ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ನಿಂಬೆ ಹಣ್ಣು ಬಹು ಉಪಯೋಗಿ ಹಣ್ಣಾಗಿದ್ದು ಮಾರುಕಟ್ಟೆಯಲ್ಲಿ ಹೆಚ್ಚು ಬೇಡಿಕೆಯಿದೆ ಈ ತೋಟಗಾರಿಕಾ ಬೆಳೆಯಾದ ನಿಂಬೆಹಣ್ಣನ್ನು ಇಳುವರಿಯೊಂದಿಗೆ ಉತ್ತಮ ಆದಾಯ ಗಳಿಸಬಹದು. ಹೊಸದಾಗಿ ನಿಂಬೆ ಕೃಷಿ ಆರಂಭಿಸುವವರು ಗಿಡ ನಾಟಿಗೆ ಬೀಜದಿಂದ ತಯಾರಿಸಿದ ಗಿಡಗಳನ್ನು ಆಯ್ದುಕೊಳ್ಳುವುದು ಒಳ್ಳೆಯದು. ಮೇ ತಿಂಗಳ ಮೊದಲ ವಾರದಲ್ಲಿ ಗಿಡ ನಾಟಿ ಮಾಡಿದರೆ ಮಳೆ ನೀರಿನ ಬಲದಿಂದ ಉತ್ತಮವಾಗಿ ಬೆಳೆದು ನಿಲ್ಲುತ್ತದೆ. ಬೇಸಿಗೆಯಲ್ಲಿ ಗಿಡ ನೆಟ್ಟರೆ ಬೆಳೆಯುವ ಗಿಡಗಳಿಗೆ ನೀರು ಸಾಲದೆ ವಾತಾವರಣದ ಬಿಸಿಲಿಗೆ ಗಿಡ ಹೊಂದಿಕೊಳ್ಳದೆ ಬೆಳವಣಿಗೆ ಕುಂಠಿತಗೊಳ್ಳುತ್ತದೆ. ಇಳುವರಿಯಲ್ಲಿ ವ್ಯತ್ಯಯವಾಗುತ್ತದೆ. ಗಿಡಗಳ ಆಯಸ್ಸು ಕ್ಷಿಣಿಸುತ್ತದೆ. ಗಿಡ ಹಚ್ಚಿದ ನಂತರ ಬುಡವನ್ನು ಬಿಡಿಸಿಕೊಡಬೇಕು. ಒಣಗಿದ ಗೆಲ್ಲುಗಳನ್ನು ತೆಗೆದುಬಿಡಬೇಕು. ಗಿಡಗಳಿಂದ ಇಳುವರಿ ಪಡೆಯಲುಮೂರು ವರ್ಷ ಕಾಯಬೇಕು. ಈ ಸಂದರ್ಭ ಆ ಭೂಮಿಯಲ್ಲಿ ಉತ್ಪಾದನೆ ಪಡೆಯಲು ಅಂತರ ಬೇಸಾಯವಾಗಿ ಪಪ್ಪಾಯ, ನುಗ್ಗೆ ಕೃಷಿ ಮಾಡಿದರೆ ಉತ್ತಮ
ಲಿಂಬೆಯನ್ನು ಇತರ ಬಹುವಾರ್ಷಿಕ ಬೆಳೆಗಳಲ್ಲಿ ಅಂತರ ಬೆಳೆಯಾಗಿ ಬೆಳೆಯಬಹುದಾಗಿದೆ . ತೆಂಗಿನ ತೋಟದಲ್ಲಿ ಲಿಂಬೆಯನ್ನು ಅಂತರ ಬೆಳೆಯಾಗಿ ಅಳವಡಿಸಬಹುದಾಗಿದೆ . ಎರಡು ತೆಂಗಿನ ಸಾಲುಗಳ ಮಧ್ಯೆ ಬಿಸಿಲು ಸಾಕಷ್ಟು ಬೀಳುವಲ್ಲಿ ಲಿಂಬೆಗಿಡಗಳನ್ನು ಬೆಳೆಸಬಹುದಾಗಿದೆ . ಇದೇ ರೀತಿ ಲಿಂಬೆಯನ್ನು ಕಾಫಿ ಮತ್ತು ಸಪೋಟ ತೋಟಗಳಲ್ಲಿ ಅಂತರ ಬೆಳೆಯಾಗಿ ಬೆಳೆಸಬಹುದಾಗಿದೆ .
ಚೆನ್ನಾಗಿ ನೀರು ಬಸಿದು ಹೋಗುವಂತಹ 2-3 ಮೀ . ( 8-10 ಅಡಿ ) ಆಳವಿರುವ ಗೋಡು ಮಣ್ಣು ಪ್ರದೇಶಗಳನ್ನು ಈ ಬೆಳೆಗಳಿಗೆ ಆಯ್ಕೆ ಮಾಡಬೇಕು . ಲಿಂಬೆಗೆ ತೇವಾಂಶಯುಕ್ತ ಉಷ್ಣ ಹವಾಗುಣ ಸೂಕ್ತ . ಕಡಿಮೆ ತಾಪಮಾನ ಮತ್ತು ಬಿರುಗಾಳಿ ಬೀಸುವ ಪ್ರದೇಶಗಳು ಸೂಕ್ತವಲ್ಲ . ಒಣಹವೆಯಲ್ಲಿ ಇದು ಚೆನ್ನಾಗಿ ಬರುತ್ತದೆ . ಜೂನ್ – ಆಗಸ್ಟ್ ತಿಂಗಳುಗಳು ನಾಟಿಗೆ ಸಕಾಲ. ಸಸಿ ಬೆಳೆಸಲು ಬೇಕಾಗುವ ಬಿತ್ತನೆ ಬೀಜ ಪಡೆಯಲು ದೊಡ್ಡದಾದ ರಸಭರಿತ ತೆಳು ಸಿಪ್ಪೆಯ ಹಣ್ಣುಗಳನ್ನು ಆಯ್ಕೆ ಮಾಡಬೇಕು .ಸಾವಯುವ ಗೊಬ್ಬರವನ್ನು ಒಂದು ಸಸಿಗೆ ಪ್ರಾರಂಭದಲ್ಲಿ 5 ಕೆಜಿ ಕೊಡಬೇಕು ನಂತರ ವರ್ಷದಲ್ಲಿ ಜ್ಯಾಸ್ತಿ ಮಾಡಿಕೊಳ್ಳುತ್ತ ಹೋಗಬೇಕು. ಅಂದರೆ ವರ್ಷ ವರ್ಷ ೫ ಕೆಜಿ ಹೆಚ್ಚು ಮಾಡಿಕೊಳ್ಳುತ್ತಾ ಹೋಗಬೇಕು,
ನಿಂಬೆ ಗಿಡಗಳು ನಾಟಿ ಮಾಡಿದ ಮೂರು ವರ್ಷಕ್ಕೆ ಇಳುವರಿ ನೀಡಲು ಆರಂಭಿಸುತ್ತದೆ. ಸುಲಭ ನಿರ್ವಹಣೆಯಿಂದ ಉತ್ತಮ ಇಳುವರಿ ಪಡೆಯಬಹುದು. ಗಿಡಗಳಿಗೆ ಡ್ರಿಪ್ ಮೂಲಕ ನೀರು ಹಾಯಿಸಿಬೇಕು. ಗಿಡದ ಬುಡದಿಂದ ಮೂರು ಅಡಿ ಸುತ್ತಳತೆಯಲ್ಲಿ ಹನಿಹನಿಯಾಗಿ ನೀರು ಬೀಳುವಂತೆ ಮಾಡಬೇಕು. ಹನಿ ನೀರುಣ್ಣುವನಿಂಬೆ ಗಿಡಗಳು ಭರ್ತಿ ಫಸಲನ್ನು ಹೊತ್ತು ನಿಲ್ಲುತ್ತವೆ.
ಒಂದು ತಿಂಗಳಲ್ಲಿ 70ರಿಂದ 400 ರೂ.ಗೆ ನಿಂಬೆ ಹಣ್ಣಾಗಿದೆ. ತರಕಾರಿ ಮಾರಾಟಗಾರರು 1 ನಿಂಬೆ ಹಣ್ಣನ್ನು 10 ರೂ.ಗೆ ನೀಡುತ್ತಿದ್ದಾರೆ.ವಿವಿಧ ರಾಜ್ಯಗಳಲ್ಲಿ ರೈತರು ವಿವಿಧ ತಳಿಯ ನಿಂಬೆಯನ್ನು ಬೆಳೆಯುತ್ತಾರೆ. ನಿಂಬೆ ಗಿಡವನ್ನು ಒಮ್ಮೆ ನೆಟ್ಟರೆ 10 ವರ್ಷಗಳವರೆಗೆ ಇಳುವರಿ ಪಡೆಯಬಹುದು . ನಿಂಬೆ ಗಿಡವು ಸುಮಾರು 3 ವರ್ಷಗಳ ನಂತರ ಚೆನ್ನಾಗಿ ಬೆಳೆಯುತ್ತದೆ. ಇದರ ಸಸ್ಯಗಳು ವರ್ಷವಿಡೀ ಇಳುವರಿಯನ್ನು ನೀಡುತ್ತವೆ.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್ Twitter Facebook LinkedIn WhatsApp ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?