಿಷ್ಕರಣೆ ಮಾಡಲಾಗಿದೆ.

ಶಾಲೆಯಲ್ಲಿ ಶಿಕ್ಷಕರು ಹಾಗೂ ಮಕ್ಕಳು ಮಾಸ್ಕ್‌ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಶಿಕ್ಷಕರು ಎರಡು ಡೋಸ್‌ ಲಸಿಕೆಯನ್ನು ಕಡ್ಡಾಯವಾಗಿ ಪಡೆದುಕೊಂಡಿರಬೇಕು, 50ವರ್ಷ ಮೇಲ್ಪಟ್ಟ ಶಿಕ್ಷಕರು ಫೇಸ್‌ ಶೀಲ್ಡ್‌ ಬಳಕೆ ಮಾಡಬೇಕು. ತರಗತಿ ಕೋಣೆಗಳನ್ನು ಸ್ಯಾನಿಟೈಸ್‌ ಮಾಡಬೇಕೆಂಬ ನಿಯಮವನ್ನು ಜಾರಿಗೆ ತರಲಾಗಿದೆ.
ಅಪಾಯಕ್ಕೆ ಆಹ್ವಾನ ನೀಡಿತಾ ರಾಜ್ಯ ಸರಕಾರ ?
ರಾಜ್ಯದಲ್ಲಿ ಕೊರೊನಾ ವೈರಸ್‌ ಸೋಂಕು ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿಲ್ಲ. ಈಗಾಗಲೇ ಪ್ರಾಥಮಿಕ ಹಂತದಿಂದಲೇ ಶಾಲೆಗಳು ಆರಂಭಗೊಂಡಿವೆ. ಕೆಲವೊಂದು ಶಾಲೆಗಳಲ್ಲಿನ ಮಕ್ಕಳು ಕೊರೊನಾ ವೈರಸ್‌ ಸೋಂಕಿಗೆ ತುತ್ತಾಗುತ್ತಿದ್ದಾರೆ. ಈ ನಡುವಲ್ಲೇ ರಾಜ್ಯ ಸರಕಾರ ತರಾತುರಿಯಲ್ಲಿ ಎಲ್‌ಕೆಜಿ ಹಾಗೂ ಯುಕೆಜಿ ತರಗತಿಗಳನ್ನು ಆರಂಭಿಸಲು ಮುಂದಾಗಿರುವುದು ಪೋಷಕರ ಅಸಮಾಧಾನಕ್ಕೆ ಕಾರಣವಾಗಿದೆ.
ಪುಟಾಣಿ ಮಕ್ಕಳನ್ನು ಕೊರೊನಾ ಭಯದಲ್ಲಿಯೇ ತರಗತಿಗೆ ಕರೆತರಲಾಗುತ್ತಿದೆ. ಮಕ್ಕಳು ಶಾಲೆಗಳಲ್ಲಿ ನಿರಂತರವಾಗಿ ಮಾಸ್ಕ್‌ ಧರಿಸಿಕೊಂಡು ಇರುವುದು ಕಷ್ಟಕರವಾದ ಕೆಲಸ. ಸಣ್ಣ ಮಕ್ಕಳು ಕೊರೊನಾ ಸೋಂಕಿಗೆ ತುತ್ತಾಗುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಮಕ್ಕಳನ್ನು ಶಾಲೆಗೆ ಕಳುಹಿಸಲು ಬಹುತೇಕ ಪೋಷಕರು ಹಿಂದೇಟು ಹಾಕುತ್ತಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು