ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ನಾವು ಪಾದಯಾತ್ರೆ ಮಾಡುವುದು ನಿಶ್ಚಿತ: ಸಿದ್ದರಾಮಯ್ಯ

Twitter
Facebook
LinkedIn
WhatsApp
ನಿಷೇಧಾಜ್ಞೆ ವಿಧಿಸಿದರೆ ಐದೈದು ಮಂದಿ ಹೋಗಿ ಪಾದಯಾತ್ರೆ ಮಾಡುತ್ತೇವೆ – ಸಿದ್ದರಾಮಯ್ಯ

ಬೆಂಗಳೂರು: ”ನಾವು  ಪಾದಯಾತ್ರೆ ಮಾಡುವುದು ನಿಶ್ಚಿತ, ಈ ಸರ್ಕಾರ ನಮ್ಮ ಮೇಲೆ ಏನು ಕ್ರಮ ಜರುಗಿಸುತ್ತದೋ ಜರುಗಿಸಲಿ. ನಾವು ಎಲ್ಲವನ್ನು ಎದುರಿಸಲು ಸಿದ್ಧರಿದ್ದೇವೆ” ಎಂದು ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಇಂದು ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ”ಬಿಜೆಪಿಯವರು ಅಧಿಕಾರದಲ್ಲಿ ಇದ್ದಾರೆ. ನಾವು ಕೊರೋನ ನಿಯಮಗಳನ್ನು ಅನುಸರಿಸಿಯೇ ಪಾದಯಾತ್ರೆ ಮಾಡುತ್ತೇವೆ. ನಮ್ಮ ಮೇಲೆ ಏನು ಕಾನೂನು ಕ್ರಮ ತೆಗೆದುಕೊಳ್ಳಬೇಕು ಅದನ್ನು ಸರ್ಕಾರ ಮಾಡಲಿ. ನಾವು ಅದನ್ನು ಎದುರಿಸಲು ತಯಾರಾಗಿದ್ದೇವೆ. ನಾವು ಕಾನೂನನ್ನು ಗೌರವಿಸುತ್ತೇವೆ, ಆದರೂ ಅವರು ನಮ್ಮನ್ನು ಬಂಧಿಸುತ್ತಾರೆ ಎಂದರೆ ಬಂಧಿಸಲಿ” ಎಂದರು.
”ಮೇಕೆದಾಟು ಬಳಿ 144 ಸೆಕ್ಷನ್ ಜಾರಿಯಿದೆಯೋ ಇಲ್ಲವೋ ನನಗೆ ಗೊತ್ತಿಲ್ಲ. ಹಾಗೇನಾದರೂ ಜಾರಿ ಮಾಡಿದ್ದರೆ ನಾಲ್ಕೇ ಜನ ಪಾದಯಾತ್ರೆ ಮಾಡ್ತೇವೆ. ನಮ್ಮ ಪಾದಯಾತ್ರೆ ಘೋಷಣೆಯಾಗಿ ಎರಡು ತಿಂಗಳಾಯ್ತು. ವಾರಾಂತ್ಯದ ಲಾಕ್ ಡೌನ್ ಘೋಷಣೆ ಆಗಿದ್ದು ಮೊನ್ನೆ ಮೊನ್ನೆ. ಅದೂ ಅಲ್ಲದೆ ರಾಮನಗರ ಜಿಲ್ಲೆಯಲ್ಲಿ ಮಾತ್ರ 144 ಸೆಕ್ಷನ್ ಯಾಕೆ? ಬೇರೆ ಜಿಲ್ಲೆಯಲ್ಲಿ ಏಕಿಲ್ಲ? ಇದು ಏನಾದರೂ ಮಾಡಿ ಪಾದಯಾತ್ರೆ ತಡೆಯಬೇಕು ಎಂಬ ಅವರ ದುರುದ್ದೇಶವನ್ನು ತೋರಿಸುತ್ತದೆ. ರಾಮನಗರದಲ್ಲಿ ಗೆಸ್ಟ್ ಹೌಸ್ ಗಳು ಸಿಗದಂತೆ ನಿರ್ಬಂಧ ಹೇರಲಾಗಿದೆ. ಇದಕ್ಕೆ ಏನು ಹೇಳಬೇಕು.?” ಎಂದು ಪ್ರಶ್ನಿಸಿದರು.
”ಸರ್ಕಾರದ ಜೊತೆ ಸಂಧಾನ ಮಾಡೋಕೇನಿದೆ? ಈ ಸರ್ಕಾರ ಅಧಿಕಾರಕ್ಕೆ ಬಂದು ಎರಡುವರೆ ವರ್ಷ ಕಳೆದಿದೆ. ಅವತ್ತಿಂದ ಏನು ಮಾಡ್ತಿದ್ದಾರೆ. ಕಾವೇರಿ ಜಲ ವಿವಾದ ಇತ್ಯರ್ಥವಾಗಿದ್ದು 2018ರ ಫೆಬ್ರವರಿಯಲ್ಲಿ. ಅದಾದಮೇಲೆ ತಮಿಳುನಾಡಿಗೆ 177.25 ಟಿಎಂಸಿ ನೀರು ಬಿಡಬೇಕು ಎಂದು ಹೇಳಿದ್ದಾರೆ. ಒಂದು ಸಾಮಾನ್ಯ ವರ್ಷದಲ್ಲಿ ಇಷ್ಟು ನೀರು ಬಿಡೋಣ. ಆದರೆ ಈಗ ಹೆಚ್ಚು ಮಳೆಯಾದ ಕಾರಣ ನೀರು ಸಮುದ್ರಕ್ಕೆ ಹೋಗಿ ವ್ಯರ್ಥವಾಗುತ್ತಿದೆ. ಒಂದು ಜಲಾಶಯ ನಿರ್ಮಾಣ ಮಾಡಿ ವ್ಯರ್ಥವಾಗುವ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕೆ ಬಳಕೆ ಮಾಡಬಹುದು” ಎಂದರು.
”ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಬೊಮ್ಮಾಯಿ ಅವರು ಜಲ ಸಂಪನ್ಮೂಲ ಸಚಿವರಾಗಿದ್ದರು ಆಗ ಯಾಕೆ ಯೋಜನೆ ಜಾರಿ ಮಾಡಿಲ್ಲ..? ಈಗ ಸುಪ್ರೀಂ ಕೋರ್ಟ್, ಕಾವೇರಿ ಜಲ ಪ್ರಾಧಿಕಾರ, ಹಸಿರು ನ್ಯಾಯಾಧೀಕರಣ ಎಲ್ಲಿಯೂ ಯೋಜನೆ ಜಾರಿ ಮಾಡದಂತೆ ತಡೆ ನೀಡಿಲ್ಲ. ಎರಡೂ ಕಡೆ ಬಿಜೆಪಿಯವರ ಸರ್ಕಾರವೇ ಇದೆ, ಅಣೆಕಟ್ಟು ನಿರ್ಮಾಣಕ್ಕೆ ಬೇರಾವ ತೊಂದರೆ ಇದೆ ಹೇಳಲಿ. ಈ ಸರ್ಕಾರ ಪರಿಸರ ಇಲಾಖೆಯ ಅನುಮತಿ ಪಡೆಯಲು ಯಾವತ್ತಾದರೂ ಒತ್ತಾಯ ಮಾಡಿದೆಯಾ? ಒಂದು ಪರಿಸರ ಒಪ್ಪಿಗೆ ಪತ್ರ ಪಡೆಯಲು ಎರಡುವರೆ ವರ್ಷ ಬೇಕಾ..? ಸಿದ್ದರಾಮಯ್ಯ ಅವರ ಸರ್ಕಾರ ಏನೂ ಮಾಡಿಲ್ಲ ಎಂದು ಇದಕ್ಕೆ ರಾಜಕೀಯ ಬಣ್ಣ ಬಳಿಯಲು ನೋಡುತ್ತಿದ್ದಾರೆ. ನಾವಿದ್ದಾಗಲೇ ಯೋಜನೆ ಜಾರಿ ಪ್ರಕ್ರಿಯೆ ಆರಂಭವಾಗಿದ್ದು, ಡಿ.ಪಿ.ಆರ್ ಸಿದ್ಧಪಡಿಸಿ ಕೇಂದ್ರದ ಅನುಮತಿಗೆ ಕಳುಹಿಸಿದ್ದು” ಎಂದರು.
”ಈ ಸರ್ಕಾರ ಏನು ಮಾಡಿದೆ ಹೇಳಲಿ. ತಾವು ಏನನ್ನು ಮಾಡದೆ ನಮ್ಮ ಮೇಲೆ ಆರೋಪ ಮಾಡೋದಕ್ಕೆ ಅರ್ಥ ಇಲ್ಲ. ಹಿಂದೆ ಯಡಿಯೂರಪ್ಪ, ಸದಾನಂಗ ಗೌಡರು, ಜಗದೀಶ್ ಶೆಟ್ಟರ್ ಅವರು ಐದು ವರ್ಷ ಮುಖ್ಯಮಂತ್ರಿ ಆಗಿದ್ದರಲ್ಲ ಆಗೇನು ಮಾಡಿದ್ರು? ಈಗಿನ ಸರ್ಕಾರ ಏನು ಮಾಡಿದೆ? ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
”ಸರ್ಕಾರ ಅನುಮತಿ ನೀಡುತ್ತಾ, ನಮ್ಮ ಬಂಧನ ಮಾಡುತ್ತಾ ಗೊತ್ತಿಲ್ಲ. ಹದಿನೈದು ಜನ ಇದ್ರೂ ಅದು 144 ಸೆಕ್ಷನ್ ನ ಮೀರಿದಂತೆಯೇ ಆಗುತ್ತೆ. ಐದು ಜನಕ್ಕಿಂತ ಜಾಸ್ತಿ ಸೇರಬಾರದು ಎಂದು ನಿಯಮ ಹೇಳುತ್ತೆ. ಹದಿನೈದು ಜನಕ್ಕೆ ಅನುಮತಿ ಏಕೆ? ” ಎಂದರು.
”ಹಿಂದಿನ ಸರ್ಕಾರ ಅದು ಮಾಡಿಲ್ಲ ಇದು ಮಾಡಿಲ್ಲ ಎನ್ನೋಕೆ ಬಿಜೆಪಿ ಅಧಿಕಾರಕ್ಕೆ ಬಂದಿರೋದ? ತಾವೇನು ಮಾಡಿದ್ದಾರೆಂದು ಜನರಿಗೆ ಹೇಳಬೇಕಲ್ವಾ?” ಎಂದು ಪ್ರಶ್ನಿಸಿದರು.
”ಕುಮಾರಸ್ವಾಮಿ ಬಗ್ಗೆ ನಾನು ಮಾತನಾಡಲ್ಲ, ಅವ್ರು ಹತಾಶೆಯಿಂದ ಏನೇನೋ ಹೇಳ್ತಾರೆ, ಅದಕ್ಕೆಲ್ಲ ನಾನು ಉತ್ತರ ಕೊಡಲ್ಲ” ಎಂದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು