ಶನಿವಾರ, ಮೇ 11, 2024
ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!-ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಾನು ರುದ್ರಾಕ್ಷಿ ಧರಿಸಿದ್ದೇನೆ, ಮದ್ಯಪಾನ ಮಾಡಲ್ಲ : ನಟಿ ಸಾನ್ಯಾ ಅಯ್ಯರ್

Twitter
Facebook
LinkedIn
WhatsApp
254ad22036ca5b4077247fee364e3843 2

ಪುತ್ತೂರಿನ (Puttur) ಕಂಬಳದಲ್ಲಿ (Kambala) ನಡೆದ ಘಟನೆಗೆ ಸಂಬಂಧಪಟ್ಟಂತೆ ಕಿರುತೆರೆ ನಟಿ ಸಾನ್ಯಾ ಅಯ್ಯರ್ (Sanya Iyer) ಮೇಲೆ ದಿನಕ್ಕೊಂದು ಆರೋಪ ಕೇಳಿ ಬಂದಿದ್ದವು. ಅದಕ್ಕೆ ಸಂಬಂಧಪಟ್ಟಂತೆ ಸ್ವತಃ ಸಾನ್ಯಾ ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ತುರ್ತು ಪತ್ರಿಕಾಗೋಷ್ಠಿ ಕರೆದಿದ್ದ ಅವರು ತಮ್ಮ ಮೇಲಿನ ಆರೋಪಗಳಿಗೆ ಉತ್ತರಿಸಿದ್ದಾರೆ. ಕಂಬಳದ ವೇದಿಕೆಯಲ್ಲೇ ಅವರ ಮೇಲೆ ಹಲ್ಲೆ ಆಯಿತು ಎನ್ನುವುದರ ಜೊತೆಗೆ ಸಾನ್ಯಾ ಮದ್ಯಪಾನ ಮಾಡಿಕೊಂಡು ಬಂದಿದ್ದರು ಎಂದೂ ಹೇಳಲಾಗಿತ್ತು. ಈ ಕುರಿತು ಅವರು ಮಾತನಾಡಿದ್ದಾರೆ.

May be an image of 1 person and standing

‘ಕಂಬಳದಲ್ಲಿ ನಾನು ಕುಡಿದುಕೊಂಡು ಬಂದಿದ್ದೆ ಎಂದು ಹೇಳಲಾಗುತ್ತಿದೆ. ಆದರೆ, ಅದು ಸುಳ್ಳು. ನಾನು ಜೀರೋ ಶುಗರ್ ಡಯೆಟ್ ಮಾಡುತ್ತಿದ್ದೇನೆ. ಮುಂಬೈನಲ್ಲಿ ಶೂಟಿಂಗ್ ಇರುವ ಕಾರಣಕ್ಕಾಗಿ ಇದೆಲ್ಲವನ್ನೂ ಮಾಡುತ್ತಿದ್ದೇನೆ. ಅಂಥದ್ದರಲ್ಲಿ ಮದ್ಯಪಾನ ಹೇಗೆ ಮಾಡಲಿ? ಜೊತೆಗೆ ನಾನು ರುದ್ರಾಕ್ಷಿಯನ್ನು ಧರಿಸಿದ್ದೇನೆ. ಇದನ್ನು ಧರಿಸಿದಾಗ ಮದ್ಯಪಾನ, ಧೂಮಪಾನ ಮಾಡಲ್ಲ. ಸುಮ್ಮನೆ ನನ್ನ ಮೇಲೆ ಆಪಾದನೆ ಹೊರಿಸಲಾಗುತ್ತಿದೆ’ ಎಂದರು ಸಾನ್ಯ. 

May be an image of 2 people, people standing and outdoors

ಪುತ್ತೂರಿನಲ್ಲಿ ನಡೆದ ಕಂಬಳಕ್ಕೆ ನಾನು ಅತಿಥಿಯಾಗಿ ಹೋಗಿದ್ದೆ. ಅವತ್ತು ಕಂಬಳವನ್ನು ಸರಿಯಾಗಿ ನೋಡಲು ಆಗದೇ ಇರುವ ಕಾರಣಕ್ಕಾಗಿ ಮತ್ತೆ ಸ್ನೇಹಿತೆಯರ ಜೊತೆ ಹೋದೆ. ಆಗ ಒಬ್ಬ ಹುಡುಗ ನನ್ನ ಫ್ರೆಂಡ್ಸ್ ಕೈ ಹಿಡಿದು ಎಳೆದ. ಭಯ ಆಯಿತು. ಆನಂತರ ಇದನ್ನು ಆಯೋಜಕರ ಗಮನಕ್ಕೆ ತಂದೆವು. ಆ ಹುಡುಗ ನಂತರ ಎಲ್ಲಿಗೆ ಹೋದ? ಏನಾದ ಎನ್ನುವ ವಿಚಾರ ಗೊತ್ತಿಲ್ಲ. ಆದರೆ, ಸುದ್ದಿ ಆದಂತೆ ಅವನ ಕಪಾಳಕ್ಕೆ ನಾನು ಹೊಡೆಯಲಿಲ್ಲ, ನನಗೂ ಅವನು ಹೊಡೆಯಲಿಲ್ಲ ಎಂದು ಸಾನ್ಯ ಮಾತನಾಡಿದ್ದಾರೆ.

No photo description available.

ತಮ್ಮ ಕಪಾಳಕ್ಕೆ ಆ ಹುಡುಗ ಹೊಡೆದಿದ್ದಾನೆ ಎನ್ನುವ ಸುದ್ದಿ ಹೇಗೆ ಹಬ್ಬಿತೋ ಗೊತ್ತಿಲ್ಲ ಎನ್ನುವ ಸಾನ್ಯಾ, ಅಲ್ಲಿ ಅಂತಹ ಯಾವುದೇ ಘಟನೆ ನಡೆದಿಲ್ಲವೆಂದು ಹೇಳಿದ್ದಾರೆ. ಆದರೆ, ಕಳೆದ ಎರಡು ದಿನಗಳಿಂದ ಈ ಘಟನೆಯ ಕುರಿತು ಬೇರೆಯೇ ಸುದ್ದಿ ಹಬ್ಬಿತ್ತು. ಮದ್ಯ ಸೇವಿಸಿದ್ದ ಯುವಕನೊಬ್ಬ ಸಾನ್ಯಾ ಜೊತೆ ಸೆಲ್ಫಿ ತಗೆದುಕೊಳ್ಳುವ ವಿಚಾರಕ್ಕೆ ಗಲಾಟೆ ಮಾಡಿದ. ಅವನ ಮೇಲೆ ಸಾನ್ಯಾ ಕೈ ಮಾಡಿದರು. ಅವನೂ ಹೊಡೆದ. ನಂತರ ಅಲ್ಲಿದ್ದವರು ಆ ಹುಡುಗನನ್ನು ಥಳಿಸಿದರು ಎನ್ನುವುದು ವರದಿಯಾಗಿತ್ತು. ಇದೀಗ ಅಂಥದ್ದು ಏನೂ ಆಗಿಲ್ಲ ಎಂದಿದ್ದಾರೆ ಸಾನ್ಯ.

No photo description available.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ